• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದ ವಿರುದ್ಧ ಹೋರಾಟಕ್ಕೆ ಪಾಕಿಸ್ತಾನದ ಮಕ್ಕಳ ಬಳಕೆ: ವಿಶ್ವಸಂಸ್ಥೆ ಆಘಾತಕಾರಿ ವರದಿ

TNN Correspondent Posted On June 29, 2018


  • Share On Facebook
  • Tweet It

ನ್ಯೂಯಾರ್ಕ್‌: ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ ಪಾಕಿಸ್ತಾನ ಮತ್ತು ಪಾಕಿಸ್ತಾನ ಸಾಕಿರುವ ಭಯೋತ್ಪಾದಕ ಸಂಘಟನೆಗಳು ಇದೀಗ, ಭಾರತದ ವಿರುದ್ಧ ರೂಪಿಸಿರುವ ಸಂಚು ಬಯಲಾಗಿದೆ.  ಭಾರತದ ಸೇನೆಯ ವಿರುದ್ಧ ಹೋರಾಡಲು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಜೈಷ್ ಎ ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮಕ್ಕಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ ಎಂದು ವಿಶ್ವಸಂಸ್ಥೆಯೇ ವರದಿ ಬಿಡುಗಡೆ ಮಾಡಿದೆ.

2017ರಲ್ಲಿ ಜಗತ್ತಿನಾದ್ಯಂತ ಹತ್ತು ಸಾವಿರ ಮಕ್ಕಳನ್ನು ಹತ್ಯೆ ಮಾಡಲಾಗಿದೆ.  ಕಳೆದ ವರ್ಷ 8 ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಉಗ್ರ ಸಂಘಟನೆಗಳು ನೇಮಿಸಿಕೊಂಡಿದ್ದು, ಅವರನ್ನು ಭಯೋತ್ಪಾದನ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಮಕ್ಕಳ ಮತ್ತು ಸಶಸ್ತ್ರ ಸಂಘರ್ಷ ಕುರಿತ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗಳ ವಾರ್ಷಿಕ ವರದಿಯಲ್ಲಿ ಈ ಕುರಿತು ಉಲ್ಲೇಖಿಸಿದ್ದು,

ಜಮ್ಮು -ಕಾಶ್ಮೀರದಲ್ಲಿ ಗಲಭೆ ಸೃಷ್ಟಿಸಲು ಹಾಗೂ ಭಾರತೀಯ ಸೇನೆ ವಿರುದ್ಧ ಹೋರಾಡಲು ಎರಡು ಉಗ್ರ ಸಂಘಟನೆಗಳು ಮಕ್ಕಳನ್ನು ನೇಮಿಸಿಕೊಂಡಿವೆ. ಅಲ್ಲದೇ ಸೇನೆ ವಿರುದ್ಧ ಬೇಹುಗಾರಿಕೆ ನಡೆಸಲು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿ ತಿಳಿಸಿದೆ.

ಛತ್ತೀಸ್‌ಗಢ, ಜಾರ್ಖಂಡ್‌ ನಲ್ಲೂ ನಕ್ಸಲರು ಮಕ್ಕಳನ್ನು ನೇಮಿಸಿಕೊಂಡು, ದುಷ್ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಪಾಕಿಸ್ತಾನದಲ್ಲಿ ಶಾಲೆ, ಮದರಸಾಗಳಿಂದ ಮಕ್ಕಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಕಳೆದ ಜನವರಿಯಲ್ಲಿ ತೆಹ್ರಿಕ್‌-ಇ-ತಾಲಿಬಾನ್‌ ಪಾಕಿಸ್ತಾನ ಸಂಘಟನೆಯು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಬಾಲಕಿಯರು ಸೇರಿ ಮಕ್ಕಳನ್ನು ಆತ್ಮಹತ್ಯಾ ದಾಳಿಗೆ ಪ್ರೇರೇಪಿಸುತ್ತಿರುವುದು ತಿಳಿದು ಬಂದಿದೆ. ಪಾಕಿಸ್ತಾನ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್‌ ಸೂಚಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search