• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾರ್ವಜನಿಕರ ದೂರಿಗೆ ಸೂಕ್ಷ್ಮವಾಗಿ ಪ್ರತಿಕ್ರಿಯಿಸಿ ಎಂದು ಪೊಲೀಸರಿಗೆ ಉತ್ತಮ ಸಲಹೆ ನೀಡಿದ ಫಡ್ನವೀಸ್!

TNN Correspondent Posted On June 28, 2018
0


0
Shares
  • Share On Facebook
  • Tweet It

ಮುಂಬೈ: ಪೊಲೀಸರು ಎಂದರೆ ಸಾರ್ವಜನಿಕರ ದೂರುಗಳಿಗೆ ಕಿವಿಗೊಡದವರು, ರಾಜಕಾರಣಿಗಳು ಹಾಗೂ ಹಿರಿಯ ಅಧಿಕಾರಿಗಳು ಹೇಳಿದ ಹಾಗೆ ಕೇಳಿಕೊಂಡು ಇರುವವರು ಹಾಗೂ ಸಾರ್ವಜನಿಕರ ರಕ್ಷಣೆ ಎಂದರೆ ಅಸಡ್ಡೆಯಾಗಿ ವರ್ತಿಸುವವರು ಎಂಬುದು ತುಂಬ ಜನರ ಆರೋಪ ಹಾಗೂ ಸಾರ್ವಕಾಲಿಕ ಟೀಕೆ.

ಆದರೆ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ ಪೊಲೀಸರಿಗೆ ಕಿವಿಮಾತು ಹೇಳಿದ್ದು, ಸಾರ್ವಜನಿಕರು ನೀಡು ದೂರುಗಳಿಗೆ ಸೂಕ್ಷ್ಮವಾಗಿ ವರ್ತಿಸಿ. ಅವರಿಗೆ ಸೂಕ್ತವಾಗಿ ಭದ್ರತೆ ನೀಡಿ ಎಂದು ಸಲಹೆ ನೀಡುವ ಮೂಲಕ ಮೇಲ್ಪಂಕ್ತಿ ಹಾಕಿದ್ದಾರೆ.

ಮುಂಬೈನ ಕಮಿಷನರ್ ಪೊಲೀಸ್ ಠಾಣೆಯಲ್ಲಿ ಡಯಲ್ 100 ಹಲವು ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಫಡ್ನವೀಸ್, ಸಾರ್ವಜನಿಕರು ಯಾವುದೇ ದೂರು ಹಾಗೂ ಅಭದ್ರತೆ ಕುರಿತು ಮಾಹಿತಿ ನೀಡಲು ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಕಠೋರವಾಗಿ ವರ್ತಿಸಬೇಡಿ. ಸೂಕ್ಷ್ಮವಾಗಿ ವರ್ತಿಸಿ, ಅವರ ದೂರು ಆಲಿಸಿ ಸಮಸ್ಯೆ ಬಗೆಹರಿಸಿ ಎಂದು ಸಲಹೆ ನೀಡಿದ್ದಾರೆ.

ಡಯಲ್ 100 ಯೋಜನೆಯು ಸಾರ್ವಜನಿಕ ಸ್ನೇಹಿಯಾಗಿ ಕಾರ್ಯನಿರ್ವಹಿಸಲಿದ್ದು, ಪೊಲೀಸ್ ಕಂಟ್ರೋಲ್ ರೂಮ್ ಕಾರ್ಯಕ್ಷಮತೆ ಹೆಚ್ಚಿಸಲಿದೆ. ಯಾರೇ ದೂರು ಹೊತ್ತು ತಂದರೂ, ಕರೆ ಮಾಡಿ ಮಾಹಿತಿ ನೀಡಿದರೂ ಸೂಕ್ಷ್ಮವಾಗಿ ಪರಿಗಣಿಸಿ, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಫಡ್ನವೀಸ್ ಪೊಲೀಸರಿಗೆ ಸೂಚಿಸಿದ್ದಾರೆ.

ಯಾವಾಗಲೂ ಪೊಲೀಸರು ಎಂದರೆ ತಮ್ಮ ಸೇವಕರೆಂದು ತಿಳಿದುಕೊಂಡಿರುವ, ಅವರ ಜತೆ ಹಾಗೆಯೇ ವರ್ತಿಸುವ ರಾಜಕಾರಣಿಗಳಿದ್ದಾರೆ. ಆದರೆ ಮುಖ್ಯಮಂತ್ರಿಯಂಥ ಮುಖ್ಯಮಂತ್ರಿಯೇ ಪೊಲೀಸರು ಸಾರ್ವಜನಿಕರ ಜತೆ ಸೂಕ್ಷ್ಮವಾಗಿ ವರ್ತಿಸಿ, ಅವರ ಸಮಸ್ಯೆ ಬಗೆಹರಿಸಿ ಎಂದು ಹೇಳಿರುವುದು ಉತ್ತಮ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search