• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಖಾ ಹಲಾಲ್, ಬಹುಪತ್ನಿತ್ವಕ್ಕೆ ಬ್ರೇಕ್ ಹಾಕುವ ನಿರ್ಧಾರಕ್ಕೆ ಕೇಂದ್ರ ಸರ್ಕಾರದ ಬೆಂಬಲ

TNN Correspondent Posted On June 30, 2018
0


0
Shares
  • Share On Facebook
  • Tweet It

ದೆಹಲಿ:  ಅಸಂವಿಧಾನಿಕ ಪದ್ಧತಿಗಳಿಗೆ ಕೊನೆ ಹಾಡಲು ಸಿದ್ಧವಾಗಿರುವ ಕೇಂದ್ರ ಸರ್ಕಾರ ಇತ್ತೀಚೆಗೆ ಮುಸ್ಲಿಂ ಧರ್ಮದಲ್ಲಿದ್ದ ತ್ರಿವಳಿ ತಲಾಖ್ ಪದ್ಧತಿ ನಿಷೇಧಕ್ಕೆ ಮುಂದಾಗಿ, ನಿಯಮ ರೂಪಿಸಿತ್ತು. ಇದೀಗ ಅದೇ ನಿಟ್ಟಿನಲ್ಲಿ ಮತ್ತೊಂದು ದೃಢ ನಿರ್ಧಾರ ಕೈಗೊಂಡಿದ್ದು ಮುಸ್ಲಿಂ ಧರ್ಮದಲ್ಲಿರುವ ಬಹುಪತ್ನಿತ್ವ ಮತ್ತು ನಿಖಾ ಹಲಾಲ್ ನಿಯಮಗಳ ವಿರುದ್ಧ ಅರ್ಜಿ ಸಲ್ಲಿಸಿರುವವರ ಬೆಂಬಲಕ್ಕೆ ಕೇಂದ್ರ ಸರ್ಕಾರ ನಿಂತಿದೆ. ಈ ಮೂಲಕ  ಕೇಂದ್ರ ಸರ್ಕಾರ ಮುಸ್ಲಿಂ ಮಹಿಳೆಯರ ಹಕ್ಕುಗಳ ರಕ್ಷಣೆಗೆ ಮುಂದಾಗಿದೆ.

ತ್ರಿವಳಿ ತಲಾಖ್ ವಿರುದ್ಧ ಆಗಸ್ಟ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿ, ಅನಿಷ್ಠ ಪದ್ಧತಿಯನ್ನು ನಿಷೇಧಕ್ಕೆ ಕಾನೂನು ಜಾರಿಗೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತುಲ ಇದೀಗ ಬಹುಪತ್ನಿತ್ವ ಹಾಗೂ ನಿಖಾ ಹಲಾಲ್ ಪ್ರಶ್ನಿಸಿ ಅರ್ಜಿ ಸಲ್ಲಿಸುವವರಿಗೆ ಬೆಂಬಲ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯೊಂದಿಗೆ ಮತ್ತೊಮ್ಮೆ ಒಂದಾಗಬೇಕೆಂದು ಇಚ್ಛಸಿದಲ್ಲಿ, ಮತ್ತೊಬ್ಬನನ್ನು ವಿವಾಹವಾಗಿ, ಆತನೊಂದಿಗೆ ದೈಹಿಕವಾಗಿ ಕೂಡಿ, ವಿಚ್ಛೇದನ ಪಡೆದ ನಂತರ ಸೇರಬಹುದು ಎಂದು ಹೇಳುವ ನಿಖಾ ಹಲಾಲ್ ನಿಯಮದ ಕುರಿತು ಹಲವು ವಿವಾದಗಳಿವೆ. ಈ ಕುರಿತು ಮುಸ್ಲಿಂ ಮೌಲ್ವಿಗಳು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಮಹಿಳಾ ಕಾರ್ಯಕರ್ತರು ನಿಖಾ ಹಲಾಲ್ ಮತ್ತು ಬಹುಪತ್ನಿತ್ವ ಪದ್ಧತಿಯನ್ನು ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಳನ್ನು ಆಲಿಸುವುದಾಗಿ ಹೇಳಿದ್ದ ಸುಪ್ರೀಂ ಕೋರ್ಟ್‌ ತಿಳಿಸಿದೆ.  ಈ ಕುರಿತು ಕೇಂದ್ರ ಸರ್ಕಾರ ಹಾಗೂ ಕಾನೂನು ಇಲಾಖೆಗೆ ನೋಟಿಸ್ ನೀಡಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search