• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ

TNN Correspondent Posted On July 1, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದ ಎದುರು ಭಾರತದ ದಿಟ್ಟ ನಿಲುವು ಮತ್ತೊಮ್ಮೆ ಸಾಬೀತಾಗಿದ್ದು, ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಮೆರಿಕದ ವಿರೋಧ ಹಾಗೂ ನಿರ್ಬಂಧ ವಿಧಿಸುವ ಎಚ್ಚರಿಕೆಯನ್ನು ಧಿಕ್ಕರಿಸಿ ಭಾರತ ರಷ್ಯಾದಿಂದ ಉನ್ನತ ತಂತ್ರಜ್ಞಾನ ಹೊಂದಿರುವ ಐದು ಎಸ್ -400 ವಾಯು ರಕ್ಷಣಾ ಕ್ಷಿಪಣಿಗಳನ್ನು ಖರೀದಿಸಲು ಮುಂದಾಗಿದೆ. 39 ಸಾವಿರ ಕೋಟಿ ಮೌಲ್ಯದ ಬೃಹತ್ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಅಮೆರಿಕದ ವಿರೋಧಕ್ಕೆ ಭಾರತ ಸೊಪ್ಪು ಹಾಕದೇ ದಿಟ್ಟ ನಿಲುವು ವ್ಯಕ್ತಪಡಿಸಿದೆ.

ಇತ್ತೀಚೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಲಾಗಿದೆ. ರಷ್ಯಾದೊಂದಿಗಿನ ಮಾತುಕತೆ ವೇಳೆ ಒಪ್ಪಂದಂತೆ ಸಣ್ಣ ವ್ಯತ್ಯಾಸಗಳಿಗೂ ಒಪ್ಪಿಗೆ ದೊರೆತಿದೆ. ಇದೀಗ ಹಣಕಾಸು ಸಚಿವಾಲಯ ಮತ್ತು ಪ್ರಧಾನಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿಯಲ್ಲಿ ಒಪ್ಪಿಗೆ ದೊರೆಯಬೇಕಿದೆ.

ಗೋವಾದಲ್ಲಿ  2016ರ ಅಕ್ಟೋಬರ್ ನಲ್ಲಿ ನಡೆದ ಶೃಂಗಸಭೆಯಲ್ಲಿ ಮೋದಿ – ಪುಟಿನ್ ಮಧ್ಯೆ ನಡೆದ ಮಾತುಕತೆ ವೇಳೆ ಎಸ್‌ – 400 ಕ್ಷಿಪಣಿ ವ್ಯವಸ್ಥೆಗೆ ಎರಡು ದೇಶಗಳ ಒಪ್ಪಿಗೆ ಸಿಕ್ಕಿತ್ತು. 2018ರ ಅಕ್ಟೋಬರ್ ನಲ್ಲಿ ಮೋದಿ ಪುಟಿನ್ ಮಧ್ಯೆ ಶೃಂಗಸಭೆ ನಡೆಯಲಿದ್ದು, ಈ ವೇಳೆ ಇದಕ್ಕೆ ಅಂತಿಮ ಸ್ಪರ್ಷ ದೊರೆಯಲಿದೆ. ಈ ಒಪ್ಪಂದಕ್ಕೆ ಅಮೆರಿಕ ಖ್ಯಾತೆ ತೆಗೆದಿತ್ತು.  ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಸುವ ರಾಷ್ಟ್ರಗಳ ವಿರುದ್ಧ ಅಮೆರಿಕ ಹಲವು ನಿರ್ಬಂಧ ವಿಧಿಸುವ ಕಾನೂನಿಗೆ ತಿದ್ದುಪಡಿ ಮಾಡಿದೆ. ಎಸ್‌ – 400 ವಾಯು ರಕ್ಷಣಾ ಕ್ಷಿಪಣಿಯಿಂದ ಭಾರತೀಯ ವಾಯು ಸೇನೆಗೆ ಭಾರಿ ಬಲ ಬರಲಿದೆ.

ಅಮೆರಿಕ, ಭಾರತ ಮಧ್ಯೆ ಮಾತುಕತೆ ರದ್ದು: ಅಮೆರಿಕ ಹಾಗೂ ಭಾರತದ ಮಧ್ಯೆ ಜುಲೈ 6ರಂದು ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ  ಮಾತುಕತೆ ಮತ್ತೆ ರದ್ದಾದ ಬಳಿಕ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಒಪ್ಪಂದಕ್ಕೆ ಅಂಕಿತ ಬಿದ್ದಿದೆ. ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ 2 + 2 ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಬೇಕಿತ್ತು.

0
Shares
  • Share On Facebook
  • Tweet It


americaarmyindiamisile


Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
You may also like
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search