• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳತ್ತ ಕೆಂಪು ಉಗ್ರರ ಕಣ್ಣು, ಮುಗ್ದ ಮಕ್ಕಳನ್ನು ದುಷ್ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ನಕ್ಸಲರು: ವಿಶ್ವಸಂಸ್ಥೆ ವರದಿ

TNN Correspondent Posted On July 2, 2018
0


0
Shares
  • Share On Facebook
  • Tweet It

ದೆಹಲಿ: ಬಡವರು, ಶೋಷಿತರು, ದಲಿತರು, ದಮನಿತರಿಗೆ ನ್ಯಾಯ ಒದಗಿಸುವ ಸೋಗು ಹಾಕಿಕೊಂಡು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಕಂಟಕವಾಗಿರುವ ನಕ್ಸಲರು ಇದೀಗ ಮುಗ್ದ ಮಕ್ಕಳನ್ನು ತನ್ನ ದುಷ್ಕೃತ್ಯಕ್ಕೆ ಬಳಸಿಕೊಳ್ಳಲು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂ ಆಘಾತಕಾಗಿ ವರದಿಯೊಂದನ್ನು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟಾನಿಯೋ ಗುಟೇರಸ್ ಬಿಡುಗಡೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಅಧಿಕಾರಕ್ಕೇರಿದ ನಂತರ ದೇಶದಲ್ಲಿ ನಕ್ಸಲ ಚಟುವಟಿಕೆಗಳಿಗೆ ಕೊನೆ ಮೊಳೆ ಹೊಡೆಯುತ್ತಿದ್ದು, ನಿರಂತರವಾಗಿ ಕಾರ್ಯಾಚರಣೆ ನಡೆಸಿ, ನಕ್ಸಲರನ್ನು ಹತ್ತಿಕ್ಕಲಾಗುತ್ತಿದೆ. ಇದರಿಂದ ಕಂಗೆಟ್ಟಿರುವ ಮಾವೋವಾದಿಗಳು ಮಕ್ಕಳ ಮೊರೆ ಹೋಗಿದ್ದಾರೆ. ನಕ್ಸಲ ಹೋರಾಟದಲ್ಲಿ ಫಲವಿಲ್ಲ ಎಂಬುದನ್ನು ಅರಿತು ಹಿರಿಯ ನಕ್ಸಲರು ಸಾಮಾಜಿಕ ಮುನ್ನೆಲೆಗೆ ಬರುತ್ತಿರುವುದು ಒಂದೆಡೆಯಾದರೇ, ಮತ್ತೊಂದೆಡೆ ರಕ್ಷಣಾ ಪಡೆಗಳ ನಿರಂತರ ದಾಳಿಯಿಂದ ನಕ್ಸಲರ ಬಲ ದಿನೇ ದಿನೆ ಕುಸಿಯುತ್ತಿದೆ. ಆದ್ದರಿಂದ ಅವರು ಮಕ್ಕಳನ್ನು ನೇಮಿಸಿಕೊಳ್ಳುತ್ತಿರುವುದು ಬಹಿರಂಗವಾಗಿದೆ.

ಛತ್ತೀಸಘಡ್ ಮತ್ತು ಜಾರ್ಖಂಡ್ ನಲ್ಲಿ ವಿಶೇಷವಾಗಿ ಮಕ್ಕಳನ್ನು ತೀವ್ರಗತಿಯಲ್ಲಿ ನಕ್ಸಲರು ನೇಮಕ ಮಾಡಿಕೊಳ್ಳುತ್ತಿದ್ದಾರೆ. ಮಕ್ಕಳನ್ನು ಲಾಟರಿ ಮೂಲಕ ನೇಮಕ ಮಾಡಿಕೊಂಡು ಅವರಿಗೆ ತರಬೇತಿ ನೀಡಲಾಗುತ್ತಿದೆ. ಹೋರಾಟಕ್ಕೆ ಸಿದ್ಧಗೊಳಿಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.

16 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಟ್ಟುಕೊಂಡು ನೇಮಕ ಮಾಡಿಕೊಳ್ಳುತ್ತಿದ್ದು, ಅರಣ್ಯದ ಪಕ್ಕದಲ್ಲಿರುವ ಗ್ರಾಮಗಳಲ್ಲಿ ಪ್ರತಿಕುಟುಂಬವೂ ಒಂದು ಮಗುವನ್ನು ಚಳುವಳಿಗಾಗಿ ಹೋರಾಟಕ್ಕೆ ದತ್ತು ನೀಡಬೇಕು ಎಂಬ ಷರತ್ತು ವಿಧಿಸುತ್ತಿದ್ದು. ಅದರಂತೆ ಲಾಟರಿ ಮೂಲಕ ಮಕ್ಕಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಿಆರ್ ಫಿಎಫ್ ಅಧಿಕಾರಿ ರಾಜೀವ್ ರೈ ಭಟ್ನಾಗರ್ ತಿಳಿಸಿದ್ದಾರೆ.

ನೇಮಕ ಮಾಡಿಕೊಂಡಿರುವ ಮಕ್ಕಳನ್ನು ಬಾಲ ದಸ್ತಾಸ್ ಎಂದು ನಾಮಕರಣ ಮಾಡಿದ್ದು, ಅವರನ್ನು ನಕ್ಸಲರ ಮಾಹಿತಿದಾರರಾಗಿ, ತಂತ್ರಜ್ಞಾನ ಬಳಕೆಗೆ, ಉಪಕರಣ ಪೂರೈಕೆಗೆ ಬಳಸಿಕೊಳ್ಳಲಾಗುತ್ತಿದೆ. ಆದರೂ ಇತ್ತೀಚಿನ ವರ್ಷಗಳಲ್ಲಿ ನಕ್ಸಲರು ಬಲ ತೀವ್ರಗತಿಯಲ್ಲಿ ಇಳಿಮುಖವಾಗಿದೆ ಎಂದು ತಿಳಿಸಿದ್ದಾರೆ. ದಾಳಿ ವೇಳೆಯಲ್ಲಿ ಮಕ್ಕಳ ಮೇಲೆ ಗುಂಡು ಹಾರಿಸದಂತೆ ಸಿಆರ್ ಫಿಎಫ್ ಸೈನಿಕರಿಗೆ ಸೂಚನೆ ನೀಡಲಾಗಿದೆ ಎಂದು ಭಟ್ನಾಗರ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search