• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧನಂಜಯ ಕುಮಾರ್ ಗೆ ಬೇರೆ ಆಯ್ಕೆಯಿರಲಿಲ್ಲ!

TNN Correspondent Posted On July 22, 2017
0


0
Shares
  • Share On Facebook
  • Tweet It

ಧನಂಜಯ ಕುಮಾರ್ ಅವರಿಗೆ ಬೇರೆ ಯಾವುದೇ ಆಯ್ಕೆಗಳಿರಲಿಲ್ಲ. ಭಾರತೀಯ ಜನತಾ ಪಾರ್ಟಿಯ ಬಾಗಿಲು ಮುಚ್ಚಿತ್ತು. ಕರ್ನಾಟಕ ಜನತಾ ಪಾರ್ಟಿ (ಕೆಜೆಪಿ) ಬಿಜೆಪಿಯೊಂದಿಗೆ ಸಜ್ಜಿಗೆ ಬಜಿಲ್ ಆಗಿದೆ. ಇನ್ನು ಜಾತ್ಯಾತೀತ ಜನತಾದಳದಲ್ಲಿ ಇದ್ದರಾದರೂ ಆ ಪಕ್ಷದ ಯಾವ ಕಾರ್ಯಕ್ರಮದಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಈಗ ಕೊನೆಯದಾಗಿ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಅಲ್ಲಿಗೆ ಅವರ ರಾಜಕೀಯ ಚಕ್ರ ಪೂರ್ತಿಗೊಂಡಿದೆ. ಬಹುಶ: ಕಾಂಗ್ರೆಸ್ ನಲ್ಲಿ ಕೂಡ ಸಮಾಧಾನ ಆಗದಿದ್ದರೆ ಎಡಪಕ್ಷಗಳು ಮಾತ್ರ ಬಾಕಿ ಇವೆ.

ಅಷ್ಟಕ್ಕೂ ಧನಂಜಯ್ ಕುಮಾರ್ ಅವರ ರಾಜಕೀಯ ಜೀವನ ಹೀಗೆ ಡೋಲಾಯಮಾನವಾಗಿ ಹೋಗುವುದಕ್ಕೆ ಏನು ಕಾರಣ? ಸಂಶಯವೇ ಇಲ್ಲ. ಅವರು ಬಿಜೆಪಿಯ ಮೂಲ ಸಿದ್ಧಾಂತ ವ್ಯಕ್ತಿಗಿಂತ ಪಕ್ಷ ದೊಡ್ಡದು ಎನ್ನುವುದು ಅನುಸರಿಸದೇ ಹೋದದ್ದು. ಈಗಂತೂ ಪಕ್ಷಕ್ಕಿಂತ ದೇಶ ದೊಡ್ಡದು ಎನ್ನುವ ಮತ್ತೊಂದು ನಂಬಿಕೆಗಂತೂ ಅವರು ಕಾಂಗ್ರೆಸ್ಸಿಗೆ ಸೇರುವ ಮೂಲಕ ಎಳ್ಳುನೀರು ಬಿಟ್ಟಿದ್ದಾರೆ. ದಕ್ಷಿಣ ಕನ್ನಡ ಅಥವಾ ಆಗಿನ ಮಂಗಳೂರು ಲೋಕಸಭಾ ಕ್ಷೇತ್ರವನ್ನು ನಾಲ್ಕು ಬಾರಿ ಪ್ರತಿನಿಧಿಸಿದ ಧನಂಜಯ್ ಕುಮಾರ್ ಅವರು ಮೊದಲ ಬಾರಿಗೆ ಸೋಲಿಲ್ಲದ ಸರದಾರ ಜನಾರ್ಧನ ಪೂಜಾರಿಯನ್ನು ಸೋಲಿಸಿ ಕಾಂಗ್ರೆಸ್ಸಿನ ಸುವರ್ಣ ಯುಗವನ್ನು ಅಂತ್ಯಗೊಳಿಸಿದ್ದರು. ಅದರ ನಂತರ ವಾಜಪೇಯಿ ಸಂಪುಟದಲ್ಲಿ ಮಂತ್ರಿ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಸಿವಿಲ್ ಎವಿಯೇಶನ್, ಹಣಕಾಸು ರಾಜ್ಯ ಮಂತ್ರಿ, ಜವುಳಿ ಮಂತ್ರಿಯೂ ಆಗಿದ್ದ ಧನಂಜಯ ಕುಮಾರ್, ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿದ್ದರು. ಎಲ್ಲಿಯ ತನಕ ಎಂದರೆ ಯಡಿಯೂರಪ್ಪ ಭ್ರಷ್ಟಾಚಾರದ ಹಗರಣದಲ್ಲಿ ಸಿಲುಕಿ ಬಿದ್ದು ಮುಖ್ಯಮಂತ್ರಿ ಸ್ಥಾನದಿಂದ ಇಳಿಯಲು ಹೈಕಮಾಂಡ್ ಸೂಚಿಸಿದಾಗ ಬಹಿರಂಗವಾಗಿ ಕೇಂದ್ರದ ನಾಯಕರಿಗೆ ಸಡ್ಡು ಹೊಡೆದಿದ್ದರು. ಶೋಭಾ ಕರಂದ್ಲಾಜೆ ಎಡಭಾಗದಲ್ಲಿ ನಿಂತರೆ ಧನಂಜಯ್ ಕುಮಾರ್ ಬಲಭಾಗದಲ್ಲಿ ನಿಂತು ಯಡಿಯೂರಪ್ಪನವರಿಗೆ ಎಲ್ಲಾ ವಿಷಯಗಳಿಂದಲೂ ರಕ್ಷಣೆ ನೀಡುತ್ತಿದ್ದರು. ಆದರೆ ಯಾವಾಗ ಬಿಎಸ್ ವೈ ಪರವಾಗಿ ನಿಂತು ಬಿಜೆಪಿ ನಾಯಕರನ್ನೇ ಧನಂಜಯ್ ಟೀಕಿಸಿದರೋ ಅದು ಅವರ ರಾಜಕೀಯ ಜೀವನದ ದೊಡ್ಡ ತಪ್ಪಾಗಿ ಪರಿಣಮಿಸಿತ್ತು.

