• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕುಮಾರಸ್ವಾಮಿಯವರೇ, 11 ವರ್ಷದ ಹಿಂದೆ ಈ ಮೈಸೂರು ಮಹಿಳೆಗೆ ನೀವು ನೀಡಿದ ಭರವಸೆ ನೆನಪಿದೆಯಾ?

TNN Correspondent Posted On July 5, 2018


  • Share On Facebook
  • Tweet It

ಹಿಂದೆ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ ಸ್ಥಾನಗಳನ್ನು ಪಡೆದರೂ, ಅದರ ಮುಖ್ಯಸ್ಥರೊಬ್ಬರು ಪ್ರಧಾನಿಯಾಗಬಹುದು ಎಂಬುದನ್ನು ಎಚ್.ಡಿ.ದೇವೇಗೌಡರು ತೋರಿಸಿಕೊಟ್ಟಿದ್ದರು. ಅದೇ ರೀತಿ, ತಂದೆಗೆ ತಕ್ಕ ಮಗನಂತೆ ವರ್ತಿಸಿದ ಕುಮಾರಸ್ವಾಮಿಯವರು ಅದೃಷ್ಟ ಹಾಗೂ ಕಾಂಗ್ರೆಸ್ಸಿನ ಬಲದಿಂದ ಜೆಡಿಎಸ್ ಕೇವಲ 38 ವಿಧಾನಸಭೆ ಸ್ಥಾನ ಪಡೆದರೂ ರಾಜ್ಯದಲ್ಲಿ ಚುಕ್ಕಾಣಿ ಹಿಡಿದಿದ್ದಾರೆ.

ಆದರೆ ಪ್ರಜಾಪ್ರಭುತ್ವದಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರಿಗೆ ಈ ಹಿಂದೆಯೂ ಮುಖ್ಯಮಂತ್ರಿ ಆಗಿದ್ದಾಗ ನೀಡಿದ ಹಲವು ಭರವಸೆಗಳನ್ನು ನಾವೇ ನೆನಪಿಸಬೇಕಾಗಿರುವುದು ದುರಂತ. ಈಗ ಅಧಿಕಾರದಲ್ಲಿರುವುದರಿಂದ, ಇನ್ನಾದರೂ ಅವರು ನೀಡಿದ ಭರವಸೆ ಈಡೇರಿಸುತ್ತಾರಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಹೌದು, 11 ವರ್ಷದ ಹಿಂದೆ, ಅಂದರೆ 2007ರಲ್ಲಿ ಮೈಸೂರಿನ ಮೇದಾರ್ ಬ್ಲಾಕ್ ಗೆ ಕುಮಾರಸ್ವಾಮಿ ತೆರಳಿದ್ದರು. ಈ ವೇಳೆ ಒಂದು ಪುಟ್ಟ ಮನೆಯಲ್ಲಿ 12 ಜನ ವಾಸಿಸುತ್ತಿರುವುದನ್ನು ಕಂಡಿದ್ದ ಕುಮಾರಸ್ವಾಮಿ, ಅವರ ಪರಿಸ್ಥಿತಿ ನೋಡಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಇದರಿಂದ ಮನೆಯೊಡತಿ ಲಕ್ಷ್ಮಮ್ಮ ಖುಷಿಯಾಗಿದ್ದರು. ಆದರೆ ಭರವಸೆ ನೀಡಿ 11 ವರ್ಷವಾದರೂ ಇದುವರೆಗೆ ಮನೆ ನಿರ್ಮಿಸಿಕೊಟ್ಟಿಲ್ಲ.

ನಾವು ಪುಟ್ಟ ಮನೆಯಲ್ಲಿ 12 ಜನ ವಾಸಿಸುತ್ತಿದ್ದು, ಮನೆಯಿಲ್ಲದೆ ಪರದಾಡುತ್ತಿದ್ದೇವೆ. 2007ರಲ್ಲಿ ಕುಮಾರಸ್ವಾಮಿಯವರು ನಮ್ಮ ಮನೆಗೆ ಬಂದು, ಮನೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ಇದರಿಂದ ನಾವು ನಮ್ಮ ಕಷ್ಟವೆಲ್ಲ ನೀಗಿತು ಎಂದು ಖುಷಿಪಟ್ಟಿದ್ದೆವು. ಆದರೆ ಇದುವರೆಗೂ ಮನೆ ನಿರ್ಮಿಸಿಕೊಟ್ಟಿಲ್ಲ ಎಂದು ಅಳಲು ತೋಡಿಕೊಳ್ಳುತ್ತಾರೆ ಲಕ್ಷ್ಮಮ್ಮ.

ಕುಮಾರಸ್ವಾಮಿಯವರೇ, 2006ರಲ್ಲಿ ನಿಮ್ಮ ಪಕ್ಷ ಬಹುಮತ ಪಡೆಯದಿದ್ದರೂ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದಿರಿ. ಯಡಿಯೂರಪ್ಪರಿಗೆ ಕೊಟ್ಟ ಮಾತಿನಂತೆ ಅಧಿಕಾರ ನೀಡದೆ ಜನರಿಂದ ತಿರಸ್ಕಾರಕ್ಕೀಡಾದಿರಿ. ಈಗಲೂ ಅದೃಷ್ಟದಿಂದಲೇ ಮುಖ್ಯಮಂತ್ರಿಯಾಗಿದ್ದೀರಿ, ಇನ್ನಾದರೂ ಜನರಿಗೆ ನೀಡಿರುವ ಭರವಸೆ ಈಡೇರಿಸಿ. ಇಲ್ಲವಾದರೆ ಮತ್ತೊಂದು ದಶಕ ನೀವು ಅಧಿಕಾರವಿಲ್ಲದೆ ಸುಮ್ಮನೆ ಕೂರಬೇಕಾದೀತು, ಎಚ್ಚರ!

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search