• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನನಗೆ ರಾಹುಲ್ ಗಾಂಧಿ ಮುಖ ಕಂಡರೇನೇ ಆಗುವುದಿಲ್ಲ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On June 29, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ರಾಹುಲ್ ಗಾಂಧಿ! ಈ ಹೆಸರು ಕಾಂಗ್ರೆಸ್ ಮುಖಂಡರಿಗೆ ವಿನೀತ ಭಾವ ಮೂಡಿಸುತ್ತದೆ. ಇವರೇ ನಮ್ಮ ನಾಯಕ ಎಂದು ಬೀಗುವಂತೆ ಮಾಡುತ್ತದೆ. ಆದರೆ ಬೇರೆಯವರಿಗೆ ಮಾತ್ರ ರಾಹುಲ್ ಗಾಂಧಿ ಮಾತಿಗೆ ನಿಂತರೆ ನಗು ಬರುತ್ತದೆ. ಸಾಮಾಜಿಕ ಜಾಲತಾಣದಲ್ಲಂತೂ ರಾಹುಲ್ ಗಾಂಧಿಯವರನ್ನು ಟ್ರೋಲ್ ಮಾಡುವವರ ಸಂಖ್ಯೆ ಅಪಾರವಾಗಿದೆ. ದೃಶ್ಯಮಾಧ್ಯಮಗಳೂ ಅವರ ಹೇಳಿಕೆಗಳನ್ನು ಹಾಸ್ಯವಾಗಿ ತೋರಿಸುತ್ತವೆ.

ಇಂತಹ ರಾಹುಲ್ ಗಾಂಧಿಯವರು ಈಗಾಗಲೇ ಲೋಕಸಭೆ ಚುನಾವಣೆಗೆ ಸಿದ್ಧರಾಗಿದ್ದಾರೆ. ತಮ್ಮ ನೇತೃತ್ವದಲ್ಲಿ ಯುಪಿಎ ಚುನಾವಣೆ ನಡೆದು, ಗೆಲ್ಲುವ ಮೂಲಕ ದೇಶದ ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ. ಈಗಾಗಲೇ ಅವರು ತಾವೇ ಮುಂದಿನ ಪ್ರಧಾನಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಸಹ.

ಆದರೆ ಇಂತಹ ಮುಖಂಡ ರಾಹುಲ್ ಗಾಂಧಿಯವರ ಮುಖ ಎಂದರೇನೆ ನನಗೆ ಇಷ್ಟವಿಲ್ಲ ಎಂದು ಅಂತಾರಾಷ್ಟ್ರೀಯ ಗಾಯತ್ರಿ ಪರಿವಾರ ಹಿಂದೂ ಸಂಘಟನೆಯ ಮುಖಂಡ ಪ್ರಣವ್ ಪಾಂಡ್ಯ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಮುಖ ನೋಡಲು ನಾವು ಬಯಸುವುದಿಲ್ಲ ಎಂದಿದ್ದಾರೆ.

ನಾವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ನಾಯಕರೆಂದು ಒಪ್ಪುತ್ತೇವೆಯೇ ಹೊರತು, ರಾಹುಲ್ ಗಾಂಧಿಯವರನ್ನು ಒಪ್ಪುವುದಿಲ್ಲ. ನಾವು ಅವರ ಮುಖವನ್ನು ನೋಡಲು ಇಷ್ಟಪಡುವುದಿಲ್ಲ. ಅವರು ಬೇಕಾದರೆ ಭೇಟಿಯಾಗಲು ನಮ್ಮ ಬಳಿ ಬರಬಹುದು ಎಂದು ತಿಳಿಸಿದ್ದಾರೆ.

ಈಗಾಗಲೇ ಪ್ರಣವ್ ಪಾಂಡೆ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಇತ್ತೀಚೆಗೆ ಆರೆಸ್ಸೆಸ್ ಮುಖಂಡರನ್ನೂ ಪಾಂಡೆ ಭೇಟಿಯಾಗಿ ಚರ್ಚಿಸಿದ್ದಾರೆ. ಆದಾಗ್ಯೂ ಅಮಿತ್ ಶಾ ಅವರು ಪ್ರಣವ್ ಪಾಂಡೆ ಸೇರಿ ಹಲವು ಹಿಂದೂ ಸಂಘಟನೆಗಳ ಮುಖಂಡರನ್ನು ಭೇಟಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search