• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ

TNN Correspondent Posted On July 1, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದ ಎದುರು ಭಾರತದ ದಿಟ್ಟ ನಿಲುವು ಮತ್ತೊಮ್ಮೆ ಸಾಬೀತಾಗಿದ್ದು, ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಮೆರಿಕದ ವಿರೋಧ ಹಾಗೂ ನಿರ್ಬಂಧ ವಿಧಿಸುವ ಎಚ್ಚರಿಕೆಯನ್ನು ಧಿಕ್ಕರಿಸಿ ಭಾರತ ರಷ್ಯಾದಿಂದ ಉನ್ನತ ತಂತ್ರಜ್ಞಾನ ಹೊಂದಿರುವ ಐದು ಎಸ್ -400 ವಾಯು ರಕ್ಷಣಾ ಕ್ಷಿಪಣಿಗಳನ್ನು ಖರೀದಿಸಲು ಮುಂದಾಗಿದೆ. 39 ಸಾವಿರ ಕೋಟಿ ಮೌಲ್ಯದ ಬೃಹತ್ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಅಮೆರಿಕದ ವಿರೋಧಕ್ಕೆ ಭಾರತ ಸೊಪ್ಪು ಹಾಕದೇ ದಿಟ್ಟ ನಿಲುವು ವ್ಯಕ್ತಪಡಿಸಿದೆ.

ಇತ್ತೀಚೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಲಾಗಿದೆ. ರಷ್ಯಾದೊಂದಿಗಿನ ಮಾತುಕತೆ ವೇಳೆ ಒಪ್ಪಂದಂತೆ ಸಣ್ಣ ವ್ಯತ್ಯಾಸಗಳಿಗೂ ಒಪ್ಪಿಗೆ ದೊರೆತಿದೆ. ಇದೀಗ ಹಣಕಾಸು ಸಚಿವಾಲಯ ಮತ್ತು ಪ್ರಧಾನಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿಯಲ್ಲಿ ಒಪ್ಪಿಗೆ ದೊರೆಯಬೇಕಿದೆ.

ಗೋವಾದಲ್ಲಿ  2016ರ ಅಕ್ಟೋಬರ್ ನಲ್ಲಿ ನಡೆದ ಶೃಂಗಸಭೆಯಲ್ಲಿ ಮೋದಿ – ಪುಟಿನ್ ಮಧ್ಯೆ ನಡೆದ ಮಾತುಕತೆ ವೇಳೆ ಎಸ್‌ – 400 ಕ್ಷಿಪಣಿ ವ್ಯವಸ್ಥೆಗೆ ಎರಡು ದೇಶಗಳ ಒಪ್ಪಿಗೆ ಸಿಕ್ಕಿತ್ತು. 2018ರ ಅಕ್ಟೋಬರ್ ನಲ್ಲಿ ಮೋದಿ ಪುಟಿನ್ ಮಧ್ಯೆ ಶೃಂಗಸಭೆ ನಡೆಯಲಿದ್ದು, ಈ ವೇಳೆ ಇದಕ್ಕೆ ಅಂತಿಮ ಸ್ಪರ್ಷ ದೊರೆಯಲಿದೆ. ಈ ಒಪ್ಪಂದಕ್ಕೆ ಅಮೆರಿಕ ಖ್ಯಾತೆ ತೆಗೆದಿತ್ತು.  ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಸುವ ರಾಷ್ಟ್ರಗಳ ವಿರುದ್ಧ ಅಮೆರಿಕ ಹಲವು ನಿರ್ಬಂಧ ವಿಧಿಸುವ ಕಾನೂನಿಗೆ ತಿದ್ದುಪಡಿ ಮಾಡಿದೆ. ಎಸ್‌ – 400 ವಾಯು ರಕ್ಷಣಾ ಕ್ಷಿಪಣಿಯಿಂದ ಭಾರತೀಯ ವಾಯು ಸೇನೆಗೆ ಭಾರಿ ಬಲ ಬರಲಿದೆ.

ಅಮೆರಿಕ, ಭಾರತ ಮಧ್ಯೆ ಮಾತುಕತೆ ರದ್ದು: ಅಮೆರಿಕ ಹಾಗೂ ಭಾರತದ ಮಧ್ಯೆ ಜುಲೈ 6ರಂದು ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ  ಮಾತುಕತೆ ಮತ್ತೆ ರದ್ದಾದ ಬಳಿಕ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಒಪ್ಪಂದಕ್ಕೆ ಅಂಕಿತ ಬಿದ್ದಿದೆ. ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ 2 + 2 ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಬೇಕಿತ್ತು.

0
Shares
  • Share On Facebook
  • Tweet It


- Advertisement -
americaarmyindiamisile


Trending Now
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
Tulunadu News June 26, 2025
You may also like
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
  • Popular Posts

    • 1
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 2
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 3
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 4
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 5
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search