• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

35 ವರ್ಷದಿಂದ ಜನರಲ್ ಬಿಪಿನ್ ರಾವತ್ ಅವರು ಸಿನೆಮಾ ನೋಡಿಲ್ಲ. ಕಾರಣ ಕೇಳಿದರೇ ಹೆಮ್ಮೆ ಎನಿಸುತ್ತೆ

TNN Correspondent Posted On July 5, 2018


  • Share On Facebook
  • Tweet It

ದೆಹಲಿ: ಭಾರತೀಯ ಸೈನಿಕರು ತಮ್ಮ ಕುಟುಂಬವನ್ನು ಬಿಟ್ಟು, ತಮ್ಮ ಪ್ರಾಣ ಪಣಕ್ಕಿಟ್ಟು ದೇಶ ರಕ್ಷಣೆಗೆ ಹೋರಾಡುತ್ತಾರೆ. ಅದರ ಜೊತೆಗೆ ಆಗಾಗ ಸ್ವಲ್ಪ ಮನರಂಜನೆಗೆ ತಮ್ಮ ಶಿಬಿರದಲ್ಲೇ ಹಾಡು, ಕುಣಿತ ಮಾಡುತ್ತಾರೆ. ಇದೂ ಕೂಡ ವಿರಳಾತೀ ವಿರಳ ಎನ್ನಬಹುದು. ಇನ್ನು ಪ್ರಸ್ತುತ ದಿನಗಳಲ್ಲಿ ಯಾವುದೇ ಹುದ್ದೇಯಲ್ಲಿದ್ದರೂ ಸಿನೆಮಾ ನೋಡದವರು ಸಿಗುವುದು ಕಡಿಮೆ. ಅದರಲ್ಲೂ ಉನ್ನತ ಹುದ್ದೆಯಲ್ಲಿದ್ದವರು ತಮ್ಮ ಕೆಲಸದ ಒತ್ತಡದ ಮಧ್ಯೆ ಸಿನೆಮಾ ನೋಡುವುದು ಸಾಮಾನ್ಯ . ಆದರೇ ಭಾರತೀಯ ಸೇನೆಯ ಮುಖ್ಯಸ್ಥ ಜನರಲ್  ಬಿಪಿನ್ ರಾವತ್  ಅವರು, 35 ವರ್ಷದಿಂದ ಸಿನೆಮಾವನ್ನೇ ನೋಡಿಲ್ಲ, ನನಗೆ ಮೂರು ಗಂಟೆ ಒಂದೇ ಕಡೆ ಕೂಡಲು  ಸಮಯ ಸಿಕ್ಕಿಲ್ಲ ಎಂಬ ಸತ್ಯವನ್ನು ಹೊರ ಹಾಕಿದ್ದಾರೆ. ಈ ಒಂದು ಮಾತು ಸೈನಿಕರಲ್ಲಿರುವ ಕಾರ್ಯತ್ಪರತೆ, ದೇಶ ಭಕ್ತಿಗೆ ಸಾಕ್ಷಿಯಾಗಿ ನಿಂತಿದೆ.

ದೆಹಲಿಯ ಪಬ್ಲಿಕ್ ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳೊಂದಿಗಿನ ಸಂವಾದದ ವೇಳೆ 8ನೇ ತರಗತಿ ವಿದ್ಯಾರ್ಥಿ ಶ್ರೀವೋಮ್  ಕಶ್ಯಪ್  ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಶ್ವದ ಬಲಿಷ್ಠ ಸೈನಿಕ ಪಡೆಯ ಮುಖ್ಯಸ್ಥರಾಗಿರುವ ಜನರಲ್ ಬಿಪಿನ್ ರಾವತ್ ಅವರು ಕಳೆದ 35 ವರ್ಷದಿಂದ ಸಿನೆಮಾವನ್ನೇ ನೋಡಿಲ್ಲ ಎಂದು ಹೇಳಿದ್ದಾರೆ. ನನಗೆ 35 ವರ್ಷದಿಂದ ಸಿನೆಮಾ ನೋಡಲು ಮೂರು ಘಂಟೆ ಸಮಯ ದೊರಕ್ಕಿಲ್ಲ ಎಂಬ ಉತ್ತರವನ್ನು ನೀಡುವ ಮೂಲಕ ದೇಶಸೇವೆಗೆ ಅವರ ಕೊಡುಗೆ ಎಂಥಾದ್ದು ಎಂಬುದನ್ನು ತಿಳಿಸಿದ್ದಾರೆ.

ಅಲ್ಲದೇ ವಿದ್ಯಾರ್ಥಿಗಳಿಗೆ ಮಹತ್ವದ ಸಲಹೆಯನ್ನು ನೀಡಿರುವ ಅವರು ‘ಕಠಿಣ ಪರಿಶ್ರಮ ಪಡಿ. ಯಶಸ್ಸು ದೊರೆಯುತ್ತದೆ. ಜೀವನದಲ್ಲಿ ವಿಫಲರಾದವರನ್ನು ನೋಡದೇ ಮುನ್ನಡೆಯಿರಿ. ದೇಶಸೇವೆ ಮಾಡಲು ಮಕ್ಕಳು ಭವಿಷ್ಯದಲ್ಲಿ ಸೇನೆ ಸೇರಬೇಕು ಎಂದು ಹೇಳಿದರು.

ಭಾರತೀಯ ಸೇನೆಗೆ 1978 ಡಿಸೆಂಬರ್ 16ರಂದು  ಭಾರತೀಯ ಸೇನೆಗೆ ಸೇರ್ಪಡೆಯಾಗಿರುವ ರಾವತ್ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರ ದೇಶ ಸೇವೆ ಆರಂಭವಾಗಿ ಸುಮಾರು 40 ವರ್ಷಗಳಾಗಿದ್ದು, ಸುಮಾರು 35 ವರ್ಷದಿಂದ ಸಿನೆಮಾವನ್ನೇ ನೋಡಿಲ್ಲ. ನನಗೆ ಸಿನೆಮಾ ನೋಡಲು ಮೂರು ಘಂಟೆ ಸಮಯ ಸಿಕ್ಕಿಲ್ಲ ಎಂಬ ಅವರ ಮಾತು ಎಂಥವರಿಗೂ ದೇಶ ಸೇವಕನ ಕಾರ್ಯ ವೈಖರಿಗೆ ಹೆಮ್ಮೆ ಮೂಡಿಸದೇ ಇರದು. ಇಂಥವರಿಂದಲ್ಲವೇ ಭಾರತ  ರಕ್ಷಣಾ ವ್ಯವಸ್ಥೆ ಇಷ್ಟು ಬಲಿಷ್ಠವಾಗಿರುವುದು.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search