• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಷ್ಟೇ ಅಲ್ಲ ಪವಿತ್ರ ಗಂಗಾ ನದಿ ಕಾಯಲೂ ಸೈನಿಕರು ಸಿದ್ಧ, ಗಂಗಾ ರಕ್ಷಣೆಗೆ ನಿವೃತ್ತ ಯೋಧರ ಟಾಸ್ಟ್ ಫೋರ್ಸ್

TNN Correspondent Posted On June 30, 2018
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಜೀವನದಿ, ಹಿಂದೂಗಳ ಶ್ರದ್ಧಾ ಭಕ್ತಿಯ ಪುಣ್ಯ ನದಿ ಗಂಗಾ ನದಿಯನ್ನು ಮಾಲಿನ್ಯದಿಂದ ರಕ್ಷಿಸಲು ಭಾರತೀಯ ರಕ್ಷಣಾ ಪಡೆಯ ನಿವೃತ್ತ ಯೋಧರು ಮುಂದಾಗಿದ್ದಾರೆ. ವಾರಾಣಾಸಿ, ಪ್ರಯಾಗ ಹಾಗೂ ಕಾನ್ಪುರದಲ್ಲಿ ಗಂಗಾ ನದಿ ತಟದಲ್ಲಿ ಕಸ ಹಾಕುವವರಿಂದ ನದಿಯನ್ನು ರಕ್ಷಿಸಲು ಭಾರತೀಯ ಸೇನೆ ವಿಶೇಷ ಟಾಸ್ಕ್ ಫೋರ್ಸ್ ರಚಿಸಿದ್ದು, ಗಂಗಾ ಟಾಸ್ಕ್ ಫೋರ್ಸ್ ಎಂದು ನಾಮಕರಣ ಮಾಡಲಾಗಿದೆ.

ಗಂಗಾ ಟಾಸ್ಕ್ ಫೋರ್ಸ್‌ನಲ್ಲಿ 532 ಮಾಜಿ ಯೋಧರು ಗಂಗೆಯ ರಕ್ಷಣೆಯಲ್ಲಿ ನಿರತರಾಗಿರಲಿದ್ದಾರೆ. ಆರಂಭದಲ್ಲಿ ಪ್ರಯಾಗದಲ್ಲಿ 200 ನಿವೃತ್ತ ಯೋಧರಿಗೆ ಈ ಕುರಿತು ವಿಶೇಷ ತರಬೇತಿ ನೀಡಲಾಗುತ್ತಿದೆ. ಗಂಗಾ ನದಿಯ ಮಾಲೀನ್ಯವನ್ನು ರಕ್ಷಿಸಲು ಮೂರು ವರ್ಷ ಕಾರ್ಯ ನಿರ್ವಹಿಸಲಿದ್ದಾರೆ.

ಕಠಿಣ ಪರಿಸ್ಥಿತಿಗಳಲ್ಲಿ ಸೇವೆ ಸಲ್ಲಿಸಿರುವ ಮಾಜಿ ಯೋಧರನ್ನು ಈ ಕೆಲಸಕ್ಕೆ ನೇಮಿಸಿಕೊಳ್ಳುವ ಸ್ವಾಭಾವಿಕ ಆಯ್ಕೆಯಾಗಿದೆ. ಗಂಗಾ ಶುದ್ಧೀಕರಣದಲ್ಲಿ ಹೆಚ್ಚಿನ ಜನರನ್ನು ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ. ಮಣ್ಣಿನ ಸವೆತ ತಡೆಗಟ್ಟಲು ದಡದಲ್ಲಿ ಮರ ನೆಡುವುದರಲ್ಲೂ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಗಂಗಾ ಶುದ್ಧೀಕರಣ ಅಭಿಯಾನದ ನಿರ್ದೇಶಕ ರಾಜೀವ್‌ ರಂಜನ್‌ ಮಿಶ್ರಾ ತಿಳಿಸಿದ್ದಾರೆ.

ಗಂಗಾ ನದಿ ರಕ್ಷಣೆ ಉದ್ದೇಶದಿಂದ ಭಾರತೀಯ ಸೇನೆಯ 9 ಅಧಿಕಾರಿಗಳು ಹಾಗೂ 29 ಜೆಸಿಒಗಳು ಸೇರಿ  532 ಮಾಜಿ ಸೈನಿಕರನ್ನೊಳಗೊಂಡ ಗಂಗಾ ಟಾಸ್ಕರ್ ಫೋರ್ಸ್’ ಹೆಸರಿನ ಬಟಾಲಿಯನ್ ರಚಿಸಲಾಗಿದೆ. ಯೋಧರ ನೇಮಕದಿಂದ ಯಾತ್ರಾರ್ಥಿಗಳಲ್ಲಿ ಶಿಸ್ತು ಮೂಡಲಿದೆ ಎಂದು ರಂಜನ್ ಮಿಶ್ರಾ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search