• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳತ್ತ ಕೆಂಪು ಉಗ್ರರ ಕಣ್ಣು, ಮುಗ್ದ ಮಕ್ಕಳನ್ನು ದುಷ್ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ನಕ್ಸಲರು: ವಿಶ್ವಸಂಸ್ಥೆ ವರದಿ

TNN Correspondent Posted On July 2, 2018
0


0
Shares
  • Share On Facebook
  • Tweet It

ದೆಹಲಿ: ಬಡವರು, ಶೋಷಿತರು, ದಲಿತರು, ದಮನಿತರಿಗೆ ನ್ಯಾಯ ಒದಗಿಸುವ ಸೋಗು ಹಾಕಿಕೊಂಡು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಕಂಟಕವಾಗಿರುವ ನಕ್ಸಲರು ಇದೀಗ ಮುಗ್ದ ಮಕ್ಕಳನ್ನು ತನ್ನ ದುಷ್ಕೃತ್ಯಕ್ಕೆ ಬಳಸಿಕೊಳ್ಳಲು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂ ಆಘಾತಕಾಗಿ ವರದಿಯೊಂದನ್ನು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟಾನಿಯೋ ಗುಟೇರಸ್ ಬಿಡುಗಡೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಅಧಿಕಾರಕ್ಕೇರಿದ ನಂತರ ದೇಶದಲ್ಲಿ ನಕ್ಸಲ ಚಟುವಟಿಕೆಗಳಿಗೆ ಕೊನೆ ಮೊಳೆ ಹೊಡೆಯುತ್ತಿದ್ದು, ನಿರಂತರವಾಗಿ ಕಾರ್ಯಾಚರಣೆ ನಡೆಸಿ, ನಕ್ಸಲರನ್ನು ಹತ್ತಿಕ್ಕಲಾಗುತ್ತಿದೆ. ಇದರಿಂದ ಕಂಗೆಟ್ಟಿರುವ ಮಾವೋವಾದಿಗಳು ಮಕ್ಕಳ ಮೊರೆ ಹೋಗಿದ್ದಾರೆ. ನಕ್ಸಲ ಹೋರಾಟದಲ್ಲಿ ಫಲವಿಲ್ಲ ಎಂಬುದನ್ನು ಅರಿತು ಹಿರಿಯ ನಕ್ಸಲರು ಸಾಮಾಜಿಕ ಮುನ್ನೆಲೆಗೆ ಬರುತ್ತಿರುವುದು ಒಂದೆಡೆಯಾದರೇ, ಮತ್ತೊಂದೆಡೆ ರಕ್ಷಣಾ ಪಡೆಗಳ ನಿರಂತರ ದಾಳಿಯಿಂದ ನಕ್ಸಲರ ಬಲ ದಿನೇ ದಿನೆ ಕುಸಿಯುತ್ತಿದೆ. ಆದ್ದರಿಂದ ಅವರು ಮಕ್ಕಳನ್ನು ನೇಮಿಸಿಕೊಳ್ಳುತ್ತಿರುವುದು ಬಹಿರಂಗವಾಗಿದೆ.

ಛತ್ತೀಸಘಡ್ ಮತ್ತು ಜಾರ್ಖಂಡ್ ನಲ್ಲಿ ವಿಶೇಷವಾಗಿ ಮಕ್ಕಳನ್ನು ತೀವ್ರಗತಿಯಲ್ಲಿ ನಕ್ಸಲರು ನೇಮಕ ಮಾಡಿಕೊಳ್ಳುತ್ತಿದ್ದಾರೆ. ಮಕ್ಕಳನ್ನು ಲಾಟರಿ ಮೂಲಕ ನೇಮಕ ಮಾಡಿಕೊಂಡು ಅವರಿಗೆ ತರಬೇತಿ ನೀಡಲಾಗುತ್ತಿದೆ. ಹೋರಾಟಕ್ಕೆ ಸಿದ್ಧಗೊಳಿಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.

16 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಟ್ಟುಕೊಂಡು ನೇಮಕ ಮಾಡಿಕೊಳ್ಳುತ್ತಿದ್ದು, ಅರಣ್ಯದ ಪಕ್ಕದಲ್ಲಿರುವ ಗ್ರಾಮಗಳಲ್ಲಿ ಪ್ರತಿಕುಟುಂಬವೂ ಒಂದು ಮಗುವನ್ನು ಚಳುವಳಿಗಾಗಿ ಹೋರಾಟಕ್ಕೆ ದತ್ತು ನೀಡಬೇಕು ಎಂಬ ಷರತ್ತು ವಿಧಿಸುತ್ತಿದ್ದು. ಅದರಂತೆ ಲಾಟರಿ ಮೂಲಕ ಮಕ್ಕಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಿಆರ್ ಫಿಎಫ್ ಅಧಿಕಾರಿ ರಾಜೀವ್ ರೈ ಭಟ್ನಾಗರ್ ತಿಳಿಸಿದ್ದಾರೆ.

ನೇಮಕ ಮಾಡಿಕೊಂಡಿರುವ ಮಕ್ಕಳನ್ನು ಬಾಲ ದಸ್ತಾಸ್ ಎಂದು ನಾಮಕರಣ ಮಾಡಿದ್ದು, ಅವರನ್ನು ನಕ್ಸಲರ ಮಾಹಿತಿದಾರರಾಗಿ, ತಂತ್ರಜ್ಞಾನ ಬಳಕೆಗೆ, ಉಪಕರಣ ಪೂರೈಕೆಗೆ ಬಳಸಿಕೊಳ್ಳಲಾಗುತ್ತಿದೆ. ಆದರೂ ಇತ್ತೀಚಿನ ವರ್ಷಗಳಲ್ಲಿ ನಕ್ಸಲರು ಬಲ ತೀವ್ರಗತಿಯಲ್ಲಿ ಇಳಿಮುಖವಾಗಿದೆ ಎಂದು ತಿಳಿಸಿದ್ದಾರೆ. ದಾಳಿ ವೇಳೆಯಲ್ಲಿ ಮಕ್ಕಳ ಮೇಲೆ ಗುಂಡು ಹಾರಿಸದಂತೆ ಸಿಆರ್ ಫಿಎಫ್ ಸೈನಿಕರಿಗೆ ಸೂಚನೆ ನೀಡಲಾಗಿದೆ ಎಂದು ಭಟ್ನಾಗರ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search