• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನನಗೆ ರಾಹುಲ್ ಗಾಂಧಿ ಮುಖ ಕಂಡರೇನೇ ಆಗುವುದಿಲ್ಲ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On June 29, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ರಾಹುಲ್ ಗಾಂಧಿ! ಈ ಹೆಸರು ಕಾಂಗ್ರೆಸ್ ಮುಖಂಡರಿಗೆ ವಿನೀತ ಭಾವ ಮೂಡಿಸುತ್ತದೆ. ಇವರೇ ನಮ್ಮ ನಾಯಕ ಎಂದು ಬೀಗುವಂತೆ ಮಾಡುತ್ತದೆ. ಆದರೆ ಬೇರೆಯವರಿಗೆ ಮಾತ್ರ ರಾಹುಲ್ ಗಾಂಧಿ ಮಾತಿಗೆ ನಿಂತರೆ ನಗು ಬರುತ್ತದೆ. ಸಾಮಾಜಿಕ ಜಾಲತಾಣದಲ್ಲಂತೂ ರಾಹುಲ್ ಗಾಂಧಿಯವರನ್ನು ಟ್ರೋಲ್ ಮಾಡುವವರ ಸಂಖ್ಯೆ ಅಪಾರವಾಗಿದೆ. ದೃಶ್ಯಮಾಧ್ಯಮಗಳೂ ಅವರ ಹೇಳಿಕೆಗಳನ್ನು ಹಾಸ್ಯವಾಗಿ ತೋರಿಸುತ್ತವೆ.

ಇಂತಹ ರಾಹುಲ್ ಗಾಂಧಿಯವರು ಈಗಾಗಲೇ ಲೋಕಸಭೆ ಚುನಾವಣೆಗೆ ಸಿದ್ಧರಾಗಿದ್ದಾರೆ. ತಮ್ಮ ನೇತೃತ್ವದಲ್ಲಿ ಯುಪಿಎ ಚುನಾವಣೆ ನಡೆದು, ಗೆಲ್ಲುವ ಮೂಲಕ ದೇಶದ ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ. ಈಗಾಗಲೇ ಅವರು ತಾವೇ ಮುಂದಿನ ಪ್ರಧಾನಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಸಹ.

ಆದರೆ ಇಂತಹ ಮುಖಂಡ ರಾಹುಲ್ ಗಾಂಧಿಯವರ ಮುಖ ಎಂದರೇನೆ ನನಗೆ ಇಷ್ಟವಿಲ್ಲ ಎಂದು ಅಂತಾರಾಷ್ಟ್ರೀಯ ಗಾಯತ್ರಿ ಪರಿವಾರ ಹಿಂದೂ ಸಂಘಟನೆಯ ಮುಖಂಡ ಪ್ರಣವ್ ಪಾಂಡ್ಯ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಮುಖ ನೋಡಲು ನಾವು ಬಯಸುವುದಿಲ್ಲ ಎಂದಿದ್ದಾರೆ.

ನಾವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ನಾಯಕರೆಂದು ಒಪ್ಪುತ್ತೇವೆಯೇ ಹೊರತು, ರಾಹುಲ್ ಗಾಂಧಿಯವರನ್ನು ಒಪ್ಪುವುದಿಲ್ಲ. ನಾವು ಅವರ ಮುಖವನ್ನು ನೋಡಲು ಇಷ್ಟಪಡುವುದಿಲ್ಲ. ಅವರು ಬೇಕಾದರೆ ಭೇಟಿಯಾಗಲು ನಮ್ಮ ಬಳಿ ಬರಬಹುದು ಎಂದು ತಿಳಿಸಿದ್ದಾರೆ.

ಈಗಾಗಲೇ ಪ್ರಣವ್ ಪಾಂಡೆ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಇತ್ತೀಚೆಗೆ ಆರೆಸ್ಸೆಸ್ ಮುಖಂಡರನ್ನೂ ಪಾಂಡೆ ಭೇಟಿಯಾಗಿ ಚರ್ಚಿಸಿದ್ದಾರೆ. ಆದಾಗ್ಯೂ ಅಮಿತ್ ಶಾ ಅವರು ಪ್ರಣವ್ ಪಾಂಡೆ ಸೇರಿ ಹಲವು ಹಿಂದೂ ಸಂಘಟನೆಗಳ ಮುಖಂಡರನ್ನು ಭೇಟಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search