• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ತಪ್ಪಿದ ಅನಾಹುತ: ಪ್ರಯಾಣಿಕರನ್ನು ರಕ್ಷಿಸಿದ ಬಸ್‌ ಕಂಡಕ್ಟರ್‌!

Tulunadu News Posted On June 29, 2018
0


0
Shares
  • Share On Facebook
  • Tweet It

ಉಡುಪಿ: ಶಿವಮೊಗ್ಗದಿಂದ ಉಡುಪಿಗೆ ಬರಬೇಕಿದ್ದ ಖಾಸಗಿ ಬಸ್ಸಿನ ಕಂಡಕ್ಟರ್‌ ಒಬ್ಬರು ಪ್ರಯಾಣಿಕರ ಜೀವವನ್ನು ಉಳಿಸಿದ್ದಾರೆ. ಶಿವಮೊಗ್ಗದಿಂದ ಕ್ರಿಸ್ತರಾಜ್‌ ಬಸ್ಸು ಉಡುಪಿಗೆ ಹೊರಟಿತ್ತು. 3.20ಕ್ಕೆ ಉಡುಪಿಗೆ ಬರಬೇಕಿತ್ತು. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ 17ನೇ ಮೈಲಿಕಲ್ಲು ಗಾಜನೂರು ತುಂಗಾ ಅಣೆಕಟ್ಟಿನ ಹಿನ್ನೀರಿನ ಪ್ರದೇಶದ ರಸ್ತೆಯಾಗಿ ಬಸ್ಸು ಸಾಗುತ್ತಿದ್ದಾಗ ಮಧ್ಯಾಹ್ನ 12 ಗಂಟೆ ಹೊತ್ತಿಗೆ ಚಾಲಕನಿಗೆ ತಲೆಸುತ್ತು ಬಂದಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಬಸ್ಸು ಎಡಬದಿಗೆ ಸಾಗಿತ್ತು. ಕಂಡಕ್ಟರ್‌ ತೀರ್ಥಹಳ್ಳಿಯ ಭಗವಾನ್‌ ಅವರು ಚಾಲಕರ ಸೀಟಿನ ಪಕ್ಕದಲ್ಲಿಯೇ ಇದ್ದರು. ಬಸ್ಸು ನಿಯಂತ್ರಣ ತಪ್ಪಿದ ಕೂಡಲೇ ಚಾಲಕನ ಸೀಟಿನತ್ತ ಧಾವಿಸಿದ ಭಗವಾನ್‌ ಅವರು ಸ್ಟೇರಿಂಗ್‌ ಹಿಡಿದು ಬಸ್ಸನ್ನು ಬಲಬದಿಗೆ ಸರಿಸಿ ರಸ್ತೆಯತ್ತ ತಂದರು. ಇಲ್ಲದಿದ್ದರೆ ಬಸ್ಸು ಹೊಳೆಯ ಗುಂಡಿಗೆ ಬಿದ್ದು ಪ್ರಾಣಹಾನಿಯಾಗುತ್ತಿತ್ತು.

ಬಸ್ಸು ಚಾಲಕನ ನಿಯಂತ್ರಣ ತಪ್ಪುತ್ತಲೇ ಇಬ್ಬರು ಬಸ್ಸಿನಿಂದ ಹಾರಲು ಬಸ್ಸಿನ ಕಿಟಕಿ ಗಾಜು ಒಡೆದರು. ಅಷ್ಟರಲ್ಲಿ ಬಸ್ಸು ನಿಯಂತ್ರಣಕ್ಕೆ ಬಂತು. ನಿರ್ವಾಹಕನಿಗೆ ಬಸ್ಸು ಚಲಾಯಿಸಲು ಬರುತ್ತಿದ್ದ ಕಾರಣ ಪ್ರಯಾಣಿಕರು ಬಚಾವ್‌ ಆಗಿದ್ದಾರೆ. ನಿರ್ವಾಹಕರ ಈ ಕಾರ್ಯವನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 5
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search