• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಾಶ್ಮೀರದಲ್ಲಿ ಸುಳ್ಳು ಹರಡುವವರಿಗೆ ಬಿತ್ತು ಬ್ರೇಕ್. ವಾಟ್ಸಪ್ ಗ್ರೂಪ್, ಫೇಸ್ ಬುಕ್ ಖಾತೆ ಆರಂಭಕ್ಕೆ ಬೇಕಿನ್ನು ಪೊಲೀಸ್ ಅನುಮತಿ

TNN Correspondent Posted On July 2, 2018
0


0
Shares
  • Share On Facebook
  • Tweet It

ಶ್ರೀನಗರ: ಕಣಿವೆಯಲ್ಲಿ ನಿರಂತರವಾಗಿ ಸುಳ್ಳುಗಳನ್ನು ಹರಡಿ, ಜನರ ಮನಸ್ಸು ಕದಡಿಸಿ, ಅಶಾಂತಿ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ವಾಟ್ಸಪ್ ಗ್ರೂಪ್ ಮತ್ತು ಫೇಸ್ ಬುಕ್ ಪೇಜ್ ಗಳನ್ನು ಆರಂಭಿಸಲು ಪೊಲೀಸರ ಅನುಮತಿ ಕಡ್ಡಾಯ ಮಾಡುವ ಮೂಲಕ ಜಮ್ಮು ಕಾಶ್ಮೀರ ಪೊಲೀಸರು ಗಟ್ಟಿ ನಿರ್ಧಾರ ಕೈಗೊಂಡಿದ್ದಾರೆ. ಇದೀಗ ಕೇವಲ ಕಿಶ್ತ್ವಾರ ಜಿಲ್ಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಈಗಾಗಲೇ ಇರುವ ಖಾತೆಗಳು ಮತ್ತು ಗ್ರೂಪ್ ಗಳು ತಮ್ಮ ಎಲ್ಲ ಮಾಹಿತಿಯನ್ನು ಪೊಲೀಸರಿಗೆ ನೀಡಿ ಅನುಮತಿ ಪಡೆಯಬೇಕು. ಇಲ್ಲದಿದ್ದರೇ 10ದಿನಗಳ ನಂತರ ಗ್ರೂಪ್ ಮತ್ತು ಪೇಜ್ ಗಳನ್ನು ನಿಷ್ಕೃಯಗೊಳಿಸಲಾಗುವುದು ಎಂದು ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.

ಗ್ರೂಪ್ ಅಡ್ಮಿನ್ ಕಾನೂನು ಪ್ರಕಾರ ಸೂಚಿಸಿರುವ ಎಲ್ಲ ಮಾಹಿತಿಯನ್ನು ನೀಡಬೇಕು. ಗ್ರೂಪ್ ಮತ್ತು  ಪೇಜ್ ಗಳಲ್ಲಿ ಅಪ್ಲೋಡ್ ಆಗುವ ಎಲ್ಲ ಮಾಹಿತಿಗೆ ಅವರೇ ಜವಾಬ್ದಾರರಾಗಿರುತ್ತಾರೆ. ಪ್ರಚೋದನಾತ್ಮಕ ಅಂಶಗಳಿದ್ದರೇ ಗ್ರೂಪಿನ್ ಅಡ್ಮಿನ್ ಕಾನೂನು ತೊಡಕುಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಶ್ತ್ವಾರ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಅಂಗ್ರೆಜ್ ಸಿಂಗ್ ರಾಣಾ ಈ ಕುರಿತು ಆದೇಶ ಹೊರಡಿಸಿದ್ದು, ಭಯೋತ್ಪಾದನೆ ನಿಯಂತ್ರಣ ಕಾನೂನು, ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ ಪ್ರಕಾರ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೈಬರ್ ಕ್ರೈಮ್ ಮತ್ತು ಐಟಿ ಕಾಯಿದೆ ಪ್ರಕಾರ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಆದೇಶ ಕೈಗೊಳ್ಳಲಾಗಿದೆ. ವದಂತಿಗಳನ್ನು ಹರಡುವುದು, ಸುಳ್ಳು ಮಾಹಿತಿ, ಪ್ರಚೋಧನಾತ್ಮಕ ಅಂಶಗಳನ್ನು ಹಂಚಿಕೊಂಡವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಎಲ್ಲದಕ್ಕೂ ಗ್ರೂಪ್ ಮತ್ತು ಫೇಸ್ ಬುಕ್ ಪೇಜಿನ ಅಡ್ಮಿನ್ ಹೊಣೆ. ಎಲ್ಲರಿಗೂ ಭಾವನೆಗಳನ್ನು ಹಂಚಿಕೊಳ್ಳುವ ಹಕ್ಕು ಇದೆ. ಆದರೆ ಅದು ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search