• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನನಗೆ ರಾಹುಲ್ ಗಾಂಧಿ ಮುಖ ಕಂಡರೇನೇ ಆಗುವುದಿಲ್ಲ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On June 29, 2018


  • Share On Facebook
  • Tweet It

ಡೆಹ್ರಾಡೂನ್: ರಾಹುಲ್ ಗಾಂಧಿ! ಈ ಹೆಸರು ಕಾಂಗ್ರೆಸ್ ಮುಖಂಡರಿಗೆ ವಿನೀತ ಭಾವ ಮೂಡಿಸುತ್ತದೆ. ಇವರೇ ನಮ್ಮ ನಾಯಕ ಎಂದು ಬೀಗುವಂತೆ ಮಾಡುತ್ತದೆ. ಆದರೆ ಬೇರೆಯವರಿಗೆ ಮಾತ್ರ ರಾಹುಲ್ ಗಾಂಧಿ ಮಾತಿಗೆ ನಿಂತರೆ ನಗು ಬರುತ್ತದೆ. ಸಾಮಾಜಿಕ ಜಾಲತಾಣದಲ್ಲಂತೂ ರಾಹುಲ್ ಗಾಂಧಿಯವರನ್ನು ಟ್ರೋಲ್ ಮಾಡುವವರ ಸಂಖ್ಯೆ ಅಪಾರವಾಗಿದೆ. ದೃಶ್ಯಮಾಧ್ಯಮಗಳೂ ಅವರ ಹೇಳಿಕೆಗಳನ್ನು ಹಾಸ್ಯವಾಗಿ ತೋರಿಸುತ್ತವೆ.

ಇಂತಹ ರಾಹುಲ್ ಗಾಂಧಿಯವರು ಈಗಾಗಲೇ ಲೋಕಸಭೆ ಚುನಾವಣೆಗೆ ಸಿದ್ಧರಾಗಿದ್ದಾರೆ. ತಮ್ಮ ನೇತೃತ್ವದಲ್ಲಿ ಯುಪಿಎ ಚುನಾವಣೆ ನಡೆದು, ಗೆಲ್ಲುವ ಮೂಲಕ ದೇಶದ ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ. ಈಗಾಗಲೇ ಅವರು ತಾವೇ ಮುಂದಿನ ಪ್ರಧಾನಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಸಹ.

ಆದರೆ ಇಂತಹ ಮುಖಂಡ ರಾಹುಲ್ ಗಾಂಧಿಯವರ ಮುಖ ಎಂದರೇನೆ ನನಗೆ ಇಷ್ಟವಿಲ್ಲ ಎಂದು ಅಂತಾರಾಷ್ಟ್ರೀಯ ಗಾಯತ್ರಿ ಪರಿವಾರ ಹಿಂದೂ ಸಂಘಟನೆಯ ಮುಖಂಡ ಪ್ರಣವ್ ಪಾಂಡ್ಯ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಮುಖ ನೋಡಲು ನಾವು ಬಯಸುವುದಿಲ್ಲ ಎಂದಿದ್ದಾರೆ.

ನಾವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ನಾಯಕರೆಂದು ಒಪ್ಪುತ್ತೇವೆಯೇ ಹೊರತು, ರಾಹುಲ್ ಗಾಂಧಿಯವರನ್ನು ಒಪ್ಪುವುದಿಲ್ಲ. ನಾವು ಅವರ ಮುಖವನ್ನು ನೋಡಲು ಇಷ್ಟಪಡುವುದಿಲ್ಲ. ಅವರು ಬೇಕಾದರೆ ಭೇಟಿಯಾಗಲು ನಮ್ಮ ಬಳಿ ಬರಬಹುದು ಎಂದು ತಿಳಿಸಿದ್ದಾರೆ.

ಈಗಾಗಲೇ ಪ್ರಣವ್ ಪಾಂಡೆ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಇತ್ತೀಚೆಗೆ ಆರೆಸ್ಸೆಸ್ ಮುಖಂಡರನ್ನೂ ಪಾಂಡೆ ಭೇಟಿಯಾಗಿ ಚರ್ಚಿಸಿದ್ದಾರೆ. ಆದಾಗ್ಯೂ ಅಮಿತ್ ಶಾ ಅವರು ಪ್ರಣವ್ ಪಾಂಡೆ ಸೇರಿ ಹಲವು ಹಿಂದೂ ಸಂಘಟನೆಗಳ ಮುಖಂಡರನ್ನು ಭೇಟಿಯಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search