• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಂಭಮೇಳಕ್ಕೆ ಅನುಕೂಲವಾಗಲು ಮಸೀದಿ ಕೆಡವಿ ಸೌಹಾರ್ದತೆ ಮೆರೆದ ಮುಸ್ಲಿಮರು!

TNN Correspondent Posted On July 5, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಧಾರ್ಮಿಕ ಅಸಹಿಷ್ಣುತೆ ಇದೆ, ಹಿಂದೂಗಳ ಧರ್ಮವನ್ನು ಹೇರುತ್ತಿದ್ದಾರೆ, ಅಲ್ಪಸಂಖ್ಯಾತರನ್ನು ಹೀನಾಯವಾಗಿ ಕಾಣುತ್ತಿದ್ದಾರೆ, ಅವರ ಮೇಲೆ ಹಲ್ಲೆಗಳಾಗುತ್ತಿವೆ ಎಂದು ಬೊಬ್ಬೆ ಹಾಕುವ ಹುಸಿ ಹೋರಾಟಗಾರರು ಭಾರತದಲ್ಲಿ ತುಂಬ ಜನ ಇದ್ದಾರೆ. ಆದರೆ ಹಿಂದೂಗಳು ಮಾತ್ರ ಇದುವರೆಗೆ ಶಾಂತಿಯುತವಾಗಿ ವರ್ತಿಸುವ ಮೂಲಕ ನಮ್ಮದು ಜಾತ್ಯತೀತ ರಾಷ್ಟ್ರ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು, ಹಿಂದೂಗಳ ಶಾಂತ ಮನೋಭಾವ ಮೆಚ್ಚಿ, ಸೌಹಾರ್ದತೆಗೆ ಸಹಕಾರ ನೀಡುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ಕುಂಭಮೇಳ ಅದ್ಧೂರಿಯಾಗಿ ನಡೆಯುವ ದಿಸೆಯಲ್ಲಿ ಹಲವು ಮುಸ್ಲಿಮರು ರಸ್ತೆ ಬದಿ ಇದ್ದ ವಿವಿಧ ಮಸೀದಿಗಳನ್ನು ನೆಲಸಮ ಮಾಡುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.

ಈ ಬಾರಿ ನಡೆಯುವ ಕುಂಭಮೇಳವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮವಾಗಿ ಬಿಂಬಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಈ ದಿಸೆಯಲ್ಲಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ರಸ್ತೆ ವಿಸ್ತರಣೆಗೆ ಸಹ ಸರ್ಕಾರ ಮುಂದಾಗಿದೆ, ಹಾಗಂತ ರಸ್ತೆ ಬದಿಯ ಮಸೀದಿ ಕೆಡವಬೇಕು ಎಂದು ಯೋಗಿ ಆದೇಶಿಸಿರಲಿಲ್ಲ.

ಆದರೆ ಕುಂಭಮೇಳಕ್ಕೆ ಸ್ವಯಂಪ್ರೇರಿತರಾಗಿ ಬೆಂಬಲ ಘೋಷಿಸಿರುವ ಮುಸ್ಲಿಮರು ರಸ್ತೆ ಬದಿಯ ಮಸೀದಿಗಳನ್ನು ನೆಲಸಮ ಮಾಡಲು ಮುಂದಾಗಿದ್ದಾರೆ. ನಾವು ಹಿಂದೂ ಧರ್ಮದ ಆಚರಣೆ, ನಂಬಿಕೆಗೆ ಬೆಲೆ ನೀಡುತ್ತೇವೆ. ಕುಂಭಮೇಳ ಯಶಸ್ವಿಯಾಗಿ ನಡೆಯುವ ದಿಸೆಯಲ್ಲಿ ರಸ್ತೆ ಬದಿಯ ಮಸೀದಿ ನೆಲಸಮ ಮಾಡುವ ಮೂಲಕ ಸಹಕಾರ ನೀಡುತ್ತಿದ್ದೇವೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಲಕ್ಷಾಂತರ ಹಿಂದೂಗಳು ಸೇರುವ ಕುಂಭಮೇಳಕ್ಕೆ ಮುಸ್ಲಿಮರು ಸಹಕಾರ ನೀಡಿ ಸೌಹಾರ್ದತೆಗೆ ಮಾದರಿಯಾಗಿದ್ದಾರೆ., ಆ ಮೂಲಕ ಭಾರತ ಜಾತ್ಯತೀತ ರಾಷ್ಟ್ರ ಎಂಬುದನ್ನು ಸಾರಿ ಸಾರಿ ಹೇಳಿದ್ದಾರೆ. ಧಾರ್ಮಿಕ ಅಸಹಿಷ್ಣುತೆ ಇದೆ ಎನ್ನುವವರು ಮೊದಲು ಇದನ್ನು ಅರ್ಥಮಾಡಿಕೊಳ್ಳಲಿ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search