• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

13 ಬಾರಿ ಅತ್ಯಾಚಾರ ಮಾಡಿದ ಕ್ಯಾಥೊಲಿಕ್  ಚರ್ಚ್  ಬಿಷಪ್: ಕ್ರೈಸ್ತ್ ಸನ್ಯಾಸಿನಿ ಆರೋಪ

TNN Correspondent Posted On July 1, 2018


  • Share On Facebook
  • Tweet It

ಕೊಟ್ಟಾಯಂ: ಕ್ಯಾಥೊಲಿಕ್‌ ಧರ್ಮಪ್ರಾಂತ್ಯದ ಬಿಷಪ್‌ ಆಗಿರುವ ಫ್ರಾಂಕೋ ಮುಲಕ್ಕಲ್‌ ಅವರು 2014ರಿಂದ ಆರಂಭಿಸಿ 2016ರವರೆಗೆ 13 ಬಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಕ್ರೈಸ್ತ ಸನ್ಯಾಸಿನಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ದೇಶದಲ್ಲಿ ಬಿಷಪ್ ಮೇಲೆ ಅತ್ಯಾಚಾರ ಮಾಡಿದ ನೇರ ಆರೋಪ ಎದುರಾಗಿರುವುದು ಇದೇ ಮೊದಲ ಬಾರಿ. ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬರು ಐವರು ಪಾದ್ರಿಗಳು ತನ್ನ ಪತ್ನಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಬಿಷಪ್ ಮೇಲೆ ನೇರವಾಗಿ ಆರೋಪ ಕೇಳಿ ಬಂದಿರುವುದು ಚರ್ಚ್ ಗಳಲ್ಲಿ ಏನೇನು ನಡೆಯುತ್ತದೆ ಎಂಬ ಅನುಮಾನ ಮೂಡಿವೆ.

ಭೂ ಅವ್ಯವಹಾರ ಮತ್ತು ಲೈಂಗಿಕ ಶೋಷಣೆಯ ಆರೋಪದಿಂದ ಕುಖ್ಯಾತಿ ಪಡೆದಿರುವ ಕೇರಳದ ಸಿರೋ ಮಲಬಾರ್ ಕ್ಯಾಥೊಲಿಕ್ ಚರ್ಚ್ ಇದೀಗ ಬಿಷಪ್ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪದ ಬಗ್ಗೆ ಭಾರಿ ಸುದ್ದಿ ಮಾಡಿದೆ. 2014ರಲ್ಲಿ ಕುರುವಿಲಂಗಾಡ್‌ ಚರ್ಚ್‌ನ ಗೆಸ್ಟ್‌ ಹೌಸ್‌ನಲ್ಲಿ ಪ್ರಥಮ ಬಾರಿಗೆ ಅತ್ಯಾಚಾರ ಮಾಡಿದ್ದರು. ಬಳಿಕ 13 ಬಾರಿ ಶೋಷಣೆ ಮಾಡಿದ್ದಾರೆ ಎಂದು ಕ್ರೈಸ್ತ ಸನ್ಯಾನಿಸಿ ಆರೋಪಿಸಿದ್ದಾರೆ. ಈ ಕುರಿತು ಚರ್ಚ್ ನ ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಸ್ಪಂದಿಸದೇ ಇರುವುದರಿಂದ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದರ ಮಧ್ಯೆ ಜಲಂಧರ್‌ ಧರ್ಮಪ್ರಾಂತ್ಯದ ಬಿಷಪ್‌ ಆಗಿರುವ ಮುಲಕ್ಕಲ್‌ ಮೊದಲೇ ಕೊಟ್ಟಾಯಂ ಪೊಲೀಸರಿಗೆ ಸನ್ಯಾಸಿನಿಯೊಬ್ಬರನ್ನು ವರ್ಗಾವಣೆ ಮಾಡಿದ್ದಕ್ಕೆ ಅತ್ಯಾಚಾರದ ಆರೋಪ ಹೊರಿಸುವ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ನೀಡಿದ್ದರುಲ ಕೊಟ್ಟಾಯಂ ಎಸ್‌ಪಿ ಹರಿಶಂಕರ್‌ ಎರಡೂ ಪ್ರಕರಣ ದಾಖಲಿಸಿಕೊಂಡು ಡಿವೈಎಸ್‌ಪಿ ಮಟ್ಟದ ಅಧಿಕಾರಿಯನ್ನು ತನಿಖೆಗೆ ನೇಮಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search