• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾನವೀಯತೆ ಮೆರೆದ ಭಾರತೀಯ ಸೇನೆ, ಪಾಕ್ ಬಾಲಕನನ್ನು ಸಿಹಿ ನೀಡಿ ಹಸ್ತಾಂತರಿಸಿದ ಸೈನಿಕರು

TNN Correspondent Posted On June 29, 2018
0


0
Shares
  • Share On Facebook
  • Tweet It

ಶ್ರೀನಗರ: ಭಾರತೀಯ ಸೇನೆಯ ಅಧಿಕಾರಿಗಳು ಕ್ರೌರ್ಯ ಮೆರೆದವರಿಗೆ ಅದಕ್ಕೆ ತಕ್ಕಂತೆ ಉತ್ತರ ನೀಡುತ್ತಾರೆ. ಆದರೆ ಮಾನವೀಯತೆ ನೆಲೆಯಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಾರೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಭಾರತದೊಂದಿಗೆ ಸದಾ ಸೆಣಸಾಟಕ್ಕೆ ಇಳಿಯುವ ಪಾಕಿಸ್ತಾನದ ಬಾಲಕನೊಬ್ಬ ನಾಲ್ಕು ದಿನಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಾರತದ ಗಡಿಯೊಳಗೆ ಪ್ರವೇಶಿಸಿದ್ದ. 11 ವರ್ಷದ ಆ ಬಾಲಕನನ್ನು ಭಾರತೀಯ ಸೈನಿಕರು ಪಾಕಿಸ್ತಾನದ ಅಧಿಕಾರಿಗಳಿಗೆ ಸಿಹಿಯೊಂದಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

11 ವರ್ಷದ ಬಾಲಕ ಅಬ್ದುಲ್ಲಾ ಜೂನ್‌ 24ರಂದು ಭಾರತದ ಗಡಿಯೊಳಗೆ ಪ್ರವೇಶಿಸಿದ್ದ. ಅಕ್ರಮವಾಗಿ ಪ್ರವೇಶಿಸಿದ ಬಾಲಕನ್ನನ್ನು ಪೂಂಛ್‌ ಜಿಲ್ಲೆಯ ದೇಗ್ವಾರ್‌ ವಲಯದಲ್ಲಿ ಭಾರತೀಯ ಸೇನೆ ಪತ್ತೆ ಹಚ್ಚಿತ್ತು. ಆತನನ್ನು ಅದೇ ದಿನ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಒಪ್ಪಿಸಲಾಗಿತ್ತು.

ನಂತರ ಪೊಲೀಸರು ಬಾಲಕನನ್ನು ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಂಡರು. ಅಲ್ಲದೇ ಆತನನ್ನು ಪಾಕಿಸ್ತಾನದ ಅಧಿಕಾರಿಗಳಿಗೆ ಹಸ್ತಾಂತರಿಸಿ, ಸ್ನೇಹವೃದ್ಧಿಯತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ.
ಬಾಲಕನ ವಯಸ್ಸು ಪರಿಗಣಿಸಿ, ಭಾರತ ಮತ್ತು ಪಾಕಿಸ್ತಾನದ ಮಧ್ಯ ಬಾಂಧವ್ಯ ವೃದ್ಧಿ ಉತ್ತೇಜಿಸಲು ಅಬ್ದುಲ್ಲಾನನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಲಾಗಿದೆ ಎಂದು ಭಾರತೀಯ ಸೇನೆಯ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!

  • Privacy Policy
  • Contact
© Tulunadu Infomedia.

Press enter/return to begin your search