• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಡೀ ಚೀನಾವನ್ನೇ ಗುರಿಯಾಗಿಸಿ ದಾಳಿ ಧ್ವಂಸ ಮಾಡುವ ಶಕ್ತಿ ಇರುವ ಕ್ಷಿಪಣಿಯೊಂದು ತಯಾರಾಗಿದೆ ಗೊತ್ತಾ?

TNN Correspondent Posted On July 2, 2018


  • Share On Facebook
  • Tweet It

ಭಾರತ ನೂರಕ್ಕೂ ಅಧಿಕ ಉಪಗ್ರಹಗಳನ್ನು ಒಮ್ಮೆಲ್ಲೇ ನಭಕ್ಕೆ ಹಾರಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡುವ ಜತೆಗೆ, ಅಪಾರ ಶಸ್ತ್ರಾಸ್ತ್ರ ಸಂಗ್ರಹಣೆ, ಮೇಕ್ ಇನ್ ಇಂಡಿಯಾ ಮೂಲಕ ಶಸ್ತ್ರಾಸ್ತ್ರ ಉತ್ಪಾದನೆ, ಖಂಡಾಂತರ ಕ್ಷಿಪಣಿ ತಯಾರು ಸೇರಿ ರಕ್ಷಣೆ ವಿಷಯದಲ್ಲೂ ಹಲವು ಕ್ರಮ ಕೈಗೊಂಡಿದೆ.

ಇದರ ಭಾಗವಾಗಿ, ಭಾರತ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಶೀಘ್ರದಲ್ಲೇ ಇಡೀ ಚೀನಾವನ್ನೇ ಗುರಿಯಾಗಿಸಿ ದಾಳಿ ಮಾಡುವ ಶಕ್ತಿ ಹೊಂದಿರುವ ಕ್ಷಿಪಣಿಯೊಂದನ್ನು ಅಳವಡಿಸಿಕೊಳ್ಳಲಿದೆ. ಆ ಮೂಲಕ ಗಡಿಯಲ್ಲಿ ಪದೇಪದೆ ಉಪಟಳ ಮಾಡುವ ಚೀನಾ ಹಾಗೂ ಪಾಕಿಸ್ತಾನಕ್ಕೆ ಟಾಂಗ್ ನೀಡಲು ಸಜ್ಜಾಗಿದೆ. ಅಲ್ಲದೆ, ರಕ್ಷಣೆ ವಿಷಯದಲ್ಲಿ ಭಾರತ ಹೇಗೆ ಭದ್ರ ಎಂಬುದನ್ನು ಜಗತ್ತಿಗೆ ಸಾರಲು ಮುಂದಾಗಿದೆ.

ಹೌದು, ದೇಶದಲ್ಲಿ ಇದೇ ಮೊದಲ ಬಾರಿಗೆ ಖಂಡಾಂತರವಾಗಿ ದಾಳಿ ಮಾಡುವ ಕ್ಷಿಪಣಿ (ಐಸಿಬಿಎಂ)ಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಅಗ್ನಿ-5 ಈ ಖಂಡಾಂತರ ಕ್ಷಿಪಣಿಯ ಹೆಸರಾಗಿದ್ದು, ಇದು ಇಡೀ ಚೀನಾವನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಮೂಲಗಳು ತಿಳಿಸಿವೆ.

ಅಣ್ವಸ್ತ್ರವನ್ನು ಹೊತ್ತುಕೊಂಡು ಸುಮಾರು ಐದು ಸಾವಿರ ಕಿಲೋ ಮೀಟರ್ ವ್ಯಾಪ್ತಿಯವರೆಗೆ ದಾಳಿ ಮಾಡುವ ಸಾಮರ್ಥ್ಯ ಹೊಂದಿರುವ ಇದು, ಇಡೀ ಚೀನಾವನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಿದೆ. ಚೀನಾದ ಬೃಹತ್ ನಗರಗಳಾದ ಬೀಜಿಂಗ್, ಶಾಂಘೈ, ಹಾಂಗ್-ಕಾಂಗ್ ಸೇರಿ ಇಡೀ ಚೀನಾವನ್ನೇ ಗುರಿಯಾಗಿಸಿ ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ರಕ್ಷಣಾ ತಜ್ಞರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search