• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಾನವೀಯತೆ ಮೆರೆದ ಭಾರತೀಯ ಸೇನೆ, ಪಾಕ್ ಬಾಲಕನನ್ನು ಸಿಹಿ ನೀಡಿ ಹಸ್ತಾಂತರಿಸಿದ ಸೈನಿಕರು

TNN Correspondent Posted On June 29, 2018


  • Share On Facebook
  • Tweet It

ಶ್ರೀನಗರ: ಭಾರತೀಯ ಸೇನೆಯ ಅಧಿಕಾರಿಗಳು ಕ್ರೌರ್ಯ ಮೆರೆದವರಿಗೆ ಅದಕ್ಕೆ ತಕ್ಕಂತೆ ಉತ್ತರ ನೀಡುತ್ತಾರೆ. ಆದರೆ ಮಾನವೀಯತೆ ನೆಲೆಯಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಾರೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಭಾರತದೊಂದಿಗೆ ಸದಾ ಸೆಣಸಾಟಕ್ಕೆ ಇಳಿಯುವ ಪಾಕಿಸ್ತಾನದ ಬಾಲಕನೊಬ್ಬ ನಾಲ್ಕು ದಿನಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಾರತದ ಗಡಿಯೊಳಗೆ ಪ್ರವೇಶಿಸಿದ್ದ. 11 ವರ್ಷದ ಆ ಬಾಲಕನನ್ನು ಭಾರತೀಯ ಸೈನಿಕರು ಪಾಕಿಸ್ತಾನದ ಅಧಿಕಾರಿಗಳಿಗೆ ಸಿಹಿಯೊಂದಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

11 ವರ್ಷದ ಬಾಲಕ ಅಬ್ದುಲ್ಲಾ ಜೂನ್‌ 24ರಂದು ಭಾರತದ ಗಡಿಯೊಳಗೆ ಪ್ರವೇಶಿಸಿದ್ದ. ಅಕ್ರಮವಾಗಿ ಪ್ರವೇಶಿಸಿದ ಬಾಲಕನ್ನನ್ನು ಪೂಂಛ್‌ ಜಿಲ್ಲೆಯ ದೇಗ್ವಾರ್‌ ವಲಯದಲ್ಲಿ ಭಾರತೀಯ ಸೇನೆ ಪತ್ತೆ ಹಚ್ಚಿತ್ತು. ಆತನನ್ನು ಅದೇ ದಿನ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಒಪ್ಪಿಸಲಾಗಿತ್ತು.

ನಂತರ ಪೊಲೀಸರು ಬಾಲಕನನ್ನು ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಂಡರು. ಅಲ್ಲದೇ ಆತನನ್ನು ಪಾಕಿಸ್ತಾನದ ಅಧಿಕಾರಿಗಳಿಗೆ ಹಸ್ತಾಂತರಿಸಿ, ಸ್ನೇಹವೃದ್ಧಿಯತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ.
ಬಾಲಕನ ವಯಸ್ಸು ಪರಿಗಣಿಸಿ, ಭಾರತ ಮತ್ತು ಪಾಕಿಸ್ತಾನದ ಮಧ್ಯ ಬಾಂಧವ್ಯ ವೃದ್ಧಿ ಉತ್ತೇಜಿಸಲು ಅಬ್ದುಲ್ಲಾನನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಲಾಗಿದೆ ಎಂದು ಭಾರತೀಯ ಸೇನೆಯ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search