• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ

TNN Correspondent Posted On July 1, 2018


  • Share On Facebook
  • Tweet It

ದೆಹಲಿ: ವಿಶ್ವದ ಎದುರು ಭಾರತದ ದಿಟ್ಟ ನಿಲುವು ಮತ್ತೊಮ್ಮೆ ಸಾಬೀತಾಗಿದ್ದು, ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಮೆರಿಕದ ವಿರೋಧ ಹಾಗೂ ನಿರ್ಬಂಧ ವಿಧಿಸುವ ಎಚ್ಚರಿಕೆಯನ್ನು ಧಿಕ್ಕರಿಸಿ ಭಾರತ ರಷ್ಯಾದಿಂದ ಉನ್ನತ ತಂತ್ರಜ್ಞಾನ ಹೊಂದಿರುವ ಐದು ಎಸ್ -400 ವಾಯು ರಕ್ಷಣಾ ಕ್ಷಿಪಣಿಗಳನ್ನು ಖರೀದಿಸಲು ಮುಂದಾಗಿದೆ. 39 ಸಾವಿರ ಕೋಟಿ ಮೌಲ್ಯದ ಬೃಹತ್ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಅಮೆರಿಕದ ವಿರೋಧಕ್ಕೆ ಭಾರತ ಸೊಪ್ಪು ಹಾಕದೇ ದಿಟ್ಟ ನಿಲುವು ವ್ಯಕ್ತಪಡಿಸಿದೆ.

ಇತ್ತೀಚೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಲಾಗಿದೆ. ರಷ್ಯಾದೊಂದಿಗಿನ ಮಾತುಕತೆ ವೇಳೆ ಒಪ್ಪಂದಂತೆ ಸಣ್ಣ ವ್ಯತ್ಯಾಸಗಳಿಗೂ ಒಪ್ಪಿಗೆ ದೊರೆತಿದೆ. ಇದೀಗ ಹಣಕಾಸು ಸಚಿವಾಲಯ ಮತ್ತು ಪ್ರಧಾನಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿಯಲ್ಲಿ ಒಪ್ಪಿಗೆ ದೊರೆಯಬೇಕಿದೆ.

ಗೋವಾದಲ್ಲಿ  2016ರ ಅಕ್ಟೋಬರ್ ನಲ್ಲಿ ನಡೆದ ಶೃಂಗಸಭೆಯಲ್ಲಿ ಮೋದಿ – ಪುಟಿನ್ ಮಧ್ಯೆ ನಡೆದ ಮಾತುಕತೆ ವೇಳೆ ಎಸ್‌ – 400 ಕ್ಷಿಪಣಿ ವ್ಯವಸ್ಥೆಗೆ ಎರಡು ದೇಶಗಳ ಒಪ್ಪಿಗೆ ಸಿಕ್ಕಿತ್ತು. 2018ರ ಅಕ್ಟೋಬರ್ ನಲ್ಲಿ ಮೋದಿ ಪುಟಿನ್ ಮಧ್ಯೆ ಶೃಂಗಸಭೆ ನಡೆಯಲಿದ್ದು, ಈ ವೇಳೆ ಇದಕ್ಕೆ ಅಂತಿಮ ಸ್ಪರ್ಷ ದೊರೆಯಲಿದೆ. ಈ ಒಪ್ಪಂದಕ್ಕೆ ಅಮೆರಿಕ ಖ್ಯಾತೆ ತೆಗೆದಿತ್ತು.  ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಸುವ ರಾಷ್ಟ್ರಗಳ ವಿರುದ್ಧ ಅಮೆರಿಕ ಹಲವು ನಿರ್ಬಂಧ ವಿಧಿಸುವ ಕಾನೂನಿಗೆ ತಿದ್ದುಪಡಿ ಮಾಡಿದೆ. ಎಸ್‌ – 400 ವಾಯು ರಕ್ಷಣಾ ಕ್ಷಿಪಣಿಯಿಂದ ಭಾರತೀಯ ವಾಯು ಸೇನೆಗೆ ಭಾರಿ ಬಲ ಬರಲಿದೆ.

ಅಮೆರಿಕ, ಭಾರತ ಮಧ್ಯೆ ಮಾತುಕತೆ ರದ್ದು: ಅಮೆರಿಕ ಹಾಗೂ ಭಾರತದ ಮಧ್ಯೆ ಜುಲೈ 6ರಂದು ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ  ಮಾತುಕತೆ ಮತ್ತೆ ರದ್ದಾದ ಬಳಿಕ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಒಪ್ಪಂದಕ್ಕೆ ಅಂಕಿತ ಬಿದ್ದಿದೆ. ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ 2 + 2 ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಬೇಕಿತ್ತು.

  • Share On Facebook
  • Tweet It


- Advertisement -
americaarmyindiamisile


Trending Now
#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
Tulunadu News December 2, 2023
ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
Tulunadu News December 2, 2023
You may also like
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
Leave A Reply

  • Recent Posts

    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
    • ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!
    • ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!
  • Popular Posts

    • 1
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 2
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 3
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • 4
      ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • 5
      ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search