• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

35 ವರ್ಷದಿಂದ ಜನರಲ್ ಬಿಪಿನ್ ರಾವತ್ ಅವರು ಸಿನೆಮಾ ನೋಡಿಲ್ಲ. ಕಾರಣ ಕೇಳಿದರೇ ಹೆಮ್ಮೆ ಎನಿಸುತ್ತೆ

TNN Correspondent Posted On July 5, 2018
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಸೈನಿಕರು ತಮ್ಮ ಕುಟುಂಬವನ್ನು ಬಿಟ್ಟು, ತಮ್ಮ ಪ್ರಾಣ ಪಣಕ್ಕಿಟ್ಟು ದೇಶ ರಕ್ಷಣೆಗೆ ಹೋರಾಡುತ್ತಾರೆ. ಅದರ ಜೊತೆಗೆ ಆಗಾಗ ಸ್ವಲ್ಪ ಮನರಂಜನೆಗೆ ತಮ್ಮ ಶಿಬಿರದಲ್ಲೇ ಹಾಡು, ಕುಣಿತ ಮಾಡುತ್ತಾರೆ. ಇದೂ ಕೂಡ ವಿರಳಾತೀ ವಿರಳ ಎನ್ನಬಹುದು. ಇನ್ನು ಪ್ರಸ್ತುತ ದಿನಗಳಲ್ಲಿ ಯಾವುದೇ ಹುದ್ದೇಯಲ್ಲಿದ್ದರೂ ಸಿನೆಮಾ ನೋಡದವರು ಸಿಗುವುದು ಕಡಿಮೆ. ಅದರಲ್ಲೂ ಉನ್ನತ ಹುದ್ದೆಯಲ್ಲಿದ್ದವರು ತಮ್ಮ ಕೆಲಸದ ಒತ್ತಡದ ಮಧ್ಯೆ ಸಿನೆಮಾ ನೋಡುವುದು ಸಾಮಾನ್ಯ . ಆದರೇ ಭಾರತೀಯ ಸೇನೆಯ ಮುಖ್ಯಸ್ಥ ಜನರಲ್  ಬಿಪಿನ್ ರಾವತ್  ಅವರು, 35 ವರ್ಷದಿಂದ ಸಿನೆಮಾವನ್ನೇ ನೋಡಿಲ್ಲ, ನನಗೆ ಮೂರು ಗಂಟೆ ಒಂದೇ ಕಡೆ ಕೂಡಲು  ಸಮಯ ಸಿಕ್ಕಿಲ್ಲ ಎಂಬ ಸತ್ಯವನ್ನು ಹೊರ ಹಾಕಿದ್ದಾರೆ. ಈ ಒಂದು ಮಾತು ಸೈನಿಕರಲ್ಲಿರುವ ಕಾರ್ಯತ್ಪರತೆ, ದೇಶ ಭಕ್ತಿಗೆ ಸಾಕ್ಷಿಯಾಗಿ ನಿಂತಿದೆ.

ದೆಹಲಿಯ ಪಬ್ಲಿಕ್ ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳೊಂದಿಗಿನ ಸಂವಾದದ ವೇಳೆ 8ನೇ ತರಗತಿ ವಿದ್ಯಾರ್ಥಿ ಶ್ರೀವೋಮ್  ಕಶ್ಯಪ್  ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಶ್ವದ ಬಲಿಷ್ಠ ಸೈನಿಕ ಪಡೆಯ ಮುಖ್ಯಸ್ಥರಾಗಿರುವ ಜನರಲ್ ಬಿಪಿನ್ ರಾವತ್ ಅವರು ಕಳೆದ 35 ವರ್ಷದಿಂದ ಸಿನೆಮಾವನ್ನೇ ನೋಡಿಲ್ಲ ಎಂದು ಹೇಳಿದ್ದಾರೆ. ನನಗೆ 35 ವರ್ಷದಿಂದ ಸಿನೆಮಾ ನೋಡಲು ಮೂರು ಘಂಟೆ ಸಮಯ ದೊರಕ್ಕಿಲ್ಲ ಎಂಬ ಉತ್ತರವನ್ನು ನೀಡುವ ಮೂಲಕ ದೇಶಸೇವೆಗೆ ಅವರ ಕೊಡುಗೆ ಎಂಥಾದ್ದು ಎಂಬುದನ್ನು ತಿಳಿಸಿದ್ದಾರೆ.

ಅಲ್ಲದೇ ವಿದ್ಯಾರ್ಥಿಗಳಿಗೆ ಮಹತ್ವದ ಸಲಹೆಯನ್ನು ನೀಡಿರುವ ಅವರು ‘ಕಠಿಣ ಪರಿಶ್ರಮ ಪಡಿ. ಯಶಸ್ಸು ದೊರೆಯುತ್ತದೆ. ಜೀವನದಲ್ಲಿ ವಿಫಲರಾದವರನ್ನು ನೋಡದೇ ಮುನ್ನಡೆಯಿರಿ. ದೇಶಸೇವೆ ಮಾಡಲು ಮಕ್ಕಳು ಭವಿಷ್ಯದಲ್ಲಿ ಸೇನೆ ಸೇರಬೇಕು ಎಂದು ಹೇಳಿದರು.

ಭಾರತೀಯ ಸೇನೆಗೆ 1978 ಡಿಸೆಂಬರ್ 16ರಂದು  ಭಾರತೀಯ ಸೇನೆಗೆ ಸೇರ್ಪಡೆಯಾಗಿರುವ ರಾವತ್ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರ ದೇಶ ಸೇವೆ ಆರಂಭವಾಗಿ ಸುಮಾರು 40 ವರ್ಷಗಳಾಗಿದ್ದು, ಸುಮಾರು 35 ವರ್ಷದಿಂದ ಸಿನೆಮಾವನ್ನೇ ನೋಡಿಲ್ಲ. ನನಗೆ ಸಿನೆಮಾ ನೋಡಲು ಮೂರು ಘಂಟೆ ಸಮಯ ಸಿಕ್ಕಿಲ್ಲ ಎಂಬ ಅವರ ಮಾತು ಎಂಥವರಿಗೂ ದೇಶ ಸೇವಕನ ಕಾರ್ಯ ವೈಖರಿಗೆ ಹೆಮ್ಮೆ ಮೂಡಿಸದೇ ಇರದು. ಇಂಥವರಿಂದಲ್ಲವೇ ಭಾರತ  ರಕ್ಷಣಾ ವ್ಯವಸ್ಥೆ ಇಷ್ಟು ಬಲಿಷ್ಠವಾಗಿರುವುದು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search