• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣಿವೆಯಲ್ಲಿ ಕೇಂದ್ರ ಸರ್ಕಾರದ ಎಫೆಕ್ಟ್: ದಶಕದಲ್ಲೇ ಅಮರನಾಥ ಯಾತ್ರಿಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆ

TNN Correspondent Posted On June 27, 2018
0


0
Shares
  • Share On Facebook
  • Tweet It

ದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ಬಿಗಿ ಭದ್ರತಾ ಕ್ರಮಗಳ ಮೇಲೆ ದೇಶದ ಜನರ ವಿಶ್ವಾಸ ಇಮ್ಮಡಿಯಾಗಿದ್ದು, ಅದಕ್ಕೆ ಸಾಕ್ಷಿಯಾಗಿ ಪ್ರಸಕ್ತ ಸಾಲಿನಲ್ಲಿ ಕಳೆದ ದಶಕದಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಮರನಾಥ ಯಾತ್ರೆಗೆ ಹೋಗಲು ಸಿದ್ಧರಾಗಿದ್ದಾರೆ ಎಂಬ ಶುಭ ಸುದ್ದಿ ಹೊರ ಬಿದ್ದಿದೆ.

ಅಮರನಾಥ ಯಾತ್ರೆಗೆ ಹೋಗುವ ಯಾತ್ರಿಕ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಜೂನ್ 28ಕ್ಕೆ ಅಮರನಾಥ ಯಾತ್ರೆಗೆ 2,11,994 ಜನರು ನೋಂದಣಿ ಮಾಡಿಕೊಂಡಿದ್ದಾರೆ. ಬ್ಯಾಂಕ್ ಗಳ ಮೂಲಕ ನೇರವಾಗಿ ನೋಂದಣಿ ಮಾಡಿಕೊಂಡಿದ್ದು, ಹೆಲಿಕಾಪ್ಟರ್ ಪ್ರಯಾಣಕ್ಕೂ ಬಹುತೇಕ ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಮ್ಮು ಕಾಶ್ಮೀರ ರಾಜ್ಯಪಾಲ ಎನ್ ಎನ್ ವೋವ್ರಾ ನೇತೃತ್ವದಲ್ಲಿ ನಡೆದ ಸಭೆ ನಂತರ ಅಧಿಕಾರಿಗಳು ಈ ಮಾಹಿತಿ ಹೊರ ಹಾಕಿದ್ದಾರೆ.

ಮಾರ್ಚ್ 1ರಂದು ನೋಂದಣಿ ಕಾರ್ಯ ಆರಂಭವಾಗಿತ್ತು. ಪಂಜಾಬ್ ನ್ಯಾಷನಲ್ ಬ್ಯಾಂಕ್, ಜಮ್ಮು ಆ್ಯಂಡ್ ಕಾಶ್ಮೀರ ಬ್ಯಾಂಕ್ ಮತ್ತು ವಾಯ್ ಇಎಸ್ ಬ್ಯಾಂಕ್ ನ ಬ್ರ್ಯಾಂಚಸ್ ಗಳ ಮೂಲಕ ದೇಶದ 32 ರಾಜ್ಯಗಳಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು ಎಂದು ರಾಜ್ಯಪಾಲರ ಕಚೇರಿ ವಕ್ತಾರ ತಿಳಿಸಿದ್ದಾರೆ. ಪ್ರತಿದಿನ 1,200 ಜನರು ನೋಂದಣಿ ಮಾಡಿಕೊಂಡಿದ್ದು, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಮಧ್ಯಪ್ರದೇಶ, ಗುಜರಾತ್, ದೆಹಲಿ, ರಾಜಸ್ಥಾನ ಮತ್ತು ಹರ್ಯಾಣದಿಂದ ಹೆಚ್ಚಿನ ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಯಾತ್ರಿಕರಿಗೆ ಎಲ್ಲ ರೀತಿಯಿಂದಲೂ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ, ಯಾತ್ರಿಕರು ಯಾವುದೇ ಕಾರಣಕ್ಕೂ ಎಜೆಂಟರ್ ಬಳಿ ನೋಂದಣಿ ಮಾಡಿಕೊಂಡು ಮೋಸ ಹೋಗಬಾರದು. ಅಧಿಕೃತವಾಗಿ ಗುರುತಿಸಿರುವ ಬ್ಯಾಂಕ್ ಬ್ರ್ಯಾಂಚ್ ಗಳಲ್ಲಿ ಮಾತ್ರ ಯಾತ್ರೆಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಅಮರನಾಥ ದೇವಸ್ಥಾನ ಕಮೀಟಿ ಸಿಇಒ ಉಮಂಗ್ ನರೂಲ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search