• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಂ ರಾಷ್ಟ್ರ ಸೌದಿ ಅರೇಬಿಯಾದಿಂದ ಕಾರು ಚಾಲನಾ ಪರವಾನಗಿ ಪಡೆದ ಭಾರತದ ಮೊದಲ ಮಹಿಳೆ ಯಾರು ಗೊತ್ತಾ?

TNN Correspondent Posted On June 30, 2018


  • Share On Facebook
  • Tweet It

ಸೌದಿ ಅರೇಬಿಯಾ ಇತ್ತೀಚೆಗೆ ಮೆಲ್ಲಗೆ ಬದಲಾಗುತ್ತಿದೆ. ಅದರಲ್ಲೂ ಮುಸ್ಲಿಂ ಮಹಿಳೆಯರಿಗೆ ಸ್ವಾತಂತ್ರ್ಯ ಸಿಗುತ್ತಿದೆ. ಮುಸ್ಲಿಂ ಮಹಿಳೆಯರು ಎಂದರೆ ಮನೆಯಲ್ಲಿ ಬಿದ್ದಿರುವವರು ಎಂಬ ಮಾತು ಬದಲಾಗುತ್ತಿದೆ. ಇದಕ್ಕೆ ಈ ಬಾರಿಯ ಯೋಗ ದಿನಾಚರಣೆಯಲ್ಲಿ ಹಲವು ಮಹಿಳೆಯರ ನೇತೃತ್ವದಲ್ಲೇ ಕಾರ್ಯಕ್ರಮ ಆಯೋಜಿಸಿದ್ದು ಇದಕ್ಕೆ ಸಾಕ್ಷಿಯಾಗಿದೆ.

ಇದೇ ದಿಸೆಯಲ್ಲಿ ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ಮುಸ್ಲಿಂ ಮಹಿಳೆಯರು ಸೇರಿ ಎಲ್ಲರೂ ಕಾರು ಚಲಾಯಿಬಹುದು ಎಂಬ ಅನುಮತಿ ಸಿಕ್ಕಿದೆ. ಅದರಂತೆ ಹಲವು ಮಹಿಳೆಯರು ಕಾರು ಚಾಲನಾ ಪರವಾನಗಿ ಪಡೆದಿದ್ದಾರೆ. ಹೀಗೆ ಕಾರು ಚಾಲನೆ ಪಡೆದವರಲ್ಲಿ ಭಾರತೀಯ ಮಹಿಳೆಯರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿ.

ಅದರಲ್ಲೂ ಕೇರಳದ ಪಠಣಂತಿಟ್ಟ ಜಿಲ್ಲೆಯ ಸರಮ್ಮ ಥಾಮಸ್ ಸೌದಿ ಅರೇಬಿಯಾದಿಂದ ಕಾರು ಚಾಲನಾ ಪರವಾನಗಿ ಪಡೆದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೌದಿ ಅರೇಬಿಯಾ ಸರ್ಕಾರದಿಂದ ನಡೆಸುವ ಕಾರು ಚಾಲನಾ ಪರೀಕ್ಷೆಯಲ್ಲಿ ಮಹಿಳೆ ಉತ್ತೀರ್ಣರಾಗಿದ್ದು, ಪರವಾನಗಿ ಪಡೆದಿದ್ದಾರೆ. ಆ ಮೂಲಕ ಸೌದಿ ಅರೇಬಿಯಾದಂಥ ಮುಸ್ಲಿಂ ರಾಷ್ಟ್ರದಿಂದ ಕಾರು ಚಾಲನಾ ಪರವಾನಗಿ ಪಡೆದ ದೇಶದ ಮೊದಲ ಮಹಿಳೆ ಎಂದು ಖ್ಯಾತಿಯಾಗಿದ್ದಾರೆ.

ಬರೀ ತಮ್ಮ ಕಾರು ವಾಹನ ಚಾಲನೆ ಅಲ್ಲ, ಮುಂದಿನ ದಿನಮಾನಗಳಲ್ಲಿ ಮಹಿಳೆಯರು ಓಲಾ, ಊಬರ್ ನಂತಹ ಕಾರುಗಳನ್ನು ಸಹ ಚಾಲನೆ ಮಾಡಲು ಅನುಮತಿ ನೀಡುವುದಾಗಿ ಸರ್ಕಾರ ತಿಳಿಸಿದೆ, ಅಲ್ಲದೆ ಕಾರು ಚಾಲನೆ ಮಾಡಲು ತರಬೇತಿ ಸಹ ನೀಡುತ್ತದೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search