• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ತಪ್ಪಿದ ಅನಾಹುತ: ಪ್ರಯಾಣಿಕರನ್ನು ರಕ್ಷಿಸಿದ ಬಸ್‌ ಕಂಡಕ್ಟರ್‌!

Tulunadu News Posted On June 29, 2018
0


0
Shares
  • Share On Facebook
  • Tweet It

ಉಡುಪಿ: ಶಿವಮೊಗ್ಗದಿಂದ ಉಡುಪಿಗೆ ಬರಬೇಕಿದ್ದ ಖಾಸಗಿ ಬಸ್ಸಿನ ಕಂಡಕ್ಟರ್‌ ಒಬ್ಬರು ಪ್ರಯಾಣಿಕರ ಜೀವವನ್ನು ಉಳಿಸಿದ್ದಾರೆ. ಶಿವಮೊಗ್ಗದಿಂದ ಕ್ರಿಸ್ತರಾಜ್‌ ಬಸ್ಸು ಉಡುಪಿಗೆ ಹೊರಟಿತ್ತು. 3.20ಕ್ಕೆ ಉಡುಪಿಗೆ ಬರಬೇಕಿತ್ತು. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ 17ನೇ ಮೈಲಿಕಲ್ಲು ಗಾಜನೂರು ತುಂಗಾ ಅಣೆಕಟ್ಟಿನ ಹಿನ್ನೀರಿನ ಪ್ರದೇಶದ ರಸ್ತೆಯಾಗಿ ಬಸ್ಸು ಸಾಗುತ್ತಿದ್ದಾಗ ಮಧ್ಯಾಹ್ನ 12 ಗಂಟೆ ಹೊತ್ತಿಗೆ ಚಾಲಕನಿಗೆ ತಲೆಸುತ್ತು ಬಂದಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಬಸ್ಸು ಎಡಬದಿಗೆ ಸಾಗಿತ್ತು. ಕಂಡಕ್ಟರ್‌ ತೀರ್ಥಹಳ್ಳಿಯ ಭಗವಾನ್‌ ಅವರು ಚಾಲಕರ ಸೀಟಿನ ಪಕ್ಕದಲ್ಲಿಯೇ ಇದ್ದರು. ಬಸ್ಸು ನಿಯಂತ್ರಣ ತಪ್ಪಿದ ಕೂಡಲೇ ಚಾಲಕನ ಸೀಟಿನತ್ತ ಧಾವಿಸಿದ ಭಗವಾನ್‌ ಅವರು ಸ್ಟೇರಿಂಗ್‌ ಹಿಡಿದು ಬಸ್ಸನ್ನು ಬಲಬದಿಗೆ ಸರಿಸಿ ರಸ್ತೆಯತ್ತ ತಂದರು. ಇಲ್ಲದಿದ್ದರೆ ಬಸ್ಸು ಹೊಳೆಯ ಗುಂಡಿಗೆ ಬಿದ್ದು ಪ್ರಾಣಹಾನಿಯಾಗುತ್ತಿತ್ತು.

ಬಸ್ಸು ಚಾಲಕನ ನಿಯಂತ್ರಣ ತಪ್ಪುತ್ತಲೇ ಇಬ್ಬರು ಬಸ್ಸಿನಿಂದ ಹಾರಲು ಬಸ್ಸಿನ ಕಿಟಕಿ ಗಾಜು ಒಡೆದರು. ಅಷ್ಟರಲ್ಲಿ ಬಸ್ಸು ನಿಯಂತ್ರಣಕ್ಕೆ ಬಂತು. ನಿರ್ವಾಹಕನಿಗೆ ಬಸ್ಸು ಚಲಾಯಿಸಲು ಬರುತ್ತಿದ್ದ ಕಾರಣ ಪ್ರಯಾಣಿಕರು ಬಚಾವ್‌ ಆಗಿದ್ದಾರೆ. ನಿರ್ವಾಹಕರ ಈ ಕಾರ್ಯವನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search