• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ

TNN Correspondent Posted On July 1, 2018


  • Share On Facebook
  • Tweet It

ದೆಹಲಿ: ವಿಶ್ವದ ಎದುರು ಭಾರತದ ದಿಟ್ಟ ನಿಲುವು ಮತ್ತೊಮ್ಮೆ ಸಾಬೀತಾಗಿದ್ದು, ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಮೆರಿಕದ ವಿರೋಧ ಹಾಗೂ ನಿರ್ಬಂಧ ವಿಧಿಸುವ ಎಚ್ಚರಿಕೆಯನ್ನು ಧಿಕ್ಕರಿಸಿ ಭಾರತ ರಷ್ಯಾದಿಂದ ಉನ್ನತ ತಂತ್ರಜ್ಞಾನ ಹೊಂದಿರುವ ಐದು ಎಸ್ -400 ವಾಯು ರಕ್ಷಣಾ ಕ್ಷಿಪಣಿಗಳನ್ನು ಖರೀದಿಸಲು ಮುಂದಾಗಿದೆ. 39 ಸಾವಿರ ಕೋಟಿ ಮೌಲ್ಯದ ಬೃಹತ್ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಅಮೆರಿಕದ ವಿರೋಧಕ್ಕೆ ಭಾರತ ಸೊಪ್ಪು ಹಾಕದೇ ದಿಟ್ಟ ನಿಲುವು ವ್ಯಕ್ತಪಡಿಸಿದೆ.

ಇತ್ತೀಚೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಲಾಗಿದೆ. ರಷ್ಯಾದೊಂದಿಗಿನ ಮಾತುಕತೆ ವೇಳೆ ಒಪ್ಪಂದಂತೆ ಸಣ್ಣ ವ್ಯತ್ಯಾಸಗಳಿಗೂ ಒಪ್ಪಿಗೆ ದೊರೆತಿದೆ. ಇದೀಗ ಹಣಕಾಸು ಸಚಿವಾಲಯ ಮತ್ತು ಪ್ರಧಾನಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿಯಲ್ಲಿ ಒಪ್ಪಿಗೆ ದೊರೆಯಬೇಕಿದೆ.

ಗೋವಾದಲ್ಲಿ  2016ರ ಅಕ್ಟೋಬರ್ ನಲ್ಲಿ ನಡೆದ ಶೃಂಗಸಭೆಯಲ್ಲಿ ಮೋದಿ – ಪುಟಿನ್ ಮಧ್ಯೆ ನಡೆದ ಮಾತುಕತೆ ವೇಳೆ ಎಸ್‌ – 400 ಕ್ಷಿಪಣಿ ವ್ಯವಸ್ಥೆಗೆ ಎರಡು ದೇಶಗಳ ಒಪ್ಪಿಗೆ ಸಿಕ್ಕಿತ್ತು. 2018ರ ಅಕ್ಟೋಬರ್ ನಲ್ಲಿ ಮೋದಿ ಪುಟಿನ್ ಮಧ್ಯೆ ಶೃಂಗಸಭೆ ನಡೆಯಲಿದ್ದು, ಈ ವೇಳೆ ಇದಕ್ಕೆ ಅಂತಿಮ ಸ್ಪರ್ಷ ದೊರೆಯಲಿದೆ. ಈ ಒಪ್ಪಂದಕ್ಕೆ ಅಮೆರಿಕ ಖ್ಯಾತೆ ತೆಗೆದಿತ್ತು.  ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಸುವ ರಾಷ್ಟ್ರಗಳ ವಿರುದ್ಧ ಅಮೆರಿಕ ಹಲವು ನಿರ್ಬಂಧ ವಿಧಿಸುವ ಕಾನೂನಿಗೆ ತಿದ್ದುಪಡಿ ಮಾಡಿದೆ. ಎಸ್‌ – 400 ವಾಯು ರಕ್ಷಣಾ ಕ್ಷಿಪಣಿಯಿಂದ ಭಾರತೀಯ ವಾಯು ಸೇನೆಗೆ ಭಾರಿ ಬಲ ಬರಲಿದೆ.

ಅಮೆರಿಕ, ಭಾರತ ಮಧ್ಯೆ ಮಾತುಕತೆ ರದ್ದು: ಅಮೆರಿಕ ಹಾಗೂ ಭಾರತದ ಮಧ್ಯೆ ಜುಲೈ 6ರಂದು ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ  ಮಾತುಕತೆ ಮತ್ತೆ ರದ್ದಾದ ಬಳಿಕ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಒಪ್ಪಂದಕ್ಕೆ ಅಂಕಿತ ಬಿದ್ದಿದೆ. ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ 2 + 2 ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಬೇಕಿತ್ತು.

  • Share On Facebook
  • Tweet It


- Advertisement -
americaarmyindiamisile


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search