• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಾವಿನ ನಂತರವೂ ಅಂಗ ದಾನದ ಮೂಲಕ ಏಳು ಜೀವ ಉಳಿಸಿದ ನಿರ್ಮಲಾ ಭಟ್

AvatarTulunadu News Posted On June 29, 2018


  • Share On Facebook
  • Tweet It

ಉಡುಪಿ : ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರು ಏಳು ಜೀವಗಳನ್ನು ಉಳಿಸಿದ್ದಾರೆ. ತಾವು ಮೃತಪಡುವಾಗ ಆಕೆ ಮಾಡಿದ ಸಾಹಸ ಅಂಥದ್ದಾ ಎಂದು ಹುಬ್ಬೇರಿಸುವ ಮುನ್ನ ವರದಿಯನ್ನೇ ಪೂರ್ತಿ ಓದಿಬಿಡಿ. ಆಕೆ ಹೆಸರು ನಿರ್ಮಲಾ ಭಟ್.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನವರು. ಅಪಘಾತದಲ್ಲಿ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ವಿಚಾರವನ್ನು ಮಣಿಪಾಲದ ವೈದ್ಯರು ಘೋಷಣೆ ಮಾಡಿದರು. ಆಗ ನಿರ್ಮಲಾ ಭಟ್ ಅವರ ಕುಟುಂಬ ಕೂಡ ಇತರ ಎಲ್ಲರಂತೆ ದುಃಖದಲ್ಲಿ ಮುಳುಗಿದ್ದು ಸುಳ್ಳಲ್ಲ. ಆದರೆ ನಿರ್ಮಲಾ ಅವರ ಅಂಗದಾನ ಮಾಡುವ ತೀರ್ಮಾನ ಕೈಗೊಂಡರು. ಕುಟುಂಬದವರ ಅನುಮತಿಯನ್ನು ಪಡೆದು, ಇದೀಗ ಅಂಗ ದಾನದ ಮೂಲಕ ಏಳು ಜೀವವನ್ನು ಉಳಿಸಲಾಗಿದೆ. ನಿರ್ಮಲಾ ಅವರ ಎರಡು ಹೃದಯ ಕವಾಟ, ಕಣ್ಣು ಗುಡ್ಡೆ (ಕಾರ್ನಿಯಾ), ಮೂತ್ರಪಿಂಡ (ಕಿಡ್ನಿ) ಮತ್ತು ಯಕೃತ್ತು (ಲಿವರ್) ಕಸಿ ಮಾಡಿ, ಮಣಿಪಾಲ ಕಸ್ತೂರಬಾ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ, ಕಣ್ಣು ಗುಡ್ಡೆ ಮತ್ತು ಒಂದು ಮೂತ್ರಪಿಂಡವನ್ನು ಬೆಂಗಳೂರಿನಲ್ಲಿ ಗುರುತಿಸಿದ ರೋಗಿಗಳಿಗೆ ನೀಡಲಾಗಿದೆ. ಯಕೃತ್ತು ಮತ್ತು ಎರಡು ಹೃದಯ ಕವಾಟವನ್ನು ಮಂಗಳೂರಿನ ಗುರುತಿಸಿದ ರೋಗಿಗೆ ಹಾಗೂ ಒಂದು ಮೂತ್ರಪಿಂಡವನ್ನು ಬೆಂಗಳೂರಿಗೆ ಝೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಯಿತು.

ಒಟ್ಟಿನಲ್ಲಿ ನಿರ್ಮಲಾ ಭಟ್ ಅಂಗ ದಾನದ ಮೂಲಕ ಏಳು ಮಂದಿಯಲ್ಲಿ ಜೀವಂತವಿದ್ದಾರೆ. ಮಣಿಪಾಲದ ವೈದ್ಯರು ಎರಡನೇ ಬಾರಿ ಯಶಸ್ವಿಯಾಗಿ ಅಂಗಗಳನ್ನು ರವಾನಿಸಿದರು

