• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸರ್ಜಿಕಲ್ ಸ್ಟ್ರೈಕ್ ಸಾಕ್ಷ್ಯ ಕೇಳಿದ ಅರವಿಂದ ಕೇಜ್ರಿವಾಲ್ ಎಲ್ಲಿ ಅಡಗಿ ಕುಳಿತಿದ್ದಾರೆ? ಏನೆನ್ನುತ್ತಾರೆ?

ವಿಶಾಲ್ ಗೌಡ ಕುಶಾಲನಗರ Posted On June 28, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ, ಎನ್ಡಿಎ ಸರ್ಕಾರ ಹಾಗೂ ಭಾರತೀಯ ಸೈನ್ಯ ಎಂದರೆ ಈ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮುಲಾಯಂ ಸಿಂಗ್ ಯಾದವ್, ಲಾಲೂ ಪ್ರಸಾದ್ ಯಾದವ್, ಅಖಿಲೇಶ್ ಯಾದವ್, ಸಿದ್ದರಾಮಯ್ಯ, ದೇವೇಗೌಡ, ಪಿಣರಾಯಿ ವಿಜಯನ್… ಒಬ್ಬರಲ್ಲ ಇಬ್ಬರಲ್ಲ, ಇವರೆಲ್ಲರಿಗೂ ಏನೋ ಒಂದು ಅಸಡ್ಡೆ. ಹಾಗಾಗಿ ಇವರು ಈ ಮೇಲಿನ ಎಲ್ಲ ಅಂಶಗಳ ಕುರಿತು ವಿರೋಧ ವ್ಯಕ್ತಪಡಿಸುತ್ತಾರೆ. ಕೊಂಕು ನುಡಿಯುತ್ತಾರೆ.

2016ರಲ್ಲಿ ನರೇಂದ್ರ ಮೋದಿ ಅವರು ನೋಟು ನಿಷೇಧ ನಿರ್ಧಾರ ಕೈಗೊಂಡಾಗ ಇಡೀ ದೇಶದ ಜನ ನಿರ್ಧಾರ ಕೈಗೊಂಡು ಬ್ಯಾಂಕ್ ಎದುರು ನಿಂತಿದ್ದರೆ. ಈ ಸೋ ಕಾಲ್ಡ್ ಮುಖಂಡರು ಮಾತ್ರ ನಿರ್ಧಾರ ವಿರೋಧಿಸಿದರು. ದೇಶಾದ್ಯಂತ 17 ತೆರಿಗೆ ಇದ್ದವು. ದಲ್ಲಾಳಿಗಳ ಉಪಟಳ ಇತ್ತು. ಇದನ್ನು ತಡೆಯಲು ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸಿತು. ಇದಕ್ಕೂ ವಿರೋಧಿಸಿದರು ಈ ಮುಖಂಡರು. ಆದರೆ ಪ್ರಸ್ತುತ ಈ ನಿರ್ಧಾರಗಳಿಂದಲೇ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತಿದೆ.

ಇನ್ನು ಸೈನ್ಯದ ಬಗ್ಗೆಯೂ ಇವರು ಮಾತನಾಡುತ್ತಾರೆ. ಭಾರತೀಯ ಸೈನಿಕರು ಅತ್ಯಾಚಾರಿಗಳು ಎನ್ನುತ್ತಾರೆ. ಮನೆಯ ಬಡತನ ಸಹಿಸದೆ, ನೌಕರಿಗಾಗಿ ಮಾತ್ರ ಸೇನೆ ಸೇರುತ್ತಾರೆ ಅಂತಾರೆ. ಭಾರತೀಯ ಸೈನಿಕರ ನಿಷ್ಠೆಯನ್ನೇ ಪ್ರಶ್ನಿಸುವವರಿದ್ದಾರೆ.

