• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಇದೇನು ಸಮ್ಮಿಶ್ರ ಸರ್ಕಾರವೋ? ಅಧಿಕಾರ, ಮುನ್ನಡೆಗಾಗಿ ನಡೆಯುತ್ತಿರುವ ಬೀದಿ ರಂಪವೋ?

ನವೀನ್ ಶೆಟ್ಟಿ ಮಂಗಳೂರು Posted On June 28, 2018
0


0
Shares
  • Share On Facebook
  • Tweet It

ಈ ಬಾರಿಯ ಚುನಾವಣೆಯಲ್ಲಿ ಮತದಾರ ಯಾವ ಪಕ್ಷಕ್ಕೂ ಬಹುಮತ ನೀಡದೆ, ಎಲ್ಲ ಪಕ್ಷಗಳಿಗೂ ತಕ್ಕ ಪಾಠ ಕಲಿಸಿದರು ಎಂದು ಖುಷಿಪಟ್ಟೆವು. ಆದರೆ ಈಗ ಯಾಕಾದರೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂತೋ ಎನ್ನುವಷ್ಟರ ಮಟ್ಟಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಲಸು ರಾಜಕಾರಣ ಮಾಡುತ್ತಿವೆ. ಆ ಮೂಲಕ ಜನ ಹೇಸಿಗೆಪಡುವಷ್ಟು ಸಣ್ಣತನ ಮಾಡುತ್ತಿವೆ.

ಕಳೆದ ಒಂದು ವಾರದ ರಾಜಕೀಯ ಪ್ರಹಸನವನ್ನೇ ನೋಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯಲು ಹೋಗಿ, ಅಲ್ಲೂ ರಾಜಕೀಯ ಮಾಡುತ್ತದ್ದಾರೆ. ತಮ್ಮ ಬೆಂಬಲಿಗ ಶಾಸಕರು, ಸಚಿವರನ್ನು ಕರೆಯಿಸಿ ರಾಜಕೀಯ ದಾಳ ಉರುಳಿಸುತ್ತಿದ್ದಾರೆ. ಹೊಲಸು ರಾಜಕೀಯ ಮಾಡುತ್ತಿದ್ದಾರೆ. ಸರ್ಕಾರ ಉರುಳಿಸಲು ತಂತ್ರ ರೂಪಿಸುತ್ತಿದ್ದಾರೆ.

ಇಷ್ಟಾದರೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತ್ರ ನಮ್ಮ ಸರ್ಕಾರ ಐದು ವರ್ಷ ಉಳಿಯತ್ತದೆ, ನಮ್ಮ ಮೈತ್ರಿ ಯಶಸ್ವಿಯಾಗಿ ಐದು ವರ್ಷ ರಾಜ್ಯಭಾರ ಮಾಡುತ್ತದೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತುಗಳಿಂದ ಭಯಭೀತರಾಗಿ ಇಂತಹ ಹೇಳಿಕೆ ಕೊಡುತ್ತಿದ್ದಾರೆ ಎಂದು ತಿಪ್ಪೆ ಸಾರಿಸುತ್ತಿದ್ದಾರೆ.

ಇನ್ನು ಶಾಸಕರು, ಸಚಿವರೇನೂ ಸಾಚಾ ಇಲ್ಲ. ಇವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿಕೊಳ್ಳುವ ನೆಪದಲ್ಲಿ ಸಿದ್ದರಾಮಯ್ಯನವರ ಜತೆ ಸೇರಿ, ಸರ್ಕಾರ ಹೇಗೆ ಉರುಳಿಸಬೇಕು, ಹೇಗೆ ಕುಮಾರಸ್ವಾಮಿ ಅವರನ್ನು ಪೇಚಿಗೆ ಸಿಲುಕಿಸಬೇಕು ಎಂದು ಆಲೋಚಿಸುತ್ತಿದ್ದಾರೆ. ಮತ್ತೆ ಇವರು ಸರ್ಕಾರ ಉಳಿಸುವುದು ಸಿದ್ದರಾಮಯ್ಯ ಮಾತ್ರ ಎನ್ನುತ್ತಿದ್ದಾರೆ. ಅಲ್ಲಿಗೆ ಯಾರೋ ಸರ್ಕಾರ ಉರುಳಿಸಲು ತಯಾರಿ ನಡೆಸುತ್ತಿದ್ದಾರೆ ಎಂದಾಯಿತಲ್ಲ.

ಅತ್ತ ಕುಮಾರಸ್ವಾಮಿಯವರೂ ಏನೂ ಕಡಿಮೆ ಇಲ್ಲ. ನಾವೇ ಆಡಳಿತ ನಡೆಸುತ್ತೇವೆ, ನಾನೇ ಮುಖ್ಯಮಂತ್ರಿ, ಇನ್ನೊಂದು ವರ್ಷ ನನ್ನ ಸೀಟು ಅಲ್ಲಾಡಿಸಲು ಆಗುವುದಿಲ್ಲ ಎನ್ನುತ್ತಾರೆ. ದೇವೇಗೌಡರು ಇದೇ ಮಾತು ಆಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಸಹ ಇಂಥದ್ದೇ ಮಾತನಾಡುತ್ತಿದ್ದಾರೆ.

ಆದರೆ ಇದೆಲ್ಲದರ ಮಧ್ಯೆ ರಾಜ್ಯದ ಆಡಳಿತ ಯಂತ್ರ ಸ್ಥಗಿತವಾಗಿದೆ. ರಾಜ್ಯ ಸರ್ಕಾರ ಆಡಳಿತಕ್ಕೆ ಬಂದು ತಿಂಗಳಾದರೂ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿಲ್ಲ. ರೈತರಿಗೆ ನೀಡಿದ ಸಾಲ ಮನ್ನಾ ಭರವಸೆ ಈಡೇರಿಸಿಲ್ಲ. ಯಾವುದೇ ಹೊಸ ಯೋಜನೆ ಘೋಷಿಸಿಲ್ಲ. ಹೇಳಿ ಇದೇನು ಸಮ್ಮಿಶ್ರ ಸರ್ಕಾರವೋ, ಅಧಿಕಾರ, ಮುನ್ನಡೆಗಾಗಿ ನಡೆಯುತ್ತಿರುವ ರಂಪಾಟವೋ?

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
ನವೀನ್ ಶೆಟ್ಟಿ ಮಂಗಳೂರು January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
ನವೀನ್ ಶೆಟ್ಟಿ ಮಂಗಳೂರು January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search