• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ

TNN Correspondent Posted On July 1, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದ ಎದುರು ಭಾರತದ ದಿಟ್ಟ ನಿಲುವು ಮತ್ತೊಮ್ಮೆ ಸಾಬೀತಾಗಿದ್ದು, ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಮೆರಿಕದ ವಿರೋಧ ಹಾಗೂ ನಿರ್ಬಂಧ ವಿಧಿಸುವ ಎಚ್ಚರಿಕೆಯನ್ನು ಧಿಕ್ಕರಿಸಿ ಭಾರತ ರಷ್ಯಾದಿಂದ ಉನ್ನತ ತಂತ್ರಜ್ಞಾನ ಹೊಂದಿರುವ ಐದು ಎಸ್ -400 ವಾಯು ರಕ್ಷಣಾ ಕ್ಷಿಪಣಿಗಳನ್ನು ಖರೀದಿಸಲು ಮುಂದಾಗಿದೆ. 39 ಸಾವಿರ ಕೋಟಿ ಮೌಲ್ಯದ ಬೃಹತ್ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಅಮೆರಿಕದ ವಿರೋಧಕ್ಕೆ ಭಾರತ ಸೊಪ್ಪು ಹಾಕದೇ ದಿಟ್ಟ ನಿಲುವು ವ್ಯಕ್ತಪಡಿಸಿದೆ.

ಇತ್ತೀಚೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಲಾಗಿದೆ. ರಷ್ಯಾದೊಂದಿಗಿನ ಮಾತುಕತೆ ವೇಳೆ ಒಪ್ಪಂದಂತೆ ಸಣ್ಣ ವ್ಯತ್ಯಾಸಗಳಿಗೂ ಒಪ್ಪಿಗೆ ದೊರೆತಿದೆ. ಇದೀಗ ಹಣಕಾಸು ಸಚಿವಾಲಯ ಮತ್ತು ಪ್ರಧಾನಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿಯಲ್ಲಿ ಒಪ್ಪಿಗೆ ದೊರೆಯಬೇಕಿದೆ.

ಗೋವಾದಲ್ಲಿ  2016ರ ಅಕ್ಟೋಬರ್ ನಲ್ಲಿ ನಡೆದ ಶೃಂಗಸಭೆಯಲ್ಲಿ ಮೋದಿ – ಪುಟಿನ್ ಮಧ್ಯೆ ನಡೆದ ಮಾತುಕತೆ ವೇಳೆ ಎಸ್‌ – 400 ಕ್ಷಿಪಣಿ ವ್ಯವಸ್ಥೆಗೆ ಎರಡು ದೇಶಗಳ ಒಪ್ಪಿಗೆ ಸಿಕ್ಕಿತ್ತು. 2018ರ ಅಕ್ಟೋಬರ್ ನಲ್ಲಿ ಮೋದಿ ಪುಟಿನ್ ಮಧ್ಯೆ ಶೃಂಗಸಭೆ ನಡೆಯಲಿದ್ದು, ಈ ವೇಳೆ ಇದಕ್ಕೆ ಅಂತಿಮ ಸ್ಪರ್ಷ ದೊರೆಯಲಿದೆ. ಈ ಒಪ್ಪಂದಕ್ಕೆ ಅಮೆರಿಕ ಖ್ಯಾತೆ ತೆಗೆದಿತ್ತು.  ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಸುವ ರಾಷ್ಟ್ರಗಳ ವಿರುದ್ಧ ಅಮೆರಿಕ ಹಲವು ನಿರ್ಬಂಧ ವಿಧಿಸುವ ಕಾನೂನಿಗೆ ತಿದ್ದುಪಡಿ ಮಾಡಿದೆ. ಎಸ್‌ – 400 ವಾಯು ರಕ್ಷಣಾ ಕ್ಷಿಪಣಿಯಿಂದ ಭಾರತೀಯ ವಾಯು ಸೇನೆಗೆ ಭಾರಿ ಬಲ ಬರಲಿದೆ.

ಅಮೆರಿಕ, ಭಾರತ ಮಧ್ಯೆ ಮಾತುಕತೆ ರದ್ದು: ಅಮೆರಿಕ ಹಾಗೂ ಭಾರತದ ಮಧ್ಯೆ ಜುಲೈ 6ರಂದು ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ  ಮಾತುಕತೆ ಮತ್ತೆ ರದ್ದಾದ ಬಳಿಕ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ ಒಪ್ಪಂದಕ್ಕೆ ಅಂಕಿತ ಬಿದ್ದಿದೆ. ವಾಷಿಂಗ್ಟನ್‌ನಲ್ಲಿ ನಡೆಯಬೇಕಿದ್ದ 2 + 2 ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಬೇಕಿತ್ತು.

0
Shares
  • Share On Facebook
  • Tweet It


americaarmyindiamisile


Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
You may also like
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search