• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

51 ದೇವಾಲಯ ನಿರ್ಮಾಣಕ್ಕೆ ಜಾಗ, ಹಣ ನೀಡುವ ಮೂಲಕ ಸೌಹಾರ್ದತೆ ಮೆರೆದ ಮುಸ್ಲಿಂ ಉದ್ಯಮಿ!

TNN Correspondent Posted On July 3, 2018
0


0
Shares
  • Share On Facebook
  • Tweet It

ದೇಶದಲ್ಲಿ ಹಿಂದೂಗಳು ಎಂದರೆ ಅಸಹಿಷ್ಣುಗಳು, ಮುಸ್ಲಿಮರು ಹಿಂದೂಗಳ ಜತೆ ಬೆರೆಯಬಾರದು ಎಂಬ ಗಾಳಿ ಸುದ್ದಿ ಹಬ್ಬಿಸುವವರು ತುಂಬ ಜನ ಇದ್ದಾರೆ. ಇದೇ ಕಾರಣಕ್ಕೆ ಹಲವು ಮುಸ್ಲಿಮರು ಹಿಂದೂಗಳನ್ನು ಕಂಡರೆ ದ್ವೇಷ ಸಾಧಿಸುತ್ತಾರೆ. ಇನ್ನೂ ಕೆಲವು ಮುಸ್ಲಿಂ ಮೂಲಭೂತವಾದಿಗಳಂತೂ ಹಿಂದೂಗಳ ವಿರುದ್ಧ ಲವ್ ಜಿಹಾದ್, ಮತಾಂತರದಂತಹ ಅಸ್ತ್ರ ಬಳಸುತ್ತಾರೆ. ಅಷ್ಟರಮಟ್ಟಿಗೆ ಅಸಹಿಷ್ಣುತೆ, ಕಪಟತನ ಮೆರೆಯುತ್ತಾರೆ.

ಆದರೆ ಉತ್ತರ ಪ್ರದೇಶದ ಈ ಮುಸ್ಲಿಂ ಉದ್ಯಮಿ ಮಾತ್ರ ಈ ಮೇಲಿನ ಮಾತಿಗೆ ಅಪವಾದದಂತಿದ್ದು, ಉತ್ತರ ಪ್ರದೇಶ ಮತ್ತು ಬಿಹಾರದ ಹಲವೆಡೆ ಸುಮಾರು 51 ಹಿಂದೂ ದೇವಾಲಯ ನಿರ್ಮಾಣಕ್ಕಾಗಿ ಹಣ ಹಾಗೂ ಜಾಗ ನೀಡಲು ನಿರ್ಧರಿಸುವ ಮೂಲಕ ಹಿಂದೂ ದೇವರ ಮೇಲೆ ವಿಶೇಷ ಪ್ರೀತಿ ತೋರಿಸುವ ಜತೆಗೆ ಸೌಹಾರ್ದತೆ ಪ್ರದರ್ಶಿಸಿದ್ದಾನೆ.

ಹೌದು, ಶೈನ್ ಗ್ರೂಪ್ ನ ಚೇರ್ಮನ್ ಆಗಿರುವ ರಷೀದ್ ನಸೀಮ್ ಎಂಬುವವರೇ ಈ ಸೌಹಾರ್ದ ಮೆರೆದ ಉದ್ಯಮಿಯಾಗಿದ್ದು, ಭಾರತದಲ್ಲಿರುವ ಜಾತ್ಯತೀತತೆ ಉಳಿಸಲು ಹಾಗೂ ದೇವರು ಎಲ್ಲರಿಗೂ ಒಂದೇ ಎಂಬುದನ್ನು ಸಾಬೀತುಪಡಿಸುವ ದೃಷ್ಟಿಯಿಂದ ದೇವಾಲಯ ನಿರ್ಮಾಣಕ್ಕೆ ಹಣ ಹಾಗೂ ಜಾಗ ನೀಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

ನಾನೊಬ್ಬ ಮುಸ್ಲಿಂ ವ್ಯಕ್ತಿಯಾಗಿ ಧಾರ್ಮಿಕವಾಗಿ ಉತ್ತಮ ಕಾರ್ಯ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ದೇವಾಲಯ ನಿರ್ಮಾಣಕ್ಕೆ ಹಣ ನೀಡಿರುವುದು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯ ಹೆಚ್ಚಾಗಲಿ ಎಂದು. ಈ ಉತ್ತಮ ಕಾರ್ಯಕ್ಕೆ ಎಲ್ಲರೂ ಸಹಕರಿಸಲಿದ್ದಾರೆ ಎಂಬ ನಂಬಿಕೆ ಎಂದು ರಷೀದ್ ತಿಳಿಸಿದ್ದಾರೆ.

ಒಟ್ಟಿನಲ್ಲಿ ಧರ್ಮದ ಉದ್ಧಾರಕ್ಕಾಗಿ ದುಡಿಯುತ್ತೇನೆ ಎಂದು ಜಿಹಾದ್ ಹಾಗೂ ಮತಾಂತರದಲ್ಲಿ ತೊಡಗುವವರ ಮಧ್ಯೆ, ಎಲ್ಲ ಧರ್ಮಗಳ ಸಹಿಷ್ಣುತೆಗಾಗಿ ಹಿಂದೂ ದೇವಾಲಯಕ್ಕೆ ಅಪಾರ ಹಣ ನೀಡಲು ನಿರ್ಧರಿಸಿರುವ ರಷೀದ್ ನಡೆ ಉತ್ತಮ ಹಾಗೂ ಅನುಕರಣೀಯವಾಗಿದೆ.

 

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search