• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಷ್ಟೇ ಅಲ್ಲ ಪವಿತ್ರ ಗಂಗಾ ನದಿ ಕಾಯಲೂ ಸೈನಿಕರು ಸಿದ್ಧ, ಗಂಗಾ ರಕ್ಷಣೆಗೆ ನಿವೃತ್ತ ಯೋಧರ ಟಾಸ್ಟ್ ಫೋರ್ಸ್

TNN Correspondent Posted On June 30, 2018
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಜೀವನದಿ, ಹಿಂದೂಗಳ ಶ್ರದ್ಧಾ ಭಕ್ತಿಯ ಪುಣ್ಯ ನದಿ ಗಂಗಾ ನದಿಯನ್ನು ಮಾಲಿನ್ಯದಿಂದ ರಕ್ಷಿಸಲು ಭಾರತೀಯ ರಕ್ಷಣಾ ಪಡೆಯ ನಿವೃತ್ತ ಯೋಧರು ಮುಂದಾಗಿದ್ದಾರೆ. ವಾರಾಣಾಸಿ, ಪ್ರಯಾಗ ಹಾಗೂ ಕಾನ್ಪುರದಲ್ಲಿ ಗಂಗಾ ನದಿ ತಟದಲ್ಲಿ ಕಸ ಹಾಕುವವರಿಂದ ನದಿಯನ್ನು ರಕ್ಷಿಸಲು ಭಾರತೀಯ ಸೇನೆ ವಿಶೇಷ ಟಾಸ್ಕ್ ಫೋರ್ಸ್ ರಚಿಸಿದ್ದು, ಗಂಗಾ ಟಾಸ್ಕ್ ಫೋರ್ಸ್ ಎಂದು ನಾಮಕರಣ ಮಾಡಲಾಗಿದೆ.

ಗಂಗಾ ಟಾಸ್ಕ್ ಫೋರ್ಸ್‌ನಲ್ಲಿ 532 ಮಾಜಿ ಯೋಧರು ಗಂಗೆಯ ರಕ್ಷಣೆಯಲ್ಲಿ ನಿರತರಾಗಿರಲಿದ್ದಾರೆ. ಆರಂಭದಲ್ಲಿ ಪ್ರಯಾಗದಲ್ಲಿ 200 ನಿವೃತ್ತ ಯೋಧರಿಗೆ ಈ ಕುರಿತು ವಿಶೇಷ ತರಬೇತಿ ನೀಡಲಾಗುತ್ತಿದೆ. ಗಂಗಾ ನದಿಯ ಮಾಲೀನ್ಯವನ್ನು ರಕ್ಷಿಸಲು ಮೂರು ವರ್ಷ ಕಾರ್ಯ ನಿರ್ವಹಿಸಲಿದ್ದಾರೆ.

ಕಠಿಣ ಪರಿಸ್ಥಿತಿಗಳಲ್ಲಿ ಸೇವೆ ಸಲ್ಲಿಸಿರುವ ಮಾಜಿ ಯೋಧರನ್ನು ಈ ಕೆಲಸಕ್ಕೆ ನೇಮಿಸಿಕೊಳ್ಳುವ ಸ್ವಾಭಾವಿಕ ಆಯ್ಕೆಯಾಗಿದೆ. ಗಂಗಾ ಶುದ್ಧೀಕರಣದಲ್ಲಿ ಹೆಚ್ಚಿನ ಜನರನ್ನು ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ. ಮಣ್ಣಿನ ಸವೆತ ತಡೆಗಟ್ಟಲು ದಡದಲ್ಲಿ ಮರ ನೆಡುವುದರಲ್ಲೂ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಗಂಗಾ ಶುದ್ಧೀಕರಣ ಅಭಿಯಾನದ ನಿರ್ದೇಶಕ ರಾಜೀವ್‌ ರಂಜನ್‌ ಮಿಶ್ರಾ ತಿಳಿಸಿದ್ದಾರೆ.

ಗಂಗಾ ನದಿ ರಕ್ಷಣೆ ಉದ್ದೇಶದಿಂದ ಭಾರತೀಯ ಸೇನೆಯ 9 ಅಧಿಕಾರಿಗಳು ಹಾಗೂ 29 ಜೆಸಿಒಗಳು ಸೇರಿ  532 ಮಾಜಿ ಸೈನಿಕರನ್ನೊಳಗೊಂಡ ಗಂಗಾ ಟಾಸ್ಕರ್ ಫೋರ್ಸ್’ ಹೆಸರಿನ ಬಟಾಲಿಯನ್ ರಚಿಸಲಾಗಿದೆ. ಯೋಧರ ನೇಮಕದಿಂದ ಯಾತ್ರಾರ್ಥಿಗಳಲ್ಲಿ ಶಿಸ್ತು ಮೂಡಲಿದೆ ಎಂದು ರಂಜನ್ ಮಿಶ್ರಾ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search