ಅಡಿಕೆ ತೋಟದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು
Posted On June 30, 2018
![](https://tulunadunews.com/wp-content/uploads/2018/06/pututur.jpeg)
ಪುತ್ತೂರು: ಪುತ್ತೂರು ತಾಲೂಕಿನ ಕಡಬ ಸಮೀಪದ ಐತ್ತೂರಿನಲ್ಲಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕನನ್ನು ಐತ್ತೂರು ಗ್ರಾಮದ ಕೆರ್ಮಾಯಿ ನಿವಾಸಿ ದೇವಸ್ಯ ಎಂಬವರ ಪುತ್ರ ಪ್ರಿನ್ಸ್ ಪಿ.ಡಿ.(23) ಎಂದು ಗುರುತಿಸಲಾಗಿದೆ.
ಈತ ಕೆರ್ಮಾಯಿ ಸೈಂಟ್ ಮೇರೀಸ್ ಚರ್ಚಿನ ತೋಟದಲ್ಲಿ ಕೂಲಿ ಕೆಲಸದಲ್ಲಿ ನಿರತನಾಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಅಡಿಕೆ ಮರದ ಗುಂಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -
Trending Now
ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಯ ತಾಯಿ ನಿಧನ
July 20, 2024
ಶಾಸಕ ಡಾ. ಭರತ್ ಶೆಟ್ಟಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
July 20, 2024
Leave A Reply