• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಲೆಗೆ ಕುಂಕುಮ ಇಟ್ಟುಕೊಂಡು ಹೋಗಬಾರದಂತೆ, ಇದು ಕೇರಳ ಸರ್ಕಾರಿ ಶಾಲೆ ಪ್ರಾಂಶುಪಾಲನ ಉದ್ಧಟತನ

TNN Correspondent Posted On June 30, 2018
0


0
Shares
  • Share On Facebook
  • Tweet It

ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಧರ್ಮ ಬೋಧನೆ ಮಾಡುವಂತಿಲ್ಲ ಎಂದು ಸಂವಿಧಾನದಲ್ಲೇ ಉಲ್ಲೇಖಿಸಿದೆ. ಆದರೂ ಕಾನ್ವೆಂಟ್ ಶಾಲೆಗಳಲ್ಲಿ ಧರ್ಮ ಬೋಧನೆಯಾಗುತ್ತಿದೆ, ಎಷ್ಟೇ ಶಾಲೆ-ಕಾಲೇಜುಗಳಲ್ಲಿ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸಿಕೊಂಡು ಹೋಗುತ್ತಾರೆ. ಆದರೆ ಈ ಕುರಿತು ಮಾತನಾಡಿದರೆ ಕೋಮುವಾದಿ ಎನ್ನುತ್ತಾರೆ, ಮಾಧ್ಯಮಗಳೂ ಈ ವಿಷಯದಲ್ಲಿ ಸುಮ್ಮನಾಗುತ್ತವೆ.

ಹೀಗೆ ಕೇರಳದಲ್ಲಿ ಯಾವಾಗಲೂ ಹಿಂದೂಗಳೇ ಟಾರ್ಗೆಟ್. ಈಗ ಇಂಥದ್ದೊಂದು ಉದ್ಧಟತನದ ಪ್ರಕರಣ ಸುದ್ದಿಯಾಗಿದ್ದು, ಕೇರಳದ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳು ಹಣೆಗೆ ಕುಂಕುಮ ಇಟ್ಟುಕೊಂಡು, ಕೈಯಲ್ಲಿ ಪವಿತ್ರ ದಾರದ ಎಳೆಗಳನ್ನು ಕಟ್ಟಿಕೊಂಡು ಬರಬಾರದು ಎಂದು ಶಾಲೆ ಪ್ರಾಂಶುಪಾಲ ಅಧಿಸೂಚನೆ ಹೊರಡಿಸುವ ಮೂಲಕ ಉದ್ಧಟತನ ತೋರಿದ್ದಾರೆ.

ಹೌದು, ಕೇರಳದ ಪಲಕ್ಕಾಡ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲ ಈ ಆದೇಶ ಹೊರಡಿಸಿದ್ದು, ಹಣೆಗೆ ಕುಂಕುಮ ಇಟ್ಟುಕೊಂಡು ಬರುವುದು ಹಾಗೂ ಕೈಗೆ ದಾರ ಕಟ್ಟಿಕೊಂಡು ಬರುವುದು ಧಾರ್ಮಿಕ ಸಂಕೇತವಾಗಿದ್ದು, ಇವುಗಳನ್ನು ಧರಿಸಿ ಶಾಲೆಗೆ ಬರುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಅಷ್ಟೇ ಅಲ್ಲ, ಒಂದು ವೇಳೆ ಕುಂಕುಮ ಇಟ್ಟುಕೊಂಡು, ಕೈಗೆ ದಾರ ಕಟ್ಟಿಕೊಂಡು ಶಾಲೆಗೆ ಬಂದರೆ ಶಾಲೆಯಿಂದಲೇ  ಹೊರಹಾಕುವುದಾಗಿ ಎಚ್ಚರಿಸಿದ್ದಾರೆ. ಇದಕ್ಕೆ ಪೋಷಕರು ಹಾಗೂ ಹಲವು ಸಂಘಟನೆಗಳ ವಿರೋಧ ವ್ಯಕ್ತವಾಗಿದೆ. ಇಷ್ಟಾದರೂ ಈ ಪ್ರಾಂಶುಪಾಲನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಾಧ್ಯಮಗಳಲ್ಲೂ ಸುದ್ದಿಯಾಗಿಲ್ಲ. ಎಂಥ ದುರಂತವಲ್ಲವೇ ಇದು?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search