• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾರ್ವಜನಿಕರ ದೂರಿಗೆ ಸೂಕ್ಷ್ಮವಾಗಿ ಪ್ರತಿಕ್ರಿಯಿಸಿ ಎಂದು ಪೊಲೀಸರಿಗೆ ಉತ್ತಮ ಸಲಹೆ ನೀಡಿದ ಫಡ್ನವೀಸ್!

TNN Correspondent Posted On June 28, 2018
0


0
Shares
  • Share On Facebook
  • Tweet It

ಮುಂಬೈ: ಪೊಲೀಸರು ಎಂದರೆ ಸಾರ್ವಜನಿಕರ ದೂರುಗಳಿಗೆ ಕಿವಿಗೊಡದವರು, ರಾಜಕಾರಣಿಗಳು ಹಾಗೂ ಹಿರಿಯ ಅಧಿಕಾರಿಗಳು ಹೇಳಿದ ಹಾಗೆ ಕೇಳಿಕೊಂಡು ಇರುವವರು ಹಾಗೂ ಸಾರ್ವಜನಿಕರ ರಕ್ಷಣೆ ಎಂದರೆ ಅಸಡ್ಡೆಯಾಗಿ ವರ್ತಿಸುವವರು ಎಂಬುದು ತುಂಬ ಜನರ ಆರೋಪ ಹಾಗೂ ಸಾರ್ವಕಾಲಿಕ ಟೀಕೆ.

ಆದರೆ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ ಪೊಲೀಸರಿಗೆ ಕಿವಿಮಾತು ಹೇಳಿದ್ದು, ಸಾರ್ವಜನಿಕರು ನೀಡು ದೂರುಗಳಿಗೆ ಸೂಕ್ಷ್ಮವಾಗಿ ವರ್ತಿಸಿ. ಅವರಿಗೆ ಸೂಕ್ತವಾಗಿ ಭದ್ರತೆ ನೀಡಿ ಎಂದು ಸಲಹೆ ನೀಡುವ ಮೂಲಕ ಮೇಲ್ಪಂಕ್ತಿ ಹಾಕಿದ್ದಾರೆ.

ಮುಂಬೈನ ಕಮಿಷನರ್ ಪೊಲೀಸ್ ಠಾಣೆಯಲ್ಲಿ ಡಯಲ್ 100 ಹಲವು ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಫಡ್ನವೀಸ್, ಸಾರ್ವಜನಿಕರು ಯಾವುದೇ ದೂರು ಹಾಗೂ ಅಭದ್ರತೆ ಕುರಿತು ಮಾಹಿತಿ ನೀಡಲು ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಕಠೋರವಾಗಿ ವರ್ತಿಸಬೇಡಿ. ಸೂಕ್ಷ್ಮವಾಗಿ ವರ್ತಿಸಿ, ಅವರ ದೂರು ಆಲಿಸಿ ಸಮಸ್ಯೆ ಬಗೆಹರಿಸಿ ಎಂದು ಸಲಹೆ ನೀಡಿದ್ದಾರೆ.

ಡಯಲ್ 100 ಯೋಜನೆಯು ಸಾರ್ವಜನಿಕ ಸ್ನೇಹಿಯಾಗಿ ಕಾರ್ಯನಿರ್ವಹಿಸಲಿದ್ದು, ಪೊಲೀಸ್ ಕಂಟ್ರೋಲ್ ರೂಮ್ ಕಾರ್ಯಕ್ಷಮತೆ ಹೆಚ್ಚಿಸಲಿದೆ. ಯಾರೇ ದೂರು ಹೊತ್ತು ತಂದರೂ, ಕರೆ ಮಾಡಿ ಮಾಹಿತಿ ನೀಡಿದರೂ ಸೂಕ್ಷ್ಮವಾಗಿ ಪರಿಗಣಿಸಿ, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಫಡ್ನವೀಸ್ ಪೊಲೀಸರಿಗೆ ಸೂಚಿಸಿದ್ದಾರೆ.

ಯಾವಾಗಲೂ ಪೊಲೀಸರು ಎಂದರೆ ತಮ್ಮ ಸೇವಕರೆಂದು ತಿಳಿದುಕೊಂಡಿರುವ, ಅವರ ಜತೆ ಹಾಗೆಯೇ ವರ್ತಿಸುವ ರಾಜಕಾರಣಿಗಳಿದ್ದಾರೆ. ಆದರೆ ಮುಖ್ಯಮಂತ್ರಿಯಂಥ ಮುಖ್ಯಮಂತ್ರಿಯೇ ಪೊಲೀಸರು ಸಾರ್ವಜನಿಕರ ಜತೆ ಸೂಕ್ಷ್ಮವಾಗಿ ವರ್ತಿಸಿ, ಅವರ ಸಮಸ್ಯೆ ಬಗೆಹರಿಸಿ ಎಂದು ಹೇಳಿರುವುದು ಉತ್ತಮ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search