• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ ಸುದ್ದಿ 

ಸಾವಿನ ನಂತರವೂ ಅಂಗ ದಾನದ ಮೂಲಕ ಏಳು ಜೀವ ಉಳಿಸಿದ ನಿರ್ಮಲಾ ಭಟ್

Tulunadu News Posted On June 29, 2018
0


0
Shares
  • Share On Facebook
  • Tweet It

ಉಡುಪಿ : ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರು ಏಳು ಜೀವಗಳನ್ನು ಉಳಿಸಿದ್ದಾರೆ. ತಾವು ಮೃತಪಡುವಾಗ ಆಕೆ ಮಾಡಿದ ಸಾಹಸ ಅಂಥದ್ದಾ ಎಂದು ಹುಬ್ಬೇರಿಸುವ ಮುನ್ನ ವರದಿಯನ್ನೇ ಪೂರ್ತಿ ಓದಿಬಿಡಿ. ಆಕೆ ಹೆಸರು ನಿರ್ಮಲಾ ಭಟ್.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನವರು. ಅಪಘಾತದಲ್ಲಿ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ವಿಚಾರವನ್ನು ಮಣಿಪಾಲದ ವೈದ್ಯರು ಘೋಷಣೆ ಮಾಡಿದರು. ಆಗ ನಿರ್ಮಲಾ ಭಟ್ ಅವರ ಕುಟುಂಬ ಕೂಡ ಇತರ ಎಲ್ಲರಂತೆ ದುಃಖದಲ್ಲಿ ಮುಳುಗಿದ್ದು ಸುಳ್ಳಲ್ಲ. ಆದರೆ ನಿರ್ಮಲಾ ಅವರ ಅಂಗದಾನ ಮಾಡುವ ತೀರ್ಮಾನ ಕೈಗೊಂಡರು. ಕುಟುಂಬದವರ ಅನುಮತಿಯನ್ನು ಪಡೆದು, ಇದೀಗ ಅಂಗ ದಾನದ ಮೂಲಕ ಏಳು ಜೀವವನ್ನು ಉಳಿಸಲಾಗಿದೆ. ನಿರ್ಮಲಾ ಅವರ ಎರಡು ಹೃದಯ ಕವಾಟ, ಕಣ್ಣು ಗುಡ್ಡೆ (ಕಾರ್ನಿಯಾ), ಮೂತ್ರಪಿಂಡ (ಕಿಡ್ನಿ) ಮತ್ತು ಯಕೃತ್ತು (ಲಿವರ್) ಕಸಿ ಮಾಡಿ, ಮಣಿಪಾಲ ಕಸ್ತೂರಬಾ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ, ಕಣ್ಣು ಗುಡ್ಡೆ ಮತ್ತು ಒಂದು ಮೂತ್ರಪಿಂಡವನ್ನು ಬೆಂಗಳೂರಿನಲ್ಲಿ ಗುರುತಿಸಿದ ರೋಗಿಗಳಿಗೆ ನೀಡಲಾಗಿದೆ. ಯಕೃತ್ತು ಮತ್ತು ಎರಡು ಹೃದಯ ಕವಾಟವನ್ನು ಮಂಗಳೂರಿನ ಗುರುತಿಸಿದ ರೋಗಿಗೆ ಹಾಗೂ ಒಂದು ಮೂತ್ರಪಿಂಡವನ್ನು ಬೆಂಗಳೂರಿಗೆ ಝೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಯಿತು.

ಒಟ್ಟಿನಲ್ಲಿ ನಿರ್ಮಲಾ ಭಟ್ ಅಂಗ ದಾನದ ಮೂಲಕ ಏಳು ಮಂದಿಯಲ್ಲಿ ಜೀವಂತವಿದ್ದಾರೆ. ಮಣಿಪಾಲದ ವೈದ್ಯರು ಎರಡನೇ ಬಾರಿ ಯಶಸ್ವಿಯಾಗಿ ಅಂಗಗಳನ್ನು ರವಾನಿಸಿದರು

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search