ಪಕ್ಷ ಮೊದಲು ಇವರನ್ನು ಉಚ್ಚಾಟಿಸಿ ಬಿಎಸ್ ವೈಗೆ ಸಂದೇಶ ಕಳುಹಿಸಿತ್ತು. ಅದರ ನಂತರ ಯಡಿಯೂರಪ್ಪ ಕೂಡ ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದರು. ತಮ್ಮ ಪರಮಾಪ್ತನಿಗೆ ಅದರ ಅಧ್ಯಕ್ಷ ಪಟ್ಟ ಕಟ್ಟಿದರು. ಆದರೆ ಮತ್ತೆ ಯಡಿಯೂರಪ್ಪ ಬಿಜೆಪಿಗೆ ವಾಪಾಸಾದಾಗ ಅವರೊಂದಿಗೆ ಇದ್ದ ಅಷ್ಟು ಜನರನ್ನು ಒಳಗೆ ಸೇರಿಸಿ ಮೈಲಿಗೆ ಮಾಡಿಕೊಳ್ಳಲು ಬಿಜೆಪಿ ಸಿದ್ಧವಿರಲಿಲ್ಲ. ಯಾರನ್ನು ಕಡ್ಡಾಯವಾಗಿ ಸೇರಿಸಿಕೊಳ್ಳಲು ಬಿಎಸ್ ವೈ ಹೇಳಿದರೋ ಅವರನ್ನು ಮಾತ್ರ ಒಳಗೆ ಬಿಟ್ಟುಕೊಳ್ಳಲಾಯಿತು. ಆಗ ನಡೆದ ಸಂಧಾನ ಮಾತುಕತೆಯಲ್ಲಿ ಧನಂಜಯ್ ಕುಮಾರ್ ಅವರಿಗೆ ಪಾಸ್ ಸಿಕ್ಕಿರಲಿಲ್ಲ. ಕಾದು ಕಾದು ಅವರು ದೇವೆಗೌಡರ ಮನೆ ದಾರಿ ಹಿಡಿದರು. ಆದರೆ ಅಲ್ಲಿ ತಂದೆ ಮಕ್ಕಳದ್ದೇ ರಾಜಕೀಯ. ಅವರಿಗೆ ಮೂರು ಬಾರಿಯಲ್ಲ, ಮೂವತ್ತು ಬಾರಿ ಕೇಂದ್ರ ಸಚಿವರಾಗಿದ್ದವರ ಮೇಲೆನೆ ಪ್ರೀತಿಯಿರುವುದಿಲ್ಲ, ಹಾಗಿರುವಾಗ ಇವರು ಅವರಿಗೆ ಯಾವ ಲೆಕ್ಕ. ಸೂಟುಕೇಸ್ ಕೊಟ್ಟವರಿಗೆ ಮೊದಲ ಸ್ಥಾನ ಎಂದು ಅವರದ್ದೇ ಕುಟುಂಬದ ಕುಡಿ ಹೇಳಿರುವಾಗ ಬಹುಶ: ಧನಂಜಯ್ ಕುಮಾರ್ ಅವರು ಕೊಟ್ಟ ಸೂಟ್ ಕೇಸ್ ಸೈಜಿನ ಮೇಲೆ ಅವರಿಗೆ ಮರ್ಯಾದೆ ಸಿಕ್ಕಿರಬಹುದು.

 

ಈಗ ಚುನಾವಣೆ ಬರುತ್ತಾ ಇರುವುದರಿಂದ ತುರ್ತಾಗಿ ಧನಂಜಯ್ ಅವರಿಗೆ ಏನಾದರೂ ಮಾಡಿ ಲೈಮ್ ಲೈಟ್ ಗೆ ಬರಬೇಕು. ಅದಕ್ಕೆ ಉಳಿದಿರುವ ಒಂದು ಪಾರ್ಟಿ ಕಾಂಗ್ರೆಸ್. ಅಲ್ಲಿಗೆ ಸೇರಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಕ್ಷಕ್ಕೆ ವಿದ್ಯುಕ್ತವಾಗಿ ಸೇರಿಸಿಕೊಂಡಿದ್ದಾರೆ. ಅಲ್ಲಿಗೆ ಬಿಜೆಪಿಯನ್ನು ಬೈಯಲು ಅವರದ್ದೇ ಪಕ್ಷದ ಎರಡೂವರೆ ದಶಕದ ಸಂಬಂಧ ಹೊಂದಿದ ನಾಯಕ ಸಿಕ್ಕಿದಂತಾಗಿದೆ. ಇನ್ನು ಧನಂಜಯ್ ಗೆ ಕಾಂಗ್ರೆಸ್ ವಕ್ತಾರರ ಸ್ಥಾನ ಕೊಟ್ಟರೆ ಮಹಾಭಾರತದಲ್ಲಿ ನಡೆದ ಶೈಲಿಯಲ್ಲಿಯೇ ಯುದ್ಧ ನಡೆಯಲಿದೆ. ಇವರನ್ನು ಮುಂದಿಟ್ಟು ಕಾಂಗ್ರೆಸ್ ಯಾವ ಆಟ ಆಡುತ್ತೊ ಕಾದು ನೋಡಬೇಕು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search