• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈತರ ಹಿತಕ್ಕಾಗಿ ನುಡಿದಂತೆ ನಡೆದ ಮೋದಿ ಸರ್ಕಾರ, ಭತ್ತಕ್ಕೆ ಬೆಂಬಲ ಬೆಲೆ ಏರಿಸಲು ಸಂಪುಟ ಸಮಿತಿ ಒಪ್ಪಿಗೆ!

TNN Correspondent Posted On July 5, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದಲ್ಲಿ ರೈತರ ಹಿತಾಸಕ್ತಿಗಾಗಿ ಕೆಲಸಗಳು ಆಗುತ್ತಿವೆ. ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಫಸಲ್ ಬಿಮಾ ಯೋಜನೆ ಮೂಲಕ ರೈತರ ಬೆಳೆಗೆ ವಿಮೆ, ಕೃಷಿ ಸಿಂಚಾಯಿ ಯೋಜನೆ ಮೂಲಕ ನೀರಿನ ಸೌಲಭ್ಯ ಸೇರಿ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಅದರಲ್ಲೂ ಕಳೆದ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರು ಬೆಳೆದ ಬೆಳೆಗೆ ಒಂದೂವರೆ ಪಟ್ಟು ಹೆಚ್ಚು ಬೆಂಬಲ ಬೆಲೆ ನೀಡಲಾಗುವುದು ಎಂದು ಘೋಷಣೆ ಮಾಡಿತ್ತು, ಆ ಮೂಲಕ ನಾವು ರೈತರ ಪರ ಆಡಳಿತ ನೀಡುವವರು ಎಂಬುದನ್ನು ಸಾರಿತ್ತು.

ಈಗ ಅದರಂತೆಯೇ ಕೇಂದ್ರ ಸರ್ಕಾರ ನಡೆದುಕೊಂಡಿದ್ದು, ರೈತರು ಬೆಳೆಯುವ ಭತ್ತಕ್ಕೆ ನೀಡುತ್ತಿದ್ದ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಹೌದು, ಈ ಕುರಿತು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆ ನಡೆಸಿದ್ದು, ಮುಂಗಾರಿನಲ್ಲಿ ಬೆಳೆದ ಭತ್ತಕ್ಕೆ ನೀಡುತ್ತಿದ್ದ ಬೆಂಬಲ ಬೆಲೆ ಏರಿಕೆ ಮಾಡಿದೆ.

ಇದುವರೆಗೆ ಕೇಂದ್ರ ಸರ್ಕಾರ ಒಂದು ಕ್ವಿಂಟಾಲ್ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಯಾಗಿ 1550 ರೂಪಾಯಿ ನೀಡುತ್ತಿತ್ತು. ಆದರೆ ಇದು ಇನ್ನು ಮುಂದೆ 1800 ರೂಪಾಯಿ ಆಗಲಿದ್ದು, ಕೇಂದ್ರ ಸರ್ಕಾರ 250 ರೂಪಾಯಿ ಬೆಂಬಲ ಬೆಲೆ ನೀಡುತ್ತದೆ. ಇದರಿಂದ ಸರ್ಕಾರಕ್ಕೆ 38 ಸಾವಿರ ಕೋಟಿ ರೂಪಾಯಿ ಖರ್ಚಾಗಲಿದ್ದು, ರೈತರಿಗೆ ಅಪಾರ ಅನುಕೂಲವಾಗಲಿದೆ. ಶೀಘ್ರದಲ್ಲೇ ಸರ್ಕಾರ ರೈತರ ಬೆಳೆಗೆ ಒಂದೂವರೆ ಪಟ್ಟು ಬೆಂಬಲ ಬೆಲೆ ಘೋಷಿಸಲಿದೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search