• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉತ್ತಮ ಜ್ಞಾಪಕ ಶಕ್ತಿ ಹೊಂದಿದ ಇಬ್ಬರು ಮಕ್ಕಳಿಗೆ ಯೋಗಿ ಆದಿತ್ಯನಾಥರಿಂದ ತಲಾ 51 ಸಾವಿರ ರೂ. ಬಹುಮಾನ!

TNN Correspondent Posted On July 2, 2018


  • Share On Facebook
  • Tweet It

ಲಖನೌ: ಯೋಗಿ ಆದಿತ್ಯನಾಥರು ಉತ್ತರಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ರಾಜ್ಯದ ಅಭಿವೃದ್ಧಿ, ರೈತರ ಸಾಲ ಮನ್ನಾ, ರೋಡ್ ರೋಮಿಯೋಗಳಿಗೆ ಕಡಿವಾಣ, ಅಪರಾಧ ನಿಯಂತ್ರಣ, ಕಾನೂನು ಸುವ್ಯವಸ್ಥೆ ಕಾಪಾಡುವುದು ಸೇರಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಮುಖ್ಯಮಂತ್ರಿಯಾದ ಒಂದೇ ವರ್ಷದಲ್ಲಿ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ.

ಇಂತಹ ಹಿನ್ನೆಲೆಯುಳ್ಳ ಯೋಗಿ ಆದಿತ್ಯನಾಥರು ಈಗ ಮತ್ತೊಂದು ಶ್ಲಾಘನೀಯ ಕಾರ್ಯ ಮಾಡಿದ್ದು, ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉತ್ತಮ ಜ್ಞಾಪಕ ಶಕ್ತಿ ಹೊಂದಿರುವ ಇಬ್ಬರು ಮಕ್ಕಳಿಗೆ ತಲಾ 51 ಸಾವಿರ ರೂಪಾಯಿ ಘೋಷಿಸಿ ಪ್ರೋತ್ಸಾಹಿಸಿದ್ದಾರೆ.

ಉತ್ತರ ಪ್ರದೇಶದ ಪಿಲಿಭಿಟ್ ಜಿಲ್ಲೆಯ ಹನಿ ಸಿಂಗ್ ಹಾಗೂ ಸಿಂಗ್ ಎಂಬ ವಿದ್ಯಾರ್ಥಿಗಳು ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಒಂದೂವರೆ ತಾಸಿನಲ್ಲಿ ಬರೋಬ್ಬರಿ ಎರಡು ಸಾವಿರ ಸಾಮಾನ್ಯ ಜ್ಞಾನದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥರು ಬಹುಮಾನ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ, ಈ ಇಬ್ಬರು ಮಕ್ಕಳು ಉತ್ತಮ ಪ್ರತಿಭೆ ಹೊಂದಿದ್ದಾರೆ. ಅವರಿಗೆ ಶುಭಾಶಯ ಕೋರುತ್ತ, ಅವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ. ಅಲ್ಲದೆ ರಾಜ್ಯ ಸರ್ಕಾರ ಅವರ ಶಿಕ್ಷಣಕ್ಕೆ ನೆರವಾಗಲಿದ್ದು, ತಲಾ 51 ಸಾವಿರ ರೂಪಾಯಿ ಬಹುಮಾನ ಹಾಗೂ ಉಚಿತವಾಗಿ ಬಸ್ ಪಾಸ್ ನೀಡಲಾಗುತ್ತದೆ ಎಂದು ಯೋಗಿ ಆದಿತ್ಯನಾಥರು ಭರವಸೆ ನೀಡಿದ್ದಾರೆ.

 

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search