• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೀಗೆ ಹತ್ಯೆಗೀಡಾಗುವ ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಯಾರೂ ಏಕೆ ಸೊಲ್ಲೆತ್ತುವುದಿಲ್ಲ?

TNN Correspondent Posted On July 5, 2018
0


0
Shares
  • Share On Facebook
  • Tweet It

ಭಾರತದಲ್ಲಿ ಇಬ್ಬಂದಿತನದಿಂದ ಕೂಡಿರುವ ರಾಜಕಾರಣಿಗಳು, ಬುದ್ಧಿಜೀವಿಗಳು,ಪ್ರಗತಿಪರರು, ಜೀವಪರರು ತುಂಬ ಜನರಿದ್ದಾರೆ. ನೀವೇ ಯೋಚನೆ ಮಾಡಿನೋಡಿ, ಕಠುವಾದಲ್ಲಿ ಮುಸ್ಲಿಂ ಬಾಲಕಿ ಮೇಲೆ ಅತ್ಯಾಚಾರವಾದರೆ, ಅಲ್ಲಿ ಹಿಂದೂ ಧರ್ಮವನ್ನೇ ಕಟಕಟೆಗೆ ತರುತ್ತಾರೆ. ಆದರೆ ಅದೇ, ಮಧ್ಯಪ್ರದೇಶದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವಾದರೆ ಆಗ ಮಗುಮ್ಮಾಗುತ್ತಾರೆ.

ಅಷ್ಟೇ ಅಲ್ಲ, ದೇಶದ ಯಾವ ಮೂಲೆಯಲ್ಲೇ ಅಲ್ಪಸಂಖ್ಯಾತರ ಮೇಲೆ ಯಾರೇ ಹಲ್ಲೆ ಮಾಡಿದರೂ, ಸೀದಾ ಹಿಂದೂಗಳನ್ನೇ ವಿರೋಧಿಸುತ್ತಾರೆ. ಆಗೋ ಅನಿಷ್ಠಕ್ಕೆಲ್ಲ ಹಿಂದೂಗಳೇ ಕಾರಣ ಎಂದು ಬೊಬ್ಬೆ ಹಾಕುತ್ತಾರೆ. ಬೇರೆ ಧರ್ಮೀಯರಿಗೆ ಭಾರತದಲ್ಲಿ ಅಸಹಿಷ್ಣುತೆ ಇದೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಎಂತಹ ವಿಪರ್ಯಾಸ ನೋಡಿ, ಕರ್ನಾಟಕ, ಪಂಜಾಬ್, ಉತ್ತರಪ್ರದೇಶ, ಪಶ್ಚಿಮಬಂಗಾಳ, ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಹಲವು ಕಾರ್ಯಕರ್ತರು ಹಾಗೂ ಮುಖಂಡರನ್ನು ಹತ್ಯೆ ಮಾಡುತ್ತಿದ್ದರೂ ಯಾರೂ ಸೊಲ್ಲೆತ್ತುತ್ತಿಲ್ಲ. ಆ ಮೂಲಕ ಇವರು ಇಬ್ಬಂದಿತನ ಪ್ರದರ್ಶಿಸುತ್ತಾರೆ.

ಹೌದು, ಉತ್ತರ ಪ್ರದೇಶದ ಫಿರೋಜಾಬಾದಿನಲ್ಲಿ ಬುಧವಾರ ಆರೆಸ್ಸೆಸ್ ಕಾರ್ಯಕರ್ತರೊಬ್ಬರನ್ನು ಕೊಲೆ ಮಾಡಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 34 ವರ್ಷದ ಸಂದೀಪ್ ಶರ್ಮಾ ಅವರನ್ನು ಹತ್ಯೆ ಮಾಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಕೊನೆಯುಸಿರೆಳೆದಿದ್ದರು.

ಹೀಗೆ ಯಾವ ತಪ್ಪೂ ಮಾಡದ, ಬರೀ ಹಿಂದೂ ಧರ್ಮದ ಏಳಿಗೆಗಾಗಿ ದುಡಿಯುತ್ತಿರುವ ಆರೆಸ್ಸೆಸ್ ಕಾರ್ಯಕರ್ತರೊಬ್ಬರನ್ನು ಹತ್ಯೆ ಮಾಡಲಾಗಿದೆ. ಆದರೆ ಈ ಕುರಿತು ಯಾರೂ ಮಾತನಾಡುವುದಿಲ್ಲ, ಯಾವ ಮಾಧ್ಯಮಗಳೂ ಸುದೀರ್ಘವಾಗಿ ವರದಿ ಮಾಡುವುದಿಲ್ಲ. ಹೇಳಿ ಇಂತಹ ಇಬ್ಬಂದಿತನವೇಕೆ?

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search