  • Share On Facebook
  • Tweet It


- Advertisement -


Trending Now
ಜಾತಿ ಮೀಸಲಾತಿ ತೆಗೆದು ಆರ್ಥಿಕ ಮೀಸಲಾತಿ ಜಾರಿಗೆ ಬರಲಿ!!
Tulunadu News February 27, 2021
ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬಂದ 1 ವರ್ಷದಲ್ಲಿಯೇ ಲಗಾಮು ತಪ್ಪಿ ಹೋಗಿದೆ!!
Tulunadu News February 26, 2021
Leave A Reply

  • Recent Posts

    • ಜಾತಿ ಮೀಸಲಾತಿ ತೆಗೆದು ಆರ್ಥಿಕ ಮೀಸಲಾತಿ ಜಾರಿಗೆ ಬರಲಿ!!
    • ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬಂದ 1 ವರ್ಷದಲ್ಲಿಯೇ ಲಗಾಮು ತಪ್ಪಿ ಹೋಗಿದೆ!!
    • ಪಾಲಿಕೆಯ ಹೊಸ ನಿಯಮದಿಂದ ಉದ್ದಿಮೆದಾರ ಬೀದಿಗೆ??
    • ನೀರು ಬರುತ್ತಿಲ್ಲ, ಮಣ್ಣು ತೆಗೆಸುವ ಗಂಡಸು ಪಾಲಿಕೆಯಲ್ಲಿ ಇದ್ದಾರಾ?
    • ಕಾಂಗ್ರೆಸ್ಸಿನ ಲೆಕ್ಕ ಕೊಡಿ ಅಭಿಯಾನ ಖಾದರ್ ಮನೆಯಿಂದಲೇ ಆರಂಭವಾಗಲಿ!!
    • ಖಾದರ್ ಸ್ವಕ್ಷೇತ್ರದಲ್ಲಿ ತ್ಯಾಜ್ಯ ಘಟಕ ಇಲ್ಲದಿದ್ದರೆ ಕಸ ಪಂಚಾಯತ್ ಅಂಗಳದಲ್ಲಿ ಸುರಿಯಬೇಕಾ!
    • ಪೆಟ್ರೋಲ್, ಡಿಸೀಲ್ ದರ ಹತ್ತು ರೂಪಾಯಿ ಇಳಿಸಿ ಬೇರೆ ರಾಜ್ಯಕ್ಕೆ ಕರ್ನಾಟಕ ಮಾದರಿಯಾಗಬಹುದಲ್ಲ!!
    • ಮಂಗನ ಕೈಗೆ ಮಾಣಿಕ್ಯ, ದಿಶಾ ಕೈಗೆ ಟೂಲ್ ಕಿಟ್!!
    • ರಥೋತ್ಸವದ ಸಂಭ್ರಮದಲ್ಲಿ ಹೆರಿಟೆಜ್ ರಸ್ತೆಯ ಚೆಂದ ನೋಡಿದ್ದೀರಾ?
    • ಪಬ್ಬಸ್ ಬಳಿ ಚೂರಿ ಇರಿತ ಪ್ರಕರಣದ ಆರೋಪಿಗಳು ಅರೆಸ್ಟ್!
  • Popular Posts

    • 1
      ಜಾತಿ ಮೀಸಲಾತಿ ತೆಗೆದು ಆರ್ಥಿಕ ಮೀಸಲಾತಿ ಜಾರಿಗೆ ಬರಲಿ!!
    • 2
      ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬಂದ 1 ವರ್ಷದಲ್ಲಿಯೇ ಲಗಾಮು ತಪ್ಪಿ ಹೋಗಿದೆ!!
    • 3
      ಪಾಲಿಕೆಯ ಹೊಸ ನಿಯಮದಿಂದ ಉದ್ದಿಮೆದಾರ ಬೀದಿಗೆ??
    • 4
      ನೀರು ಬರುತ್ತಿಲ್ಲ, ಮಣ್ಣು ತೆಗೆಸುವ ಗಂಡಸು ಪಾಲಿಕೆಯಲ್ಲಿ ಇದ್ದಾರಾ?
    • 5
      ಕಾಂಗ್ರೆಸ್ಸಿನ ಲೆಕ್ಕ ಕೊಡಿ ಅಭಿಯಾನ ಖಾದರ್ ಮನೆಯಿಂದಲೇ ಆರಂಭವಾಗಲಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia, Mangalore - 1

Press enter/return to begin your search