• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತಮ ಜ್ಞಾಪಕ ಶಕ್ತಿ ಹೊಂದಿದ ಇಬ್ಬರು ಮಕ್ಕಳಿಗೆ ಯೋಗಿ ಆದಿತ್ಯನಾಥರಿಂದ ತಲಾ 51 ಸಾವಿರ ರೂ. ಬಹುಮಾನ!

TNN Correspondent Posted On July 2, 2018
0


0
Shares
  • Share On Facebook
  • Tweet It

ಲಖನೌ: ಯೋಗಿ ಆದಿತ್ಯನಾಥರು ಉತ್ತರಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ರಾಜ್ಯದ ಅಭಿವೃದ್ಧಿ, ರೈತರ ಸಾಲ ಮನ್ನಾ, ರೋಡ್ ರೋಮಿಯೋಗಳಿಗೆ ಕಡಿವಾಣ, ಅಪರಾಧ ನಿಯಂತ್ರಣ, ಕಾನೂನು ಸುವ್ಯವಸ್ಥೆ ಕಾಪಾಡುವುದು ಸೇರಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಮುಖ್ಯಮಂತ್ರಿಯಾದ ಒಂದೇ ವರ್ಷದಲ್ಲಿ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ.

ಇಂತಹ ಹಿನ್ನೆಲೆಯುಳ್ಳ ಯೋಗಿ ಆದಿತ್ಯನಾಥರು ಈಗ ಮತ್ತೊಂದು ಶ್ಲಾಘನೀಯ ಕಾರ್ಯ ಮಾಡಿದ್ದು, ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉತ್ತಮ ಜ್ಞಾಪಕ ಶಕ್ತಿ ಹೊಂದಿರುವ ಇಬ್ಬರು ಮಕ್ಕಳಿಗೆ ತಲಾ 51 ಸಾವಿರ ರೂಪಾಯಿ ಘೋಷಿಸಿ ಪ್ರೋತ್ಸಾಹಿಸಿದ್ದಾರೆ.

ಉತ್ತರ ಪ್ರದೇಶದ ಪಿಲಿಭಿಟ್ ಜಿಲ್ಲೆಯ ಹನಿ ಸಿಂಗ್ ಹಾಗೂ ಸಿಂಗ್ ಎಂಬ ವಿದ್ಯಾರ್ಥಿಗಳು ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಒಂದೂವರೆ ತಾಸಿನಲ್ಲಿ ಬರೋಬ್ಬರಿ ಎರಡು ಸಾವಿರ ಸಾಮಾನ್ಯ ಜ್ಞಾನದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥರು ಬಹುಮಾನ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ, ಈ ಇಬ್ಬರು ಮಕ್ಕಳು ಉತ್ತಮ ಪ್ರತಿಭೆ ಹೊಂದಿದ್ದಾರೆ. ಅವರಿಗೆ ಶುಭಾಶಯ ಕೋರುತ್ತ, ಅವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ. ಅಲ್ಲದೆ ರಾಜ್ಯ ಸರ್ಕಾರ ಅವರ ಶಿಕ್ಷಣಕ್ಕೆ ನೆರವಾಗಲಿದ್ದು, ತಲಾ 51 ಸಾವಿರ ರೂಪಾಯಿ ಬಹುಮಾನ ಹಾಗೂ ಉಚಿತವಾಗಿ ಬಸ್ ಪಾಸ್ ನೀಡಲಾಗುತ್ತದೆ ಎಂದು ಯೋಗಿ ಆದಿತ್ಯನಾಥರು ಭರವಸೆ ನೀಡಿದ್ದಾರೆ.

 

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search