ಇದೇ ರೀತಿ 2016ರಲ್ಲಿ ಭಾರತೀಯ ಸೈನ್ಯ ಸರ್ಜಿಕಲ್ ಸ್ಟ್ರೈಕ್ ಕೈಗೊಂಡಿತು. ನರೇಂದ್ರ ಮೋದಿ ಅವರು ಇಂಥದ್ದೊಂದು ನಿರ್ಧಾರದ ಹಿಂದೆ ಇದ್ದರು. ಇಡೀ ರಾತ್ರಿ ನರೇಂದ್ರ ಮೋದಿ ನಿದ್ದೆ ಮಾಡದೆ, ಸರ್ಜಿಕಲ್ ಸ್ಟ್ರೈಕ್ ಯಶಸ್ವಿಯಾಯಿತು ಎಂದಾಗಲೇ ಮೋದಿ ಮಲಗಿದ್ದರು ಎಂಬುದು ಬಳಿಕ ತಿಳಿಯಿತು. ಅಂದು ಭಾರತೀಯ ಯೋಧರು ಬರೋಬ್ಬರಿ 38 ಉಗ್ರರನ್ನು ಹತ್ಯೆ ಮಾಡಿ ಬಂದಿದ್ದರು. ಇಡೀ ವಿಶ್ವ ಮೋದಿ ಅವರನ್ನು ಶ್ಲಾಘಿಸಿದ ದಿನ,

ಹೀಗೆ ಒಂದೇ ಒಂದು ಸರ್ಜಿಕಲ್ ಸ್ಟ್ರೈಕ್ ನಿರ್ಧಾರದಿಂದ ಭಾರತೀಯ ಸೈನ್ಯ, ಎನ್ಡಿಎ ಹಾಗೂ ನರೇಂದ್ರ ಮೋದಿ ಅವರಿಗೆ ಖ್ಯಾತಿ ತಂದುಕೊಟ್ಟಿತು. ಆದರೆ ಈ ಮೇಲಿನ ಸೋ ಕಾಲ್ಡ್ ಮುಖಂಡರು ಮಾತ್ರ ಈ ನಿರ್ಧಾರದಿಂದ ಹೊಟ್ಟೆ ಉರಿದುಕೊಂಡರು. ಕುದ್ದು ಹೋದರು, ಹೊಟ್ಟೆ ಕಿಚ್ಚು ಪಟ್ಟರು.

ಇವರಲ್ಲೇ ಅರವಿಂದ ಕೇಜ್ರಿವಾಲ್ ಒಂದು ಹೆಜ್ಜೆ ಮುಂದೆ ಹೋಗಿ, ಸರ್ಜಿಕಲ್ ಸ್ಟ್ರೈಕ್ ನಡೆದೇ ಇಲ್ಲ, ಹಾಗೊಂದು ವೇಳೆ ನಡೆದಿದ್ದರೆ ಕೇಂದ್ರ ಸರ್ಕಾರ ವೀಡಿಯೋ ತೋರಿಸಲಿ ಎಂದು ಬೊಬ್ಬೆ ಹಾಕಿದರು. ಭಾರತೀಯ ಶೌರ್ಯವನ್ನೇ ಪ್ರಶ್ನಿಸಿದರು.

ಆದರೆ ಈಗ ಅಂದು ಭಾರತೀಯ ಸೈನ್ಯ ಮಾಡಿದ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಬಹಿರಂಗವಾಗಿದೆ. ಸೇನೆಯ ಪ್ರಮುಖ ಯೋಧರೆ ಇದು ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಅಂದು ಬಾಯಿಬಿಟ್ಟಿದ್ದ ಅರವಿಂದ ಕೇಜ್ರಿವಾಲ್ ಈಗ ಮಗುಮ್ಮಾಗಿದ್ದಾರೆ. ಒಂದೇ ಒಂದು ಮಾತಾಡಿಲ್ಲ. ಹೇಳಿ ಇಂಥವರ ಇಬ್ಬಂದಿತನಕ್ಕೆ ಏನು ಹೇಳೋದು?

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
ವಿಶಾಲ್ ಗೌಡ ಕುಶಾಲನಗರ January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
ವಿಶಾಲ್ ಗೌಡ ಕುಶಾಲನಗರ January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search