• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ

TNN Correspondent Posted On July 1, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದ ಎದುರು ಭಾರತದ ದಿಟ್ಟ ನಿಲುವು ಮತ್ತೊಮ್ಮೆ ಸಾಬೀತಾಗಿದ್ದು, ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಮೆರಿಕದ ವಿರೋಧ ಹಾಗೂ ನಿರ್ಬಂಧ ವಿಧಿಸುವ ಎಚ್ಚರಿಕೆಯನ್ನು ಧಿಕ್ಕರಿಸಿ ಭಾರತ ರಷ್ಯಾದಿಂದ ಉನ್ನತ ತಂತ್ರಜ್ಞಾನ ಹೊಂದಿರುವ ಐದು ಎಸ್ -400 ವಾಯು ರಕ್ಷಣಾ ಕ್ಷಿಪಣಿಗಳನ್ನು ಖರೀದಿಸಲು ಮುಂದಾಗಿದೆ. 39 ಸಾವಿರ ಕೋಟಿ ಮೌಲ್ಯದ ಬೃಹತ್ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಅಮೆರಿಕದ ವಿರೋಧಕ್ಕೆ ಭಾರತ ಸೊಪ್ಪು ಹಾಕದೇ ದಿಟ್ಟ ನಿಲುವು ವ್ಯಕ್ತಪಡಿಸಿದೆ.

ಇತ್ತೀಚೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಲಾಗಿದೆ. ರಷ್ಯಾದೊಂದಿಗಿನ ಮಾತುಕತೆ ವೇಳೆ ಒಪ್ಪಂದಂತೆ ಸಣ್ಣ ವ್ಯತ್ಯಾಸಗಳಿಗೂ ಒಪ್ಪಿಗೆ ದೊರೆತಿದೆ. ಇದೀಗ ಹಣಕಾಸು ಸಚಿವಾಲಯ ಮತ್ತು ಪ್ರಧಾನಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿಯಲ್ಲಿ ಒಪ್ಪಿಗೆ ದೊರೆಯಬೇಕಿದೆ.

ಗೋವಾದಲ್ಲಿ  2016ರ ಅಕ್ಟೋಬರ್ ನಲ್ಲಿ ನಡೆದ ಶೃಂಗಸಭೆಯಲ್ಲಿ ಮೋದಿ – ಪುಟಿನ್ ಮಧ್ಯೆ ನಡೆದ ಮಾತುಕತೆ ವೇಳೆ ಎಸ್‌ – 400 ಕ್ಷಿಪಣಿ ವ್ಯವಸ್ಥೆಗೆ ಎರಡು ದೇಶಗಳ ಒಪ್ಪಿಗೆ ಸಿಕ್ಕಿತ್ತು. 2018ರ ಅಕ್ಟೋಬರ್ ನಲ್ಲಿ ಮೋದಿ ಪುಟಿನ್ ಮಧ್ಯೆ ಶೃಂಗಸಭೆ ನಡೆಯಲಿದ್ದು, ಈ ವೇಳೆ ಇದಕ್ಕೆ ಅಂತಿಮ ಸ್ಪರ್ಷ ದೊರೆಯಲಿದೆ. ಈ ಒಪ್ಪಂದಕ್ಕೆ ಅಮೆರಿಕ ಖ್ಯಾತೆ ತೆಗೆದಿತ್ತು.  ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಸುವ ರಾಷ್ಟ್ರಗಳ ವಿರುದ್ಧ ಅಮೆರಿಕ ಹಲವು ನಿರ್ಬಂಧ ವಿಧಿಸುವ ಕಾನೂನಿಗೆ ತಿದ್ದುಪಡಿ ಮಾಡಿದೆ. ಎಸ್‌ – 400 ವಾಯು ರಕ್ಷಣಾ ಕ್ಷಿಪಣಿಯಿಂದ ಭಾರತೀಯ ವಾಯು ಸೇನೆಗೆ ಭಾರಿ ಬಲ ಬರಲಿದೆ.

ಅಮೆರಿಕ, ಭಾರತ ಮಧ್ಯೆ ಮಾತುಕತೆ ರದ್ದು: ಅಮೆರಿಕ ಹಾಗೂ ಭಾರತದ ಮಧ್ಯೆ ಜುಲೈ 6ರಂದು ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ  ಮಾತುಕತೆ ಮತ್ತೆ ರದ್ದಾದ ಬಳಿಕ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಒಪ್ಪಂದಕ್ಕೆ ಅಂಕಿತ ಬಿದ್ದಿದೆ. ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ 2 + 2 ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಬೇಕಿತ್ತು.

0
Shares
  • Share On Facebook
  • Tweet It


americaarmyindiamisile


Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
You may also like
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search