• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಾಶ್ಮೀರದಲ್ಲಿ ಸುಳ್ಳು ಹರಡುವವರಿಗೆ ಬಿತ್ತು ಬ್ರೇಕ್. ವಾಟ್ಸಪ್ ಗ್ರೂಪ್, ಫೇಸ್ ಬುಕ್ ಖಾತೆ ಆರಂಭಕ್ಕೆ ಬೇಕಿನ್ನು ಪೊಲೀಸ್ ಅನುಮತಿ

TNN Correspondent Posted On July 2, 2018
0


0
Shares
  • Share On Facebook
  • Tweet It

ಶ್ರೀನಗರ: ಕಣಿವೆಯಲ್ಲಿ ನಿರಂತರವಾಗಿ ಸುಳ್ಳುಗಳನ್ನು ಹರಡಿ, ಜನರ ಮನಸ್ಸು ಕದಡಿಸಿ, ಅಶಾಂತಿ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ವಾಟ್ಸಪ್ ಗ್ರೂಪ್ ಮತ್ತು ಫೇಸ್ ಬುಕ್ ಪೇಜ್ ಗಳನ್ನು ಆರಂಭಿಸಲು ಪೊಲೀಸರ ಅನುಮತಿ ಕಡ್ಡಾಯ ಮಾಡುವ ಮೂಲಕ ಜಮ್ಮು ಕಾಶ್ಮೀರ ಪೊಲೀಸರು ಗಟ್ಟಿ ನಿರ್ಧಾರ ಕೈಗೊಂಡಿದ್ದಾರೆ. ಇದೀಗ ಕೇವಲ ಕಿಶ್ತ್ವಾರ ಜಿಲ್ಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಈಗಾಗಲೇ ಇರುವ ಖಾತೆಗಳು ಮತ್ತು ಗ್ರೂಪ್ ಗಳು ತಮ್ಮ ಎಲ್ಲ ಮಾಹಿತಿಯನ್ನು ಪೊಲೀಸರಿಗೆ ನೀಡಿ ಅನುಮತಿ ಪಡೆಯಬೇಕು. ಇಲ್ಲದಿದ್ದರೇ 10ದಿನಗಳ ನಂತರ ಗ್ರೂಪ್ ಮತ್ತು ಪೇಜ್ ಗಳನ್ನು ನಿಷ್ಕೃಯಗೊಳಿಸಲಾಗುವುದು ಎಂದು ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.

ಗ್ರೂಪ್ ಅಡ್ಮಿನ್ ಕಾನೂನು ಪ್ರಕಾರ ಸೂಚಿಸಿರುವ ಎಲ್ಲ ಮಾಹಿತಿಯನ್ನು ನೀಡಬೇಕು. ಗ್ರೂಪ್ ಮತ್ತು  ಪೇಜ್ ಗಳಲ್ಲಿ ಅಪ್ಲೋಡ್ ಆಗುವ ಎಲ್ಲ ಮಾಹಿತಿಗೆ ಅವರೇ ಜವಾಬ್ದಾರರಾಗಿರುತ್ತಾರೆ. ಪ್ರಚೋದನಾತ್ಮಕ ಅಂಶಗಳಿದ್ದರೇ ಗ್ರೂಪಿನ್ ಅಡ್ಮಿನ್ ಕಾನೂನು ತೊಡಕುಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಶ್ತ್ವಾರ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಅಂಗ್ರೆಜ್ ಸಿಂಗ್ ರಾಣಾ ಈ ಕುರಿತು ಆದೇಶ ಹೊರಡಿಸಿದ್ದು, ಭಯೋತ್ಪಾದನೆ ನಿಯಂತ್ರಣ ಕಾನೂನು, ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ ಪ್ರಕಾರ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೈಬರ್ ಕ್ರೈಮ್ ಮತ್ತು ಐಟಿ ಕಾಯಿದೆ ಪ್ರಕಾರ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಆದೇಶ ಕೈಗೊಳ್ಳಲಾಗಿದೆ. ವದಂತಿಗಳನ್ನು ಹರಡುವುದು, ಸುಳ್ಳು ಮಾಹಿತಿ, ಪ್ರಚೋಧನಾತ್ಮಕ ಅಂಶಗಳನ್ನು ಹಂಚಿಕೊಂಡವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಎಲ್ಲದಕ್ಕೂ ಗ್ರೂಪ್ ಮತ್ತು ಫೇಸ್ ಬುಕ್ ಪೇಜಿನ ಅಡ್ಮಿನ್ ಹೊಣೆ. ಎಲ್ಲರಿಗೂ ಭಾವನೆಗಳನ್ನು ಹಂಚಿಕೊಳ್ಳುವ ಹಕ್ಕು ಇದೆ. ಆದರೆ ಅದು ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search