• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ

TNN Correspondent Posted On July 1, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದ ಎದುರು ಭಾರತದ ದಿಟ್ಟ ನಿಲುವು ಮತ್ತೊಮ್ಮೆ ಸಾಬೀತಾಗಿದ್ದು, ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಮೆರಿಕದ ವಿರೋಧ ಹಾಗೂ ನಿರ್ಬಂಧ ವಿಧಿಸುವ ಎಚ್ಚರಿಕೆಯನ್ನು ಧಿಕ್ಕರಿಸಿ ಭಾರತ ರಷ್ಯಾದಿಂದ ಉನ್ನತ ತಂತ್ರಜ್ಞಾನ ಹೊಂದಿರುವ ಐದು ಎಸ್ -400 ವಾಯು ರಕ್ಷಣಾ ಕ್ಷಿಪಣಿಗಳನ್ನು ಖರೀದಿಸಲು ಮುಂದಾಗಿದೆ. 39 ಸಾವಿರ ಕೋಟಿ ಮೌಲ್ಯದ ಬೃಹತ್ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಅಮೆರಿಕದ ವಿರೋಧಕ್ಕೆ ಭಾರತ ಸೊಪ್ಪು ಹಾಕದೇ ದಿಟ್ಟ ನಿಲುವು ವ್ಯಕ್ತಪಡಿಸಿದೆ.

ಇತ್ತೀಚೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಲಾಗಿದೆ. ರಷ್ಯಾದೊಂದಿಗಿನ ಮಾತುಕತೆ ವೇಳೆ ಒಪ್ಪಂದಂತೆ ಸಣ್ಣ ವ್ಯತ್ಯಾಸಗಳಿಗೂ ಒಪ್ಪಿಗೆ ದೊರೆತಿದೆ. ಇದೀಗ ಹಣಕಾಸು ಸಚಿವಾಲಯ ಮತ್ತು ಪ್ರಧಾನಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿಯಲ್ಲಿ ಒಪ್ಪಿಗೆ ದೊರೆಯಬೇಕಿದೆ.

ಗೋವಾದಲ್ಲಿ  2016ರ ಅಕ್ಟೋಬರ್ ನಲ್ಲಿ ನಡೆದ ಶೃಂಗಸಭೆಯಲ್ಲಿ ಮೋದಿ – ಪುಟಿನ್ ಮಧ್ಯೆ ನಡೆದ ಮಾತುಕತೆ ವೇಳೆ ಎಸ್‌ – 400 ಕ್ಷಿಪಣಿ ವ್ಯವಸ್ಥೆಗೆ ಎರಡು ದೇಶಗಳ ಒಪ್ಪಿಗೆ ಸಿಕ್ಕಿತ್ತು. 2018ರ ಅಕ್ಟೋಬರ್ ನಲ್ಲಿ ಮೋದಿ ಪುಟಿನ್ ಮಧ್ಯೆ ಶೃಂಗಸಭೆ ನಡೆಯಲಿದ್ದು, ಈ ವೇಳೆ ಇದಕ್ಕೆ ಅಂತಿಮ ಸ್ಪರ್ಷ ದೊರೆಯಲಿದೆ. ಈ ಒಪ್ಪಂದಕ್ಕೆ ಅಮೆರಿಕ ಖ್ಯಾತೆ ತೆಗೆದಿತ್ತು.  ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಸುವ ರಾಷ್ಟ್ರಗಳ ವಿರುದ್ಧ ಅಮೆರಿಕ ಹಲವು ನಿರ್ಬಂಧ ವಿಧಿಸುವ ಕಾನೂನಿಗೆ ತಿದ್ದುಪಡಿ ಮಾಡಿದೆ. ಎಸ್‌ – 400 ವಾಯು ರಕ್ಷಣಾ ಕ್ಷಿಪಣಿಯಿಂದ ಭಾರತೀಯ ವಾಯು ಸೇನೆಗೆ ಭಾರಿ ಬಲ ಬರಲಿದೆ.

ಅಮೆರಿಕ, ಭಾರತ ಮಧ್ಯೆ ಮಾತುಕತೆ ರದ್ದು: ಅಮೆರಿಕ ಹಾಗೂ ಭಾರತದ ಮಧ್ಯೆ ಜುಲೈ 6ರಂದು ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ  ಮಾತುಕತೆ ಮತ್ತೆ ರದ್ದಾದ ಬಳಿಕ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಒಪ್ಪಂದಕ್ಕೆ ಅಂಕಿತ ಬಿದ್ದಿದೆ. ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ 2 + 2 ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಬೇಕಿತ್ತು.

0
Shares
  • Share On Facebook
  • Tweet It


americaarmyindiamisile


Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
You may also like
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search