• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಲೆಗೆ ಕುಂಕುಮ ಇಟ್ಟುಕೊಂಡು ಹೋಗಬಾರದಂತೆ, ಇದು ಕೇರಳ ಸರ್ಕಾರಿ ಶಾಲೆ ಪ್ರಾಂಶುಪಾಲನ ಉದ್ಧಟತನ

TNN Correspondent Posted On June 30, 2018
0


0
Shares
  • Share On Facebook
  • Tweet It

ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಧರ್ಮ ಬೋಧನೆ ಮಾಡುವಂತಿಲ್ಲ ಎಂದು ಸಂವಿಧಾನದಲ್ಲೇ ಉಲ್ಲೇಖಿಸಿದೆ. ಆದರೂ ಕಾನ್ವೆಂಟ್ ಶಾಲೆಗಳಲ್ಲಿ ಧರ್ಮ ಬೋಧನೆಯಾಗುತ್ತಿದೆ, ಎಷ್ಟೇ ಶಾಲೆ-ಕಾಲೇಜುಗಳಲ್ಲಿ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸಿಕೊಂಡು ಹೋಗುತ್ತಾರೆ. ಆದರೆ ಈ ಕುರಿತು ಮಾತನಾಡಿದರೆ ಕೋಮುವಾದಿ ಎನ್ನುತ್ತಾರೆ, ಮಾಧ್ಯಮಗಳೂ ಈ ವಿಷಯದಲ್ಲಿ ಸುಮ್ಮನಾಗುತ್ತವೆ.

ಹೀಗೆ ಕೇರಳದಲ್ಲಿ ಯಾವಾಗಲೂ ಹಿಂದೂಗಳೇ ಟಾರ್ಗೆಟ್. ಈಗ ಇಂಥದ್ದೊಂದು ಉದ್ಧಟತನದ ಪ್ರಕರಣ ಸುದ್ದಿಯಾಗಿದ್ದು, ಕೇರಳದ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳು ಹಣೆಗೆ ಕುಂಕುಮ ಇಟ್ಟುಕೊಂಡು, ಕೈಯಲ್ಲಿ ಪವಿತ್ರ ದಾರದ ಎಳೆಗಳನ್ನು ಕಟ್ಟಿಕೊಂಡು ಬರಬಾರದು ಎಂದು ಶಾಲೆ ಪ್ರಾಂಶುಪಾಲ ಅಧಿಸೂಚನೆ ಹೊರಡಿಸುವ ಮೂಲಕ ಉದ್ಧಟತನ ತೋರಿದ್ದಾರೆ.

ಹೌದು, ಕೇರಳದ ಪಲಕ್ಕಾಡ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲ ಈ ಆದೇಶ ಹೊರಡಿಸಿದ್ದು, ಹಣೆಗೆ ಕುಂಕುಮ ಇಟ್ಟುಕೊಂಡು ಬರುವುದು ಹಾಗೂ ಕೈಗೆ ದಾರ ಕಟ್ಟಿಕೊಂಡು ಬರುವುದು ಧಾರ್ಮಿಕ ಸಂಕೇತವಾಗಿದ್ದು, ಇವುಗಳನ್ನು ಧರಿಸಿ ಶಾಲೆಗೆ ಬರುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಅಷ್ಟೇ ಅಲ್ಲ, ಒಂದು ವೇಳೆ ಕುಂಕುಮ ಇಟ್ಟುಕೊಂಡು, ಕೈಗೆ ದಾರ ಕಟ್ಟಿಕೊಂಡು ಶಾಲೆಗೆ ಬಂದರೆ ಶಾಲೆಯಿಂದಲೇ  ಹೊರಹಾಕುವುದಾಗಿ ಎಚ್ಚರಿಸಿದ್ದಾರೆ. ಇದಕ್ಕೆ ಪೋಷಕರು ಹಾಗೂ ಹಲವು ಸಂಘಟನೆಗಳ ವಿರೋಧ ವ್ಯಕ್ತವಾಗಿದೆ. ಇಷ್ಟಾದರೂ ಈ ಪ್ರಾಂಶುಪಾಲನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಾಧ್ಯಮಗಳಲ್ಲೂ ಸುದ್ದಿಯಾಗಿಲ್ಲ. ಎಂಥ ದುರಂತವಲ್ಲವೇ ಇದು?

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search