• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನನಗೆ ರಾಹುಲ್ ಗಾಂಧಿ ಮುಖ ಕಂಡರೇನೇ ಆಗುವುದಿಲ್ಲ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On June 29, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ರಾಹುಲ್ ಗಾಂಧಿ! ಈ ಹೆಸರು ಕಾಂಗ್ರೆಸ್ ಮುಖಂಡರಿಗೆ ವಿನೀತ ಭಾವ ಮೂಡಿಸುತ್ತದೆ. ಇವರೇ ನಮ್ಮ ನಾಯಕ ಎಂದು ಬೀಗುವಂತೆ ಮಾಡುತ್ತದೆ. ಆದರೆ ಬೇರೆಯವರಿಗೆ ಮಾತ್ರ ರಾಹುಲ್ ಗಾಂಧಿ ಮಾತಿಗೆ ನಿಂತರೆ ನಗು ಬರುತ್ತದೆ. ಸಾಮಾಜಿಕ ಜಾಲತಾಣದಲ್ಲಂತೂ ರಾಹುಲ್ ಗಾಂಧಿಯವರನ್ನು ಟ್ರೋಲ್ ಮಾಡುವವರ ಸಂಖ್ಯೆ ಅಪಾರವಾಗಿದೆ. ದೃಶ್ಯಮಾಧ್ಯಮಗಳೂ ಅವರ ಹೇಳಿಕೆಗಳನ್ನು ಹಾಸ್ಯವಾಗಿ ತೋರಿಸುತ್ತವೆ.

ಇಂತಹ ರಾಹುಲ್ ಗಾಂಧಿಯವರು ಈಗಾಗಲೇ ಲೋಕಸಭೆ ಚುನಾವಣೆಗೆ ಸಿದ್ಧರಾಗಿದ್ದಾರೆ. ತಮ್ಮ ನೇತೃತ್ವದಲ್ಲಿ ಯುಪಿಎ ಚುನಾವಣೆ ನಡೆದು, ಗೆಲ್ಲುವ ಮೂಲಕ ದೇಶದ ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ. ಈಗಾಗಲೇ ಅವರು ತಾವೇ ಮುಂದಿನ ಪ್ರಧಾನಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಸಹ.

ಆದರೆ ಇಂತಹ ಮುಖಂಡ ರಾಹುಲ್ ಗಾಂಧಿಯವರ ಮುಖ ಎಂದರೇನೆ ನನಗೆ ಇಷ್ಟವಿಲ್ಲ ಎಂದು ಅಂತಾರಾಷ್ಟ್ರೀಯ ಗಾಯತ್ರಿ ಪರಿವಾರ ಹಿಂದೂ ಸಂಘಟನೆಯ ಮುಖಂಡ ಪ್ರಣವ್ ಪಾಂಡ್ಯ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಮುಖ ನೋಡಲು ನಾವು ಬಯಸುವುದಿಲ್ಲ ಎಂದಿದ್ದಾರೆ.

ನಾವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ನಾಯಕರೆಂದು ಒಪ್ಪುತ್ತೇವೆಯೇ ಹೊರತು, ರಾಹುಲ್ ಗಾಂಧಿಯವರನ್ನು ಒಪ್ಪುವುದಿಲ್ಲ. ನಾವು ಅವರ ಮುಖವನ್ನು ನೋಡಲು ಇಷ್ಟಪಡುವುದಿಲ್ಲ. ಅವರು ಬೇಕಾದರೆ ಭೇಟಿಯಾಗಲು ನಮ್ಮ ಬಳಿ ಬರಬಹುದು ಎಂದು ತಿಳಿಸಿದ್ದಾರೆ.

ಈಗಾಗಲೇ ಪ್ರಣವ್ ಪಾಂಡೆ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಇತ್ತೀಚೆಗೆ ಆರೆಸ್ಸೆಸ್ ಮುಖಂಡರನ್ನೂ ಪಾಂಡೆ ಭೇಟಿಯಾಗಿ ಚರ್ಚಿಸಿದ್ದಾರೆ. ಆದಾಗ್ಯೂ ಅಮಿತ್ ಶಾ ಅವರು ಪ್ರಣವ್ ಪಾಂಡೆ ಸೇರಿ ಹಲವು ಹಿಂದೂ ಸಂಘಟನೆಗಳ ಮುಖಂಡರನ್ನು ಭೇಟಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search