• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಾಶ್ಮೀರದಲ್ಲಿ ಸುಳ್ಳು ಹರಡುವವರಿಗೆ ಬಿತ್ತು ಬ್ರೇಕ್. ವಾಟ್ಸಪ್ ಗ್ರೂಪ್, ಫೇಸ್ ಬುಕ್ ಖಾತೆ ಆರಂಭಕ್ಕೆ ಬೇಕಿನ್ನು ಪೊಲೀಸ್ ಅನುಮತಿ

TNN Correspondent Posted On July 2, 2018
0


0
Shares
  • Share On Facebook
  • Tweet It

ಶ್ರೀನಗರ: ಕಣಿವೆಯಲ್ಲಿ ನಿರಂತರವಾಗಿ ಸುಳ್ಳುಗಳನ್ನು ಹರಡಿ, ಜನರ ಮನಸ್ಸು ಕದಡಿಸಿ, ಅಶಾಂತಿ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ವಾಟ್ಸಪ್ ಗ್ರೂಪ್ ಮತ್ತು ಫೇಸ್ ಬುಕ್ ಪೇಜ್ ಗಳನ್ನು ಆರಂಭಿಸಲು ಪೊಲೀಸರ ಅನುಮತಿ ಕಡ್ಡಾಯ ಮಾಡುವ ಮೂಲಕ ಜಮ್ಮು ಕಾಶ್ಮೀರ ಪೊಲೀಸರು ಗಟ್ಟಿ ನಿರ್ಧಾರ ಕೈಗೊಂಡಿದ್ದಾರೆ. ಇದೀಗ ಕೇವಲ ಕಿಶ್ತ್ವಾರ ಜಿಲ್ಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಈಗಾಗಲೇ ಇರುವ ಖಾತೆಗಳು ಮತ್ತು ಗ್ರೂಪ್ ಗಳು ತಮ್ಮ ಎಲ್ಲ ಮಾಹಿತಿಯನ್ನು ಪೊಲೀಸರಿಗೆ ನೀಡಿ ಅನುಮತಿ ಪಡೆಯಬೇಕು. ಇಲ್ಲದಿದ್ದರೇ 10ದಿನಗಳ ನಂತರ ಗ್ರೂಪ್ ಮತ್ತು ಪೇಜ್ ಗಳನ್ನು ನಿಷ್ಕೃಯಗೊಳಿಸಲಾಗುವುದು ಎಂದು ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.

ಗ್ರೂಪ್ ಅಡ್ಮಿನ್ ಕಾನೂನು ಪ್ರಕಾರ ಸೂಚಿಸಿರುವ ಎಲ್ಲ ಮಾಹಿತಿಯನ್ನು ನೀಡಬೇಕು. ಗ್ರೂಪ್ ಮತ್ತು  ಪೇಜ್ ಗಳಲ್ಲಿ ಅಪ್ಲೋಡ್ ಆಗುವ ಎಲ್ಲ ಮಾಹಿತಿಗೆ ಅವರೇ ಜವಾಬ್ದಾರರಾಗಿರುತ್ತಾರೆ. ಪ್ರಚೋದನಾತ್ಮಕ ಅಂಶಗಳಿದ್ದರೇ ಗ್ರೂಪಿನ್ ಅಡ್ಮಿನ್ ಕಾನೂನು ತೊಡಕುಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಶ್ತ್ವಾರ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಅಂಗ್ರೆಜ್ ಸಿಂಗ್ ರಾಣಾ ಈ ಕುರಿತು ಆದೇಶ ಹೊರಡಿಸಿದ್ದು, ಭಯೋತ್ಪಾದನೆ ನಿಯಂತ್ರಣ ಕಾನೂನು, ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ ಪ್ರಕಾರ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೈಬರ್ ಕ್ರೈಮ್ ಮತ್ತು ಐಟಿ ಕಾಯಿದೆ ಪ್ರಕಾರ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಆದೇಶ ಕೈಗೊಳ್ಳಲಾಗಿದೆ. ವದಂತಿಗಳನ್ನು ಹರಡುವುದು, ಸುಳ್ಳು ಮಾಹಿತಿ, ಪ್ರಚೋಧನಾತ್ಮಕ ಅಂಶಗಳನ್ನು ಹಂಚಿಕೊಂಡವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಎಲ್ಲದಕ್ಕೂ ಗ್ರೂಪ್ ಮತ್ತು ಫೇಸ್ ಬುಕ್ ಪೇಜಿನ ಅಡ್ಮಿನ್ ಹೊಣೆ. ಎಲ್ಲರಿಗೂ ಭಾವನೆಗಳನ್ನು ಹಂಚಿಕೊಳ್ಳುವ ಹಕ್ಕು ಇದೆ. ಆದರೆ ಅದು ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search