• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಧಾನಿ ಮೋದಿ ಫಿಟ್ನೆಸ್ ವೀಡಿಯೋಗೆ ಸರ್ಕಾರದಿಂದ ಹಣ ಖರ್ಚು ಮಾಡಿಲ್ಲ ಎಂದು ಸ್ಪಷ್ಟನೆ, ಶಶಿ ತರೂರ್ ಗೆ ಮುಖಭಂಗ!

TNN Correspondent Posted On July 3, 2018


  • Share On Facebook
  • Tweet It

ಈ ಕಾಂಗ್ರೆಸ್ಸಿಗರೇ ಹೀಗೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಬೇಕು ಎಂದರೆ ಯಾವ ದಾರಿಯನ್ನು ಬೇಕಾದರೂ ಅನುಸರಿಸುತ್ತಾರೆ. ಯಾವ ಮಟ್ಟಕ್ಕೂ ಇಳಿಯುತ್ತಾರೆ. ಇದಕ್ಕೆ ನೋಟು ನಿಷೇಧ, ಜಿಎಸ್ಟಿ ಜಾರಿ, ಮೋದಿ ಅವರ ವಿದೇಶ ಪ್ರವಾಸ, ತೊಡುವ ಬಟ್ಟೆ… ಹೀಗೆ ಎಲ್ಲ ವಿಷಯದಲ್ಲೂ ಕಾಂಗ್ರೆಸ್ಸಿಗರು ಮೋದಿ ಅವರನ್ನು ಸುಖಾಸುಮ್ಮನೆ ಟೀಕಿಸುತ್ತಾರೆ ಹಾಗೂ ವಾಸ್ತವ ಅರಿತಾಗ ಮುಖಭಂಗ ಅನುಭವಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ, ವ್ಯಾಯಾಮ ಮಾಡುವ ವೀಡಿಯೋ ಒಂದನ್ನು ಟ್ವಿಟರ್ ನಲ್ಲಿ ಅಪ್ ಲೋಡ್ ಮಾಡುವ ಮೂಲಕ ಹಲವರಿಗೆ ಫಿಟ್ನೆಸ್ ಚಾಲೆಂಜ್ ಹಾಕಿದ್ದರು. ವ್ಯಾಯಾಮ, ಯೋಗ ಮಾಡುವುದು ಒಳ್ಳೆಯದು ಎಂಬ ದೃಷ್ಟಿಯಿಂದ ಮೋದಿ ಅವರು ವೀಡಿಯೋ ಅಪ್ಲೋಡ್ ಮಾಡಿದ್ದರು. ಹಮ್ ಫಿಟ್ ತೋ ಇಂಡಿಯಾ ಫಿಟ್ ಅಭಿಯಾನಕ್ಕೆ ಮೋದಿ ಅವರು ಬೆಂಬಲಿಸಿದ್ದು ಸರಿಯಾಗಿಯೇ ಇತ್ತು.

ಆದರೆ ಮೋದಿ ಅವರು ಖ್ಯಾತಿ ಗಳಿಸುವುದು, ಜನರ ಮೆಚ್ಚುಗೆಗೆ ಪಾತ್ರರಾದರೆ ಕಾಂಗ್ರೆಸ್ಸಿಗರಿಗೆ ಸಹಿಸಲು ಆಗಲಿಲ್ಲ. ಇದೇ ಕಾರಣಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಅವರು ಮೋದಿ ವಿರುದ್ಧ ಮಾತನಾಡಿದರು. ನರೇಂದ್ರ ಮೋದಿ ಅವರು ಸರ್ಕಾರದ ಹಣದಲ್ಲಿ ಯೋಗ, ವ್ಯಾಯಾಮ ಮಾಡಿದ್ದಾರೆ. ಇದಕ್ಕೆ 35 ಲಕ್ಷ ರೂಪಾಯಿ ಖರ್ಚಾಗಿದೆ ಎಂದು ಆರೋಪಿಸಿದ್ದರು.

ಆದರೆ ಇದಕ್ಕೆ ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ರಾಜ್ಯವರ್ಧನ್ ಸಿಂಗ್ ರಾಠೋಡ್ ಅವರು ಸ್ಪಷ್ಟನೆ ನೀಡಿದ್ದು, ಮೋದಿ ಅವರ ವೀಡಿಯೋಕ್ಕಾಗಿ ಸರ್ಕಾರ ಒಂದು ನಯಾಪೈಸೆಯೂ ಖರ್ಚು ಮಾಡಿಲ್ಲ. ಪ್ರಧಾನಮಂತ್ರಿ ಕಚೇರಿಯ ಫೋಟೋಗ್ರಾಫರ್ ಈ ವೀಡಿಯೋ ಮಾಡಿದ್ದು, 35 ಲಕ್ಷ ರೂಪಾಯಿ ಅಲ್ಲ, ಒಂದು ಲಕ್ಷ ರೂಪಾಯಿ ಸಹ ಖರ್ಚು ಮಾಡಿಲ್ಲ. ಶಶಿ ತರೂರ್ ಸತ್ಯದ ಮೇಲೆ ಹೊಡೆಯುವ ಹಾಗೆ ಸುಳ್ಳು ಹೇಳಿದ್ದಾರೆ ಎಂದು ಸಿಂಗ್ ಜಾಡಿಸಿದ್ದಾರೆ. ಇದು ಶಶಿ ತರೂರ್ ಅವರಿಗೆ ಮುಖಭಂಗವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search