• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ವಿರುದ್ಧ ಹೋರಾಟಕ್ಕೆ ಪಾಕಿಸ್ತಾನದ ಮಕ್ಕಳ ಬಳಕೆ: ವಿಶ್ವಸಂಸ್ಥೆ ಆಘಾತಕಾರಿ ವರದಿ

TNN Correspondent Posted On June 29, 2018
0


0
Shares
  • Share On Facebook
  • Tweet It

ನ್ಯೂಯಾರ್ಕ್‌: ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ ಪಾಕಿಸ್ತಾನ ಮತ್ತು ಪಾಕಿಸ್ತಾನ ಸಾಕಿರುವ ಭಯೋತ್ಪಾದಕ ಸಂಘಟನೆಗಳು ಇದೀಗ, ಭಾರತದ ವಿರುದ್ಧ ರೂಪಿಸಿರುವ ಸಂಚು ಬಯಲಾಗಿದೆ.  ಭಾರತದ ಸೇನೆಯ ವಿರುದ್ಧ ಹೋರಾಡಲು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಜೈಷ್ ಎ ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮಕ್ಕಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ ಎಂದು ವಿಶ್ವಸಂಸ್ಥೆಯೇ ವರದಿ ಬಿಡುಗಡೆ ಮಾಡಿದೆ.

2017ರಲ್ಲಿ ಜಗತ್ತಿನಾದ್ಯಂತ ಹತ್ತು ಸಾವಿರ ಮಕ್ಕಳನ್ನು ಹತ್ಯೆ ಮಾಡಲಾಗಿದೆ.  ಕಳೆದ ವರ್ಷ 8 ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಉಗ್ರ ಸಂಘಟನೆಗಳು ನೇಮಿಸಿಕೊಂಡಿದ್ದು, ಅವರನ್ನು ಭಯೋತ್ಪಾದನ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಮಕ್ಕಳ ಮತ್ತು ಸಶಸ್ತ್ರ ಸಂಘರ್ಷ ಕುರಿತ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗಳ ವಾರ್ಷಿಕ ವರದಿಯಲ್ಲಿ ಈ ಕುರಿತು ಉಲ್ಲೇಖಿಸಿದ್ದು,

ಜಮ್ಮು -ಕಾಶ್ಮೀರದಲ್ಲಿ ಗಲಭೆ ಸೃಷ್ಟಿಸಲು ಹಾಗೂ ಭಾರತೀಯ ಸೇನೆ ವಿರುದ್ಧ ಹೋರಾಡಲು ಎರಡು ಉಗ್ರ ಸಂಘಟನೆಗಳು ಮಕ್ಕಳನ್ನು ನೇಮಿಸಿಕೊಂಡಿವೆ. ಅಲ್ಲದೇ ಸೇನೆ ವಿರುದ್ಧ ಬೇಹುಗಾರಿಕೆ ನಡೆಸಲು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿ ತಿಳಿಸಿದೆ.

ಛತ್ತೀಸ್‌ಗಢ, ಜಾರ್ಖಂಡ್‌ ನಲ್ಲೂ ನಕ್ಸಲರು ಮಕ್ಕಳನ್ನು ನೇಮಿಸಿಕೊಂಡು, ದುಷ್ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಪಾಕಿಸ್ತಾನದಲ್ಲಿ ಶಾಲೆ, ಮದರಸಾಗಳಿಂದ ಮಕ್ಕಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಕಳೆದ ಜನವರಿಯಲ್ಲಿ ತೆಹ್ರಿಕ್‌-ಇ-ತಾಲಿಬಾನ್‌ ಪಾಕಿಸ್ತಾನ ಸಂಘಟನೆಯು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಬಾಲಕಿಯರು ಸೇರಿ ಮಕ್ಕಳನ್ನು ಆತ್ಮಹತ್ಯಾ ದಾಳಿಗೆ ಪ್ರೇರೇಪಿಸುತ್ತಿರುವುದು ತಿಳಿದು ಬಂದಿದೆ. ಪಾಕಿಸ್ತಾನ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್‌ ಸೂಚಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search