• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸರ್ಜಿಕಲ್ ಸ್ಟ್ರೈಕ್ ಸಾಕ್ಷ್ಯ ಕೇಳಿದ ಅರವಿಂದ ಕೇಜ್ರಿವಾಲ್ ಎಲ್ಲಿ ಅಡಗಿ ಕುಳಿತಿದ್ದಾರೆ? ಏನೆನ್ನುತ್ತಾರೆ?

ವಿಶಾಲ್ ಗೌಡ ಕುಶಾಲನಗರ Posted On June 28, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ, ಎನ್ಡಿಎ ಸರ್ಕಾರ ಹಾಗೂ ಭಾರತೀಯ ಸೈನ್ಯ ಎಂದರೆ ಈ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮುಲಾಯಂ ಸಿಂಗ್ ಯಾದವ್, ಲಾಲೂ ಪ್ರಸಾದ್ ಯಾದವ್, ಅಖಿಲೇಶ್ ಯಾದವ್, ಸಿದ್ದರಾಮಯ್ಯ, ದೇವೇಗೌಡ, ಪಿಣರಾಯಿ ವಿಜಯನ್… ಒಬ್ಬರಲ್ಲ ಇಬ್ಬರಲ್ಲ, ಇವರೆಲ್ಲರಿಗೂ ಏನೋ ಒಂದು ಅಸಡ್ಡೆ. ಹಾಗಾಗಿ ಇವರು ಈ ಮೇಲಿನ ಎಲ್ಲ ಅಂಶಗಳ ಕುರಿತು ವಿರೋಧ ವ್ಯಕ್ತಪಡಿಸುತ್ತಾರೆ. ಕೊಂಕು ನುಡಿಯುತ್ತಾರೆ.

2016ರಲ್ಲಿ ನರೇಂದ್ರ ಮೋದಿ ಅವರು ನೋಟು ನಿಷೇಧ ನಿರ್ಧಾರ ಕೈಗೊಂಡಾಗ ಇಡೀ ದೇಶದ ಜನ ನಿರ್ಧಾರ ಕೈಗೊಂಡು ಬ್ಯಾಂಕ್ ಎದುರು ನಿಂತಿದ್ದರೆ. ಈ ಸೋ ಕಾಲ್ಡ್ ಮುಖಂಡರು ಮಾತ್ರ ನಿರ್ಧಾರ ವಿರೋಧಿಸಿದರು. ದೇಶಾದ್ಯಂತ 17 ತೆರಿಗೆ ಇದ್ದವು. ದಲ್ಲಾಳಿಗಳ ಉಪಟಳ ಇತ್ತು. ಇದನ್ನು ತಡೆಯಲು ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸಿತು. ಇದಕ್ಕೂ ವಿರೋಧಿಸಿದರು ಈ ಮುಖಂಡರು. ಆದರೆ ಪ್ರಸ್ತುತ ಈ ನಿರ್ಧಾರಗಳಿಂದಲೇ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತಿದೆ.

ಇನ್ನು ಸೈನ್ಯದ ಬಗ್ಗೆಯೂ ಇವರು ಮಾತನಾಡುತ್ತಾರೆ. ಭಾರತೀಯ ಸೈನಿಕರು ಅತ್ಯಾಚಾರಿಗಳು ಎನ್ನುತ್ತಾರೆ. ಮನೆಯ ಬಡತನ ಸಹಿಸದೆ, ನೌಕರಿಗಾಗಿ ಮಾತ್ರ ಸೇನೆ ಸೇರುತ್ತಾರೆ ಅಂತಾರೆ. ಭಾರತೀಯ ಸೈನಿಕರ ನಿಷ್ಠೆಯನ್ನೇ ಪ್ರಶ್ನಿಸುವವರಿದ್ದಾರೆ.

ಇದೇ ರೀತಿ 2016ರಲ್ಲಿ ಭಾರತೀಯ ಸೈನ್ಯ ಸರ್ಜಿಕಲ್ ಸ್ಟ್ರೈಕ್ ಕೈಗೊಂಡಿತು. ನರೇಂದ್ರ ಮೋದಿ ಅವರು ಇಂಥದ್ದೊಂದು ನಿರ್ಧಾರದ ಹಿಂದೆ ಇದ್ದರು. ಇಡೀ ರಾತ್ರಿ ನರೇಂದ್ರ ಮೋದಿ ನಿದ್ದೆ ಮಾಡದೆ, ಸರ್ಜಿಕಲ್ ಸ್ಟ್ರೈಕ್ ಯಶಸ್ವಿಯಾಯಿತು ಎಂದಾಗಲೇ ಮೋದಿ ಮಲಗಿದ್ದರು ಎಂಬುದು ಬಳಿಕ ತಿಳಿಯಿತು. ಅಂದು ಭಾರತೀಯ ಯೋಧರು ಬರೋಬ್ಬರಿ 38 ಉಗ್ರರನ್ನು ಹತ್ಯೆ ಮಾಡಿ ಬಂದಿದ್ದರು. ಇಡೀ ವಿಶ್ವ ಮೋದಿ ಅವರನ್ನು ಶ್ಲಾಘಿಸಿದ ದಿನ,

ಹೀಗೆ ಒಂದೇ ಒಂದು ಸರ್ಜಿಕಲ್ ಸ್ಟ್ರೈಕ್ ನಿರ್ಧಾರದಿಂದ ಭಾರತೀಯ ಸೈನ್ಯ, ಎನ್ಡಿಎ ಹಾಗೂ ನರೇಂದ್ರ ಮೋದಿ ಅವರಿಗೆ ಖ್ಯಾತಿ ತಂದುಕೊಟ್ಟಿತು. ಆದರೆ ಈ ಮೇಲಿನ ಸೋ ಕಾಲ್ಡ್ ಮುಖಂಡರು ಮಾತ್ರ ಈ ನಿರ್ಧಾರದಿಂದ ಹೊಟ್ಟೆ ಉರಿದುಕೊಂಡರು. ಕುದ್ದು ಹೋದರು, ಹೊಟ್ಟೆ ಕಿಚ್ಚು ಪಟ್ಟರು.

ಇವರಲ್ಲೇ ಅರವಿಂದ ಕೇಜ್ರಿವಾಲ್ ಒಂದು ಹೆಜ್ಜೆ ಮುಂದೆ ಹೋಗಿ, ಸರ್ಜಿಕಲ್ ಸ್ಟ್ರೈಕ್ ನಡೆದೇ ಇಲ್ಲ, ಹಾಗೊಂದು ವೇಳೆ ನಡೆದಿದ್ದರೆ ಕೇಂದ್ರ ಸರ್ಕಾರ ವೀಡಿಯೋ ತೋರಿಸಲಿ ಎಂದು ಬೊಬ್ಬೆ ಹಾಕಿದರು. ಭಾರತೀಯ ಶೌರ್ಯವನ್ನೇ ಪ್ರಶ್ನಿಸಿದರು.

ಆದರೆ ಈಗ ಅಂದು ಭಾರತೀಯ ಸೈನ್ಯ ಮಾಡಿದ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಬಹಿರಂಗವಾಗಿದೆ. ಸೇನೆಯ ಪ್ರಮುಖ ಯೋಧರೆ ಇದು ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಅಂದು ಬಾಯಿಬಿಟ್ಟಿದ್ದ ಅರವಿಂದ ಕೇಜ್ರಿವಾಲ್ ಈಗ ಮಗುಮ್ಮಾಗಿದ್ದಾರೆ. ಒಂದೇ ಒಂದು ಮಾತಾಡಿಲ್ಲ. ಹೇಳಿ ಇಂಥವರ ಇಬ್ಬಂದಿತನಕ್ಕೆ ಏನು ಹೇಳೋದು?

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
ವಿಶಾಲ್ ಗೌಡ ಕುಶಾಲನಗರ February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
ವಿಶಾಲ್ ಗೌಡ ಕುಶಾಲನಗರ